‘ಅಪಘಾತದಲ್ಲಿ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಆಗ ಚಾಲಕನ ಪಕ್ಕದ ಸೀಟಿನಲ್ಲೇ ಕುಳಿತು ನಿದ್ರಿಸುತ್ತಿದ್ದ ಸುರೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂದಿನ ಸೀಟಿನಲ್ಲಿ ಮಲಗಿದ್ದ ಜಯಣ್ಣ, ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶ್ರೀನಿವಾಸ್ ಅವರ ಕುತ್ತಿಗೆ ಮೂಳೆ ಮುರಿದಿದ್ದು, ಕರ್ನೂಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ವಿಭಜಕಕ್ಕೆ ಡಿಕ್ಕಿಯಾಗುತ್ತಿದ್ದಂತೆಯೇ ಹೊರಗೆ ಜಿಗಿದ ಚಾಲಕ, ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ತೇಲಸಂಗ ಗ್ರಾಮದ ಸುರೇಶ್, 2011ರಲ್ಲಿ ಇಲಾಖೆ ಸೇರಿದ್ದರು. ಮೊದಲು ಸಂಪಿಗೇಹಳ್ಳಿ ಠಾಣೆಯಲ್ಲಿ ಕೆಲಸ ಮಾಡಿದ್ದ ಅವರು, 2 ವರ್ಷಗಳ ಹಿಂದೆ ಎಚ್ಎಎಲ್ ಠಾಣೆಗೆ ವರ್ಗವಾಗಿದ್ದರು. ಮೃತದೇಹವನ್ನು ಗ್ರಾಮಕ್ಕೆ ಕಳುಹಿಸಲಾಗಿದ್ದು, ಗುರುವಾರ ಅಂತ್ಯಕ್ರಿಯೆ ನಡೆಯಲಿದೆ. ಜಯಣ್ಣ ಅವರ ಶವವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.