<p><strong>ಬೆಂಗಳೂರು: </strong>‘ಲೋಕಾಯುಕ್ತ ಸಂಸ್ಥೆಯು ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಇದೆಯೇ ಹೊರತು, ಭ್ರಷ್ಟಾಚಾರ ನಿಗ್ರಹಕ್ಕಲ್ಲ’ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ವೆಂಕಟಾಚಲ ಹೇಳಿದರು.<br /> <br /> ಕರ್ನಾಟಕ ವಿಶ್ವಮಾನವ ಸಂಸ್ಥೆಯು ಹನುಮಂತನಗರದ ಪಿಇಎಸ್ ಕಾಲೇಜಿನಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ‘ವಿಶ್ವಮಾನವ ಪ್ರಶಸ್ತಿ’ ಸ್ವೀಕರಿಸಿದ ನಂತರ ಅವರು ಮಾತನಾಡಿದರು.<br /> <br /> ‘ಲೋಕಾಯುಕ್ತ ಸಂಸ್ಥೆ ಎಂದರೆ ಭ್ರಷ್ಟಾಚಾರ ನಿಯಂತ್ರಣ ಸಂಸ್ಥೆ ಎಂದೇ ಭಾವಿಸಲಾಗಿದೆ. ಲೋಕಾಯುಕ್ತಕ್ಕೂ, ಭ್ರಷ್ಟಾಚಾರ ನಿಯಂತ್ರಣಕ್ಕೂ ಸಂಬಂಧ ಇಲ್ಲ. ಹೀಗಾಗಿ ಲೋಕಾಯುಕ್ತ ಕಾಯ್ದೆಯಿಂದ ಭ್ರಷ್ಟಾಚಾರ ನಿಗ್ರಹ ಕಾಯ್ದೆಯನ್ನು ಬೇರ್ಪಡಿಸಬೇಕು’ ಎಂದು ಅಭಿಪ್ರಾಯಪಟ್ಟರು.<br /> <br /> ‘ಸರ್ಕಾರ ಜಾರಿಗೆ ತರುವ ಯೋಜನೆಗಳು ವಿಳಂಬವಾಗದೆ ಶೀಘ್ರ ಸಾರ್ವಜನಿಕರಿಗೆ ತಲುಪಬೇಕು. ಆ ನಿಟ್ಟಿನಲ್ಲಿ ಆಡಳಿತ ಯಂತ್ರವನ್ನು ಚುರುಕುಗೊಳಿಸುವ ಕೆಲಸವನ್ನು ಸಂಸ್ಥೆ ಮಾಡಬೇಕು. ನಾನು ಲೋಕಾಯುಕ್ತನಾಗಿದ್ದ ವೇಳೆ ಎಲ್ಲ ತಾಲ್ಲೂಕುಗಳಿಗೆ ಭೇಟಿ ನೀಡಿ ಆ ಕೆಲಸ ಮಾಡಿದೆ’ ಎಂದು ಹೇಳಿದರು.<br /> <br /> ‘ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಯಾವುದೇ ಪ್ರಕರಣ ದಾಖಲಾದರೆ ಕ್ರಮ ಜರುಗಿಸುವ ಅಧಿಕಾರ ಲೋಕಾಯುಕ್ತ ಸಂಸ್ಥೆಗೆ ಇಲ್ಲ’ ಎಂದರು. ‘ಸಂಸ್ಥೆಯು ಸರ್ಕಾರಕ್ಕೆ ಪೂರಕವಾಗಿ ಕೆಲಸ ಮಾಡಬೇಕು. ಐದು ಜಿಲ್ಲೆಗಳಿಗೆ ಒಬ್ಬ ಲೋಕಾಯುಕ್ತರನ್ನು ನೇಮಕ ಮಾಡಬೇಕು. ಆ ಮೂಲಕ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಆಡಳಿತ ಯಂತ್ರವನ್ನು ಚುರುಕುಗೊಳಿಸುವ ಕೆಲಸ ಆಗಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಲೋಕಾಯುಕ್ತ ಸಂಸ್ಥೆಯು ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಇದೆಯೇ ಹೊರತು, ಭ್ರಷ್ಟಾಚಾರ ನಿಗ್ರಹಕ್ಕಲ್ಲ’ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ವೆಂಕಟಾಚಲ ಹೇಳಿದರು.<br /> <br /> ಕರ್ನಾಟಕ ವಿಶ್ವಮಾನವ ಸಂಸ್ಥೆಯು ಹನುಮಂತನಗರದ ಪಿಇಎಸ್ ಕಾಲೇಜಿನಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ‘ವಿಶ್ವಮಾನವ ಪ್ರಶಸ್ತಿ’ ಸ್ವೀಕರಿಸಿದ ನಂತರ ಅವರು ಮಾತನಾಡಿದರು.<br /> <br /> ‘ಲೋಕಾಯುಕ್ತ ಸಂಸ್ಥೆ ಎಂದರೆ ಭ್ರಷ್ಟಾಚಾರ ನಿಯಂತ್ರಣ ಸಂಸ್ಥೆ ಎಂದೇ ಭಾವಿಸಲಾಗಿದೆ. ಲೋಕಾಯುಕ್ತಕ್ಕೂ, ಭ್ರಷ್ಟಾಚಾರ ನಿಯಂತ್ರಣಕ್ಕೂ ಸಂಬಂಧ ಇಲ್ಲ. ಹೀಗಾಗಿ ಲೋಕಾಯುಕ್ತ ಕಾಯ್ದೆಯಿಂದ ಭ್ರಷ್ಟಾಚಾರ ನಿಗ್ರಹ ಕಾಯ್ದೆಯನ್ನು ಬೇರ್ಪಡಿಸಬೇಕು’ ಎಂದು ಅಭಿಪ್ರಾಯಪಟ್ಟರು.<br /> <br /> ‘ಸರ್ಕಾರ ಜಾರಿಗೆ ತರುವ ಯೋಜನೆಗಳು ವಿಳಂಬವಾಗದೆ ಶೀಘ್ರ ಸಾರ್ವಜನಿಕರಿಗೆ ತಲುಪಬೇಕು. ಆ ನಿಟ್ಟಿನಲ್ಲಿ ಆಡಳಿತ ಯಂತ್ರವನ್ನು ಚುರುಕುಗೊಳಿಸುವ ಕೆಲಸವನ್ನು ಸಂಸ್ಥೆ ಮಾಡಬೇಕು. ನಾನು ಲೋಕಾಯುಕ್ತನಾಗಿದ್ದ ವೇಳೆ ಎಲ್ಲ ತಾಲ್ಲೂಕುಗಳಿಗೆ ಭೇಟಿ ನೀಡಿ ಆ ಕೆಲಸ ಮಾಡಿದೆ’ ಎಂದು ಹೇಳಿದರು.<br /> <br /> ‘ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಯಾವುದೇ ಪ್ರಕರಣ ದಾಖಲಾದರೆ ಕ್ರಮ ಜರುಗಿಸುವ ಅಧಿಕಾರ ಲೋಕಾಯುಕ್ತ ಸಂಸ್ಥೆಗೆ ಇಲ್ಲ’ ಎಂದರು. ‘ಸಂಸ್ಥೆಯು ಸರ್ಕಾರಕ್ಕೆ ಪೂರಕವಾಗಿ ಕೆಲಸ ಮಾಡಬೇಕು. ಐದು ಜಿಲ್ಲೆಗಳಿಗೆ ಒಬ್ಬ ಲೋಕಾಯುಕ್ತರನ್ನು ನೇಮಕ ಮಾಡಬೇಕು. ಆ ಮೂಲಕ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಆಡಳಿತ ಯಂತ್ರವನ್ನು ಚುರುಕುಗೊಳಿಸುವ ಕೆಲಸ ಆಗಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>