<p><strong>ಬೆಂಗಳೂರು: </strong>ಭಾರತ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆಯ (ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ) ಸಾಮಾಜಿಕ ಹೊರಗುಳಿಯುವಿಕೆ ಮತ್ತು ಒಳಗೊಳ್ಳುವಿಕೆ ನೀತಿಯ ಅಧ್ಯಯನ ಕೇಂದ್ರ ಹಾಗೂ ಅಲೆಮಾರಿ ಬುಡಕಟ್ಟು ಮಹಾಸಭಾದ ಜಂಟಿ ಆಶ್ರಯದಲ್ಲಿ ಈ ತಿಂಗಳ 10ರಂದು `ಅಲೆಮಾರಿ ಬುಡಕಟ್ಟುಗಳಿಗೆ ಸಾಮಾಜಿಕ ನ್ಯಾಯ~ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ.<br /> <br /> `ಕರ್ನಾಟಕದಲ್ಲಿ 35ಕ್ಕೂ ಹೆಚ್ಚು ಅಲೆಮಾರಿ ಬುಡಕಟ್ಟುಗಳಿವೆ. ಈ ಬುಡಕಟ್ಟುಗಳು ಅನಕ್ಷರತೆ, ಬಡತನ, ವೇಶ್ಯಾವಾಟಿಕೆ, ಭಿಕ್ಷಾಟನೆ, ಮೂಢನಂಬಿಕೆ, ಕ್ರೌರ್ಯಗಳಿಗೆ ಸಿಲುಕಿ ನರಳುತ್ತಿರುವ ಈ ಬುಡಕಟ್ಟು ಜನರಿಗೆ ವಸತಿ, ಶಿಕ್ಷಣ, ಆಹಾರ ಭದ್ರತೆ ಮತ್ತು ಸಾಮಾಜಿಕ ನ್ಯಾಯ ಮರೀಚಿಕೆಯಾಗಿದೆ. ಶೋಚನೀಯ ಸ್ಥಿತಿಯಲ್ಲಿರುವ ಅಲೆಮಾರಿ ಬುಡಕಟ್ಟುಗಳಿಗೆ ಸಾಂವಿಧಾನಿಕ ಮೀಸಲಾತಿಯ ಸೌಲಭ್ಯಗಳು ಸರಿಯಾಗಿ ಸಿಕ್ಕಿಲ್ಲ. ಈ ಬಗ್ಗೆ ಚರ್ಚಿಸಲಾಗುವುದು~ ಎಂದು ಮಹಾಸಭಾ ಅಧ್ಯಕ್ಷ ಬಾಲಗುರುಮೂರ್ತಿ ತಿಳಿಸಿದ್ದಾರೆ.<br /> <br /> `ಕಾನೂನು ಶಾಲೆಯ ಅಂತರರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ನಡೆಯುವ ವಿಚಾರ ಸಂಕಿರಣವನ್ನು ಹೈಕೋರ್ಟ್ ನ್ಯಾಯಮೂರ್ತಿ ನಾಗಮೋಹನದಾಸ್ ಉದ್ಘಾಟಿಸುವರು. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಸಿ. ಎಸ್. ದ್ವಾರಕಾನಾಥ್ ಅಧ್ಯಕ್ಷತೆ ವಹಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಭಾರತ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆಯ (ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ) ಸಾಮಾಜಿಕ ಹೊರಗುಳಿಯುವಿಕೆ ಮತ್ತು ಒಳಗೊಳ್ಳುವಿಕೆ ನೀತಿಯ ಅಧ್ಯಯನ ಕೇಂದ್ರ ಹಾಗೂ ಅಲೆಮಾರಿ ಬುಡಕಟ್ಟು ಮಹಾಸಭಾದ ಜಂಟಿ ಆಶ್ರಯದಲ್ಲಿ ಈ ತಿಂಗಳ 10ರಂದು `ಅಲೆಮಾರಿ ಬುಡಕಟ್ಟುಗಳಿಗೆ ಸಾಮಾಜಿಕ ನ್ಯಾಯ~ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ.<br /> <br /> `ಕರ್ನಾಟಕದಲ್ಲಿ 35ಕ್ಕೂ ಹೆಚ್ಚು ಅಲೆಮಾರಿ ಬುಡಕಟ್ಟುಗಳಿವೆ. ಈ ಬುಡಕಟ್ಟುಗಳು ಅನಕ್ಷರತೆ, ಬಡತನ, ವೇಶ್ಯಾವಾಟಿಕೆ, ಭಿಕ್ಷಾಟನೆ, ಮೂಢನಂಬಿಕೆ, ಕ್ರೌರ್ಯಗಳಿಗೆ ಸಿಲುಕಿ ನರಳುತ್ತಿರುವ ಈ ಬುಡಕಟ್ಟು ಜನರಿಗೆ ವಸತಿ, ಶಿಕ್ಷಣ, ಆಹಾರ ಭದ್ರತೆ ಮತ್ತು ಸಾಮಾಜಿಕ ನ್ಯಾಯ ಮರೀಚಿಕೆಯಾಗಿದೆ. ಶೋಚನೀಯ ಸ್ಥಿತಿಯಲ್ಲಿರುವ ಅಲೆಮಾರಿ ಬುಡಕಟ್ಟುಗಳಿಗೆ ಸಾಂವಿಧಾನಿಕ ಮೀಸಲಾತಿಯ ಸೌಲಭ್ಯಗಳು ಸರಿಯಾಗಿ ಸಿಕ್ಕಿಲ್ಲ. ಈ ಬಗ್ಗೆ ಚರ್ಚಿಸಲಾಗುವುದು~ ಎಂದು ಮಹಾಸಭಾ ಅಧ್ಯಕ್ಷ ಬಾಲಗುರುಮೂರ್ತಿ ತಿಳಿಸಿದ್ದಾರೆ.<br /> <br /> `ಕಾನೂನು ಶಾಲೆಯ ಅಂತರರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ನಡೆಯುವ ವಿಚಾರ ಸಂಕಿರಣವನ್ನು ಹೈಕೋರ್ಟ್ ನ್ಯಾಯಮೂರ್ತಿ ನಾಗಮೋಹನದಾಸ್ ಉದ್ಘಾಟಿಸುವರು. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಸಿ. ಎಸ್. ದ್ವಾರಕಾನಾಥ್ ಅಧ್ಯಕ್ಷತೆ ವಹಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>