ಸಹ ಕಾರ್ಮಿಕರು, ಆಂಬುಲೆನ್ಸ್ ಹಾಗೂ ಪೊಲೀಸರಿಗೆ ವಿಷಯ ತಿಳಿಸಿದ್ದರು. ಸ್ಥಳಕ್ಕೆ ಬಂದಿದ್ದ ಆಂಬುಲೆನ್ಸ್ ಸಿಬ್ಬಂದಿ, ಮಂಜುನಾಥ್ ಮೃತಪಟ್ಟಿರುವುದಾಗಿ ಹೇಳಿದ್ದರು. ಸ್ಥಳದಲ್ಲಿದ್ದ ಕೆಲ ಕಾರ್ಮಿಕರು, ‘ಅಸ್ವಸ್ಥಗೊಂಡ ಕಾರ್ಮಿಕನಿಗೆ ವೇಗಾ ಸಿಟಿ ಅಧಿಕಾರಿಗಳು, ಸೂಕ್ತ ಸಮಯದಲ್ಲಿ ಚಿಕಿತ್ಸೆ ಕೊಡಿಸಲಿಲ್ಲ. ಅವರ ನಿರ್ಲಕ್ಷ್ಯದಿಂದ ಈ ಸಾವು ಸಂಭವಿಸಿದೆ’ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.