ಬೆಂಗಳೂರು: ತಿರುಮೇನಹಳ್ಳಿಯ ಜನರಿಗೆ ಅನುಕೂಲವಾಗಲು ಗ್ರಾಮದಲ್ಲಿಯೇ ಹೊಸದೊಂದು ನ್ಯಾಯಬೆಲೆ ಅಂಗಡಿಯನ್ನು ತೆರೆಯಲಾಗಿದೆ.
ನ್ಯಾಯಬೆಲೆ ಅಂಗಡಿ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಕೆಂಪರಾಜ್, ‘ನಲವತ್ತು ವರ್ಷಗಳಿಂದ ಈ ಗ್ರಾಮದ ಜನರು ಪಡಿತರ ಪಡೆಯಲು ನಾಲ್ಕೈದು ಕಿ.ಮೀ. ದೂರ ಕ್ರಮಿಸಬೇಕಿತ್ತು. ಮೂನ್ನೂರಕ್ಕೂ ಹೆಚ್ಚು ಮನೆಗಳಿರುವ ಈ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಬಹಳ ವರ್ಷಗಳಿಂದ ಸ್ಥಳೀಯರು ಮನವಿ ಮಾಡುತ್ತಿದ್ದರು’ ಎಂದು ಹೇಳಿದರು.