ವಿಜಯನಗರ ಬಳಿಯ ಪಟ್ಟೇಗಾರಪಾಳ್ಯ ಮುಖ್ಯರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ಬೈಕ್ ಡಿಕ್ಕಿ ಹೊಡೆದು ನಂದೀಶ್ಕುಮಾರ್ (21) ಎಂಬುವರು ಮೃತಪಟ್ಟಿದ್ದಾರೆ.
ವಿಜಯನಗರ ಸಮೀಪದ ಸರಸ್ವತಿನಗರ ನಿವಾಸಿಯಾದ ನಂದೀಶ್ಕುಮಾರ್, ಔಷಧ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಅವರು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಪಟ್ಟೇಗಾರಪಾಳ್ಯ ಮುಖ್ಯರಸ್ತೆಯಲ್ಲಿ ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆಯಿತು. ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಅಸ್ವಸ್ಥಗೊಂಡ