ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಠದ ಶಾಂತವೀರ ಸ್ವಾಮೀಜಿ, ‘ಇದೇ 14ರಂದುಬೆಳಿಗ್ಗೆ 10 ಗಂಟೆಗೆ ರೇಣುಕ, ಬಸವ ಮತ್ತು ಅಕ್ಕಮಹಾದೇವಿ ಜಯಂತ್ಯುತ್ಸವ ನಡೆಯಲಿದೆ. ಸಂಜೆ 5 ಗಂಟೆಗೆ ಅಲ್ಲಮಶ್ರೀ ಪ್ರಶಸ್ತಿಪ್ರದಾನ ಸಮಾರಂಭ ನಡೆಯಲಿದೆ. 15ರಂದು ಬೆಳಿಗ್ಗೆ 10 ಗಂಟೆಗೆ ಬಿಹಾರ್ ಹಿಂದಿ ಸಾಹಿತ್ಯ ಸಮ್ಮೇಳನ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ’ ಎಂದು ತಿಳಿಸಿದರು.