<p><strong>ಬೆಂಗಳೂರು: </strong>ನಗರದ `ಎನ್ಟಿಐ ಎಂಪ್ಲಾಯಿಸ್ ಕೋ ಆಪರೇಟಿವ್ ಹೌಸಿಂಗ್ ಸೊಸೈಟಿಯು ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಎಸಗಿರುವುದು ಸಾಬೀತಾದರೆ ಆ ಸೊಸೈಟಿಯನ್ನು ಸೂಪರ್ಸೀಡ್ ಮಾಡಲಾಗುವುದು~ ಎಂದು ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ವಿಧಾನಸಭೆಯಲ್ಲಿ ತಿಳಿಸಿದರು.<br /> <br /> ಕಾಂಗ್ರೆಸ್ನ ಕೃಷ್ಣಬೈರೇಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ಸೊಸೈಟಿಯ ಸದಸ್ಯರಲ್ಲದವರಿಗೆ ನಿವೇಶನಗಳನ್ನು ಮಾರಾಟ ಮಾಡುವ ಮೂಲಕ ತಪ್ಪು ಮಾಡಿದ್ದರೆ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.<br /> <br /> ಇದಕ್ಕೂ ಮುನ್ನ ಮಾತನಾಡಿದ ಕೃಷ್ಣಬೈರೇಗೌಡ, ಎನ್ಟಿಐ ಸೊಸೈಟಿಗೆ ಬಡಾವಣೆ ನಿಮಾರ್ಣಕ್ಕಾಗಿ ಹೆಬ್ಬಾಳ ಸಮೀಪ 1982ರಲ್ಲಿ 210 ಎಕರೆ ಭೂಮಿಯನ್ನು ಸರ್ಕಾರ ನೀಡಿತ್ತು. ಆದರೆ 25 ವರ್ಷ ಆದರೂ ಅರ್ಹರಿಗೆ ನಿವೇಶನ ದೊರೆತಿಲ್ಲ ಎಂದು ಟೀಕಿಸಿದರು.<br /> <br /> `ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದ ಕೆಲವರು ನಿಧನರಾಗಿದ್ದಾರೆ. ಹಲವರು ಮಾನಸಿಕವಾಗಿ ಅಸ್ವಸ್ಥರಾಗಿದ್ದಾರೆ. 180 ನಿವೇಶನಗಳನ್ನು ಸದಸ್ಯರಲ್ಲದವರಿಗೆ ಮಾರಾಟ ಮಾಡಲಾಗಿದೆ. ಅರ್ಹ ಫಲಾನುಭವಿಗಳಿಗೆ ನಿವೇಶನ ಸಿಕ್ಕಿಲ್ಲ. ಅವರು ನಿತ್ಯ ನನ್ನ ಬಳಿ ಬಂದು ಅಳಲು ತೋಡಿಕೊಳ್ಳುತ್ತಾರೆ~ ಎಂದು ಸಮಸ್ಯೆಯ ಆಳವನ್ನು ಬಿಡಿಸಿಟ್ಟರು.<br /> <br /> ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮಂಜೂರಾತಿ ನೀಡಿದ ನಂತರ ಸೊಸೈಟಿಯು ಸದಸ್ಯರಿಗೆ ಮಾತ್ರ ನಿವೇಶನ ನೀಡಿದೆಯೋ ಅಥವಾ ಸದಸ್ಯರಲ್ಲದವರಿಗೆ ನೀಡಿದೆಯೋ ಎಂಬ ಪ್ರಶ್ನೆಗೆ ಸರ್ಕಾರ ಸ್ಪಷ್ಟ ಉತ್ತರ ನೀಡಲಿಲ್ಲ.<br /> <br /> ಕೃಷ್ಣಬೈರೇಗೌಡ ಅವರ ಆರೋಪಗಳಿಗೆ ಧ್ವನಿಗೂಡಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಿವೇಶನ ಹಂಚಿಕೆಯಲ್ಲಿನ ಲೋಪಗಳ ಬಗ್ಗೆ ತನಿಖೆ ಆಗಬೇಕು. ಬದುಕಿರುವ ಅರ್ಹ ಸದಸ್ಯರಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು.</p>.<p><strong>ಸಹಕಾರ ಸಚಿವರಿಗೆ ನೀರು ಕುಡಿಸಿದ ಶಾಸಕ!</strong></p>.<p>25 ವರ್ಷಗಳಿಂದ ನಿವೇಶನ ಸಿಕ್ಕಿಲ್ಲ ಎಂದು ಶಾಸಕ ಕೃಷ್ಣಬೈರೇಗೌಡ ಹೇಳುತ್ತಿದ್ದಂತೆಯೇ ಆಕ್ರೋಶಗೊಂಡ ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ, 25 ವರ್ಷದಿಂದ ಏನು ಮಾಡುತ್ತಿದ್ದರು... ಯಾವ ಸರ್ಕಾರ ಇತ್ತು ಎಂದು ಏರಿದ ಧ್ವನಿಯಲ್ಲಿ ಪ್ರಶ್ನಿಸಿದರು.<br /> <br /> ಇದರಿಂದ ಕೆರಳಿದ ಕೃಷ್ಣಬೈರೇಗೌಡ, `ಸಚಿವರು ಈ ರೀತಿ ಮಾತನಾಡುವುದು ಸರಿಯಲ್ಲ. ನಾನು ಸಚಿವರು ಅಥವಾ ಸರ್ಕಾರದ ವಿರುದ್ಧ ಆರೋಪ ಮಾಡಿಲ್ಲ. ಯಾರು ಮಾಡಿದರು, ಮಾಡಲಿಲ್ಲ ಎಂಬುದು ಮುಖ್ಯವಲ್ಲ. ಸಮಸ್ಯೆಗೆ ಪರಿಹಾರ ಸಿಗಬೇಕು. ನಾನು ಸುಮ್ಮನೇ ಆರೋಪ ಮಾಡುವ ವ್ಯಕ್ತಿಯಲ್ಲ, ಅಂತಹ ಹಿನ್ನೆಲೆಯಿಂದ ಬಂದಿಲ್ಲ. ನಾನು ವಯಸ್ಸಿನಲ್ಲಿ ಚಿಕ್ಕವನಿರಬಹುದು. <br /> <br /> ಆದರೆ ನಾನು ಪ್ರಸ್ತಾಪಿಸುವ ವಿಷಯ ಎಷ್ಟು ಗಂಭೀರವಾಗಿದೆ ಎಂಬುದನ್ನು ಗಮನಿಸಬೇಕು. ವಸ್ತುಸ್ಥಿತಿಯನ್ನು ಅರ್ಥ ಮಾಡಿಕೊಳ್ಳದೆ ಸಚಿವರು ಈ ವಿಷಯಕ್ಕೆ ರಾಜಕೀಯ ಬಣ್ಣ ಕಟ್ಟುವುದು ಸರಿಯಲ್ಲ~ ಎಂದು ತರಾಟೆಗೆ ತೆಗೆದುಕೊಂಡರು.<br /> <br /> `ಟಿ.ವಿ.ಯಲ್ಲಿ ವಾದ ಮಾಡುವ ಹಾಗೆ ಸದನದಲ್ಲಿ ವಾದಿಸಲು ಬರಬೇಡಿ. ಈಚೆಗಷ್ಟೇ ಸಚಿವರಾಗಿದ್ದೀರಿ. ಆಗಲೇ ಈ ರೀತಿ ಆಡಿದರೆ ಹೇಗೆ~ ಎಂದು ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದರು. ಆಗ ಮಧ್ಯಪ್ರವೇಶಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, `ಸಚಿವರು ಆವೇಶಕ್ಕೆ ಒಳಗಾಗುವುದು ಸರಿಯಲ್ಲ. ಸದಸ್ಯರು ಎತ್ತಿರುವ ವಿಷಯದ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಿ~ ಎಂದು ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ `ಎನ್ಟಿಐ ಎಂಪ್ಲಾಯಿಸ್ ಕೋ ಆಪರೇಟಿವ್ ಹೌಸಿಂಗ್ ಸೊಸೈಟಿಯು ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಎಸಗಿರುವುದು ಸಾಬೀತಾದರೆ ಆ ಸೊಸೈಟಿಯನ್ನು ಸೂಪರ್ಸೀಡ್ ಮಾಡಲಾಗುವುದು~ ಎಂದು ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ವಿಧಾನಸಭೆಯಲ್ಲಿ ತಿಳಿಸಿದರು.<br /> <br /> ಕಾಂಗ್ರೆಸ್ನ ಕೃಷ್ಣಬೈರೇಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ಸೊಸೈಟಿಯ ಸದಸ್ಯರಲ್ಲದವರಿಗೆ ನಿವೇಶನಗಳನ್ನು ಮಾರಾಟ ಮಾಡುವ ಮೂಲಕ ತಪ್ಪು ಮಾಡಿದ್ದರೆ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.<br /> <br /> ಇದಕ್ಕೂ ಮುನ್ನ ಮಾತನಾಡಿದ ಕೃಷ್ಣಬೈರೇಗೌಡ, ಎನ್ಟಿಐ ಸೊಸೈಟಿಗೆ ಬಡಾವಣೆ ನಿಮಾರ್ಣಕ್ಕಾಗಿ ಹೆಬ್ಬಾಳ ಸಮೀಪ 1982ರಲ್ಲಿ 210 ಎಕರೆ ಭೂಮಿಯನ್ನು ಸರ್ಕಾರ ನೀಡಿತ್ತು. ಆದರೆ 25 ವರ್ಷ ಆದರೂ ಅರ್ಹರಿಗೆ ನಿವೇಶನ ದೊರೆತಿಲ್ಲ ಎಂದು ಟೀಕಿಸಿದರು.<br /> <br /> `ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದ ಕೆಲವರು ನಿಧನರಾಗಿದ್ದಾರೆ. ಹಲವರು ಮಾನಸಿಕವಾಗಿ ಅಸ್ವಸ್ಥರಾಗಿದ್ದಾರೆ. 180 ನಿವೇಶನಗಳನ್ನು ಸದಸ್ಯರಲ್ಲದವರಿಗೆ ಮಾರಾಟ ಮಾಡಲಾಗಿದೆ. ಅರ್ಹ ಫಲಾನುಭವಿಗಳಿಗೆ ನಿವೇಶನ ಸಿಕ್ಕಿಲ್ಲ. ಅವರು ನಿತ್ಯ ನನ್ನ ಬಳಿ ಬಂದು ಅಳಲು ತೋಡಿಕೊಳ್ಳುತ್ತಾರೆ~ ಎಂದು ಸಮಸ್ಯೆಯ ಆಳವನ್ನು ಬಿಡಿಸಿಟ್ಟರು.<br /> <br /> ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮಂಜೂರಾತಿ ನೀಡಿದ ನಂತರ ಸೊಸೈಟಿಯು ಸದಸ್ಯರಿಗೆ ಮಾತ್ರ ನಿವೇಶನ ನೀಡಿದೆಯೋ ಅಥವಾ ಸದಸ್ಯರಲ್ಲದವರಿಗೆ ನೀಡಿದೆಯೋ ಎಂಬ ಪ್ರಶ್ನೆಗೆ ಸರ್ಕಾರ ಸ್ಪಷ್ಟ ಉತ್ತರ ನೀಡಲಿಲ್ಲ.<br /> <br /> ಕೃಷ್ಣಬೈರೇಗೌಡ ಅವರ ಆರೋಪಗಳಿಗೆ ಧ್ವನಿಗೂಡಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಿವೇಶನ ಹಂಚಿಕೆಯಲ್ಲಿನ ಲೋಪಗಳ ಬಗ್ಗೆ ತನಿಖೆ ಆಗಬೇಕು. ಬದುಕಿರುವ ಅರ್ಹ ಸದಸ್ಯರಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು.</p>.<p><strong>ಸಹಕಾರ ಸಚಿವರಿಗೆ ನೀರು ಕುಡಿಸಿದ ಶಾಸಕ!</strong></p>.<p>25 ವರ್ಷಗಳಿಂದ ನಿವೇಶನ ಸಿಕ್ಕಿಲ್ಲ ಎಂದು ಶಾಸಕ ಕೃಷ್ಣಬೈರೇಗೌಡ ಹೇಳುತ್ತಿದ್ದಂತೆಯೇ ಆಕ್ರೋಶಗೊಂಡ ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ, 25 ವರ್ಷದಿಂದ ಏನು ಮಾಡುತ್ತಿದ್ದರು... ಯಾವ ಸರ್ಕಾರ ಇತ್ತು ಎಂದು ಏರಿದ ಧ್ವನಿಯಲ್ಲಿ ಪ್ರಶ್ನಿಸಿದರು.<br /> <br /> ಇದರಿಂದ ಕೆರಳಿದ ಕೃಷ್ಣಬೈರೇಗೌಡ, `ಸಚಿವರು ಈ ರೀತಿ ಮಾತನಾಡುವುದು ಸರಿಯಲ್ಲ. ನಾನು ಸಚಿವರು ಅಥವಾ ಸರ್ಕಾರದ ವಿರುದ್ಧ ಆರೋಪ ಮಾಡಿಲ್ಲ. ಯಾರು ಮಾಡಿದರು, ಮಾಡಲಿಲ್ಲ ಎಂಬುದು ಮುಖ್ಯವಲ್ಲ. ಸಮಸ್ಯೆಗೆ ಪರಿಹಾರ ಸಿಗಬೇಕು. ನಾನು ಸುಮ್ಮನೇ ಆರೋಪ ಮಾಡುವ ವ್ಯಕ್ತಿಯಲ್ಲ, ಅಂತಹ ಹಿನ್ನೆಲೆಯಿಂದ ಬಂದಿಲ್ಲ. ನಾನು ವಯಸ್ಸಿನಲ್ಲಿ ಚಿಕ್ಕವನಿರಬಹುದು. <br /> <br /> ಆದರೆ ನಾನು ಪ್ರಸ್ತಾಪಿಸುವ ವಿಷಯ ಎಷ್ಟು ಗಂಭೀರವಾಗಿದೆ ಎಂಬುದನ್ನು ಗಮನಿಸಬೇಕು. ವಸ್ತುಸ್ಥಿತಿಯನ್ನು ಅರ್ಥ ಮಾಡಿಕೊಳ್ಳದೆ ಸಚಿವರು ಈ ವಿಷಯಕ್ಕೆ ರಾಜಕೀಯ ಬಣ್ಣ ಕಟ್ಟುವುದು ಸರಿಯಲ್ಲ~ ಎಂದು ತರಾಟೆಗೆ ತೆಗೆದುಕೊಂಡರು.<br /> <br /> `ಟಿ.ವಿ.ಯಲ್ಲಿ ವಾದ ಮಾಡುವ ಹಾಗೆ ಸದನದಲ್ಲಿ ವಾದಿಸಲು ಬರಬೇಡಿ. ಈಚೆಗಷ್ಟೇ ಸಚಿವರಾಗಿದ್ದೀರಿ. ಆಗಲೇ ಈ ರೀತಿ ಆಡಿದರೆ ಹೇಗೆ~ ಎಂದು ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದರು. ಆಗ ಮಧ್ಯಪ್ರವೇಶಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, `ಸಚಿವರು ಆವೇಶಕ್ಕೆ ಒಳಗಾಗುವುದು ಸರಿಯಲ್ಲ. ಸದಸ್ಯರು ಎತ್ತಿರುವ ವಿಷಯದ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಿ~ ಎಂದು ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>