`ಗಾ. ಪಂ. ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಸೋಲಾರ್ ದೀಪ ಅಳವಡಿಸಿ ವಿದ್ಯುತ್ ಬಳಕೆ ಪ್ರಮಾಣ ಕಡಿಮೆ ಮಾಡಲಾಗಿದೆ. ಗ್ರಾಮಗಳ ಸ್ವಚ್ಛತೆ ಕಾಯ್ದುಕೊಳ್ಳಲು ಕಸ ತ್ಯಾಜ್ಯ ವಿಲೇವಾರಿಗೆ ಗುತ್ತಿಗೆ ನೀಡಲಾಗಿದೆ.
ವಿಲೇವಾರಿ ತ್ಯಾಜ್ಯಗಳನ್ನು ಶೇಖರಣಾ ಘಟದಲ್ಲಿ ಪ್ರತ್ಯೇಕಿಸಿ ಎರೆಹುಳು ಗೊಬ್ಬರ ತಯಾರಿಸಿ ಮಾರಾಟ ಮಾಡಿ ಅದರಿಂದ ಬಂದ ಹಣವನ್ನು ಪಂಚಾಯಿತಿಗೆ ಬಳಸಿಕೊಳ್ಳಲಾಗುತ್ತಿದೆ. ಸಾಕ್ಷರತೆ, ಸ್ತ್ರಿ ಶಕ್ತಿ ಗುಂಪುಗಳ ರಚನೆ, ಅಂಗನವಾಡಿ ಕೇಂದ್ರಗಳ ನಿರ್ವಹಣೆ, ಪರಿಸರ ಜಾಗೃತಿ ಮಾರಕ ರೋಗಗಳ ಬಗ್ಗೆ ಸಭೆ, ಕೃಷಿ ಮತ್ತು ಪಶುಪಾಲನೆ ಬಗ್ಗೆ ಅರಿವು ನೀಡಲಾಗುತ್ತಿದೆ~ ಎಂದರು.
ಕೇಂದ್ರ ಗ್ರಾಮೀಣಾಭಿವೃದ್ಧಿ ಸಮನ್ವಯಾಧಿಕಾರಿ ಡಾ.ಪಿ.ಶಿವರಾಮ್ ಮಾತನಾಡಿದರು. ಜಿ. ಪಂ. ಉಪ ಕಾರ್ಯದರ್ಶಿ ಡಿ.ಎಸ್.ಮುನಿರಾಜು, ಗ್ರಾ.ಪಂ. ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷ ಪಿಳ್ಳಪ್ಪ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಹಾಗೂ ಗ್ರಾಮ ಪಂಚಾಯ್ತಿ ಸದಸ್ಯರು ಇದ್ದರು.