<p>ಬೆಂಗಳೂರು: `ಅರಣ್ಯದಲ್ಲಿ ದೊರೆಯುವ ಉಪ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ ಮಾಡುವ ಮೂಲಭೂತ ಹಕ್ಕನ್ನು ಆದಿವಾಸಿಗಳು ಪಡೆದಿದ್ದಾರೆ. ಈ ವಿಚಾರದಲ್ಲಿ ಅರಣ್ಯಾಧಿಕಾರಿಗಳು ಯಾವುದೇ ರೀತಿಯ ನಿರ್ಬಂಧ ಹೇರದಂತೆ ಸೂಚಿಸುತ್ತೇನೆ~ ಎಂದು ಅರಣ್ಯ ಸಚಿವ ಸಿ.ಪಿ.ಯೋಗೀಶ್ವರ್ ಭರವಸೆ ನೀಡಿದರು.<br /> <br /> ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತು ನಗರದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಆದಿವಾಸಿ ದಿನಾಚರಣೆಯಲ್ಲಿ ಅವರು ಮಾತನಾಡಿದರು.<br /> <br /> `ರಾಜ್ಯದಾದ್ಯಂತ ವಿವಿಧ ಹೆಸರಿನಲ್ಲಿ ಹರಿದು ಹಂಚಿ ಹೋಗಿರುವ ಆದಿವಾಸಿ ಜನಾಂಗದ ಅಭಿವೃದ್ಧಿಗೆ ವಿವಿಧ ಹೆಸರುಗಳೇ ತೊಡಕಾಗಿದೆ. ಸರ್ಕಾರ ಸಾಮಾಜಿಕ ಭದ್ರತೆ ನೀಡುವಲ್ಲಿ ಬದ್ಧವಾಗಿದೆ. ಪರಿಷತ್ತು ಈಗಾಗಲೇ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿರಿಸಿದೆ. ಇದನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು~ ಎಂದು ತಿಳಿಸಿದರು.<br /> <br /> `ಹುಲಿ ಯೋಜನೆ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಅರಣ್ಯದಲ್ಲಿರುವ ಆದಿವಾಸಿಗಳನ್ನು ಒಕ್ಕಲೆಬ್ಬಿಸುವ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ. ಆದಿವಾಸಿಯಲ್ಲಿರುವ ಕೆಲವೇ ಬಲಶಾಲಿ ಪಂಗಡಗಳು ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿದೆ~ ಎಂದು ತಿಳಿಸಿದರು.<br /> <br /> ಇದಕ್ಕೂ ಮುನ್ನ ಮಾತನಾಡಿದ ಪರಿಷತ್ ಅಧ್ಯಕ್ಷ ಬಸವರಾಜು, `ಏಕಗವಾಕ್ಷಿ ಮಾದರಿಯಲ್ಲಿ ರಾಜ್ಯದಲ್ಲಿರುವ ಆದಿವಾಸಿಗಳಿಗೆ ಸವಲತ್ತುಗಳು ದೊರೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಪ್ರತ್ಯೇಕವಾದ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಸಚಿವಾಲಯವನ್ನು ರಚನೆ ಮಾಡಬೇಕು~ ಎಂದು ಒತ್ತಾಯಿಸಿದರು. <br /> <br /> `ಅರಣ್ಯ ಹಕ್ಕು ಕಾಯಿದೆಯಡಿ ಬಹುಸಂಖ್ಯಾತ ಬುಡಕಟ್ಟುಗಳು ವಾಸವಾಗಿರುವ ಪಶ್ಚಿಮಘಟ್ಟ ಪ್ರದೇಶವನ್ನು ಅನಸೂಚಿತ ಪ್ರದೇಶವೆಂದು ಘೋಷಿಸಬೇಕು. ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿ ಆದಿವಾಸಿಗಳ ವಿಶ್ವವಿದ್ಯಾಲಯವೊಂದನ್ನು ಸ್ಥಾಪಿಸಬೇಕು~ ಎಂದು ಆಗ್ರಹಿಸಿದರು. <br /> <br /> <strong>ಇತರೆ ಬೇಡಿಕೆಗಳು: </strong>ಇತರೆ ಅಲೆಮಾರಿ ಬುಡಕಟ್ಟುಗಳಾದ ಅಡ್ವಿ, ಚಿಂಚೇರ್, ಕಾತಕರಿ ಮತ್ತುಅಭಿವೃದ್ಧಿಗಾಗಿ ವಿಶೇಷ ಯೋಜನೆ ಅನುಷ್ಠಾನಗೊಳಿಸದ ಆದಿವಾಸಿ ದಿನಾಚರಣೆಯನ್ನು ಅಧಿಕೃತವಾಗಿ ಆಚರಿಸಿ, ಸಾಧಕರನ್ನು ` ಆದಿವಾಸಿ ಸಿರಿ~ ಎಂಬ ಪ್ರಶಸ್ತಿ ನೀಡಿ ಗೌರವಿಸಬೇಕು. ಆದಿವಾಸಿ ಭವನ ನಿರ್ಮಾಣಕ್ಕೆ ಮುಂದಾಗಬೇಕು. ಉನ್ನತ ಶಿಕ್ಷಣಕ್ಕೆ ಆದ್ಯತೆ, ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುವುದು ಸೇರಿದಂತೆ ಹಲವು ಬೇಡಿಕೆಗಳ ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಅರಣ್ಯದಲ್ಲಿ ದೊರೆಯುವ ಉಪ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ ಮಾಡುವ ಮೂಲಭೂತ ಹಕ್ಕನ್ನು ಆದಿವಾಸಿಗಳು ಪಡೆದಿದ್ದಾರೆ. ಈ ವಿಚಾರದಲ್ಲಿ ಅರಣ್ಯಾಧಿಕಾರಿಗಳು ಯಾವುದೇ ರೀತಿಯ ನಿರ್ಬಂಧ ಹೇರದಂತೆ ಸೂಚಿಸುತ್ತೇನೆ~ ಎಂದು ಅರಣ್ಯ ಸಚಿವ ಸಿ.ಪಿ.ಯೋಗೀಶ್ವರ್ ಭರವಸೆ ನೀಡಿದರು.<br /> <br /> ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತು ನಗರದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಆದಿವಾಸಿ ದಿನಾಚರಣೆಯಲ್ಲಿ ಅವರು ಮಾತನಾಡಿದರು.<br /> <br /> `ರಾಜ್ಯದಾದ್ಯಂತ ವಿವಿಧ ಹೆಸರಿನಲ್ಲಿ ಹರಿದು ಹಂಚಿ ಹೋಗಿರುವ ಆದಿವಾಸಿ ಜನಾಂಗದ ಅಭಿವೃದ್ಧಿಗೆ ವಿವಿಧ ಹೆಸರುಗಳೇ ತೊಡಕಾಗಿದೆ. ಸರ್ಕಾರ ಸಾಮಾಜಿಕ ಭದ್ರತೆ ನೀಡುವಲ್ಲಿ ಬದ್ಧವಾಗಿದೆ. ಪರಿಷತ್ತು ಈಗಾಗಲೇ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿರಿಸಿದೆ. ಇದನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು~ ಎಂದು ತಿಳಿಸಿದರು.<br /> <br /> `ಹುಲಿ ಯೋಜನೆ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಅರಣ್ಯದಲ್ಲಿರುವ ಆದಿವಾಸಿಗಳನ್ನು ಒಕ್ಕಲೆಬ್ಬಿಸುವ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ. ಆದಿವಾಸಿಯಲ್ಲಿರುವ ಕೆಲವೇ ಬಲಶಾಲಿ ಪಂಗಡಗಳು ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿದೆ~ ಎಂದು ತಿಳಿಸಿದರು.<br /> <br /> ಇದಕ್ಕೂ ಮುನ್ನ ಮಾತನಾಡಿದ ಪರಿಷತ್ ಅಧ್ಯಕ್ಷ ಬಸವರಾಜು, `ಏಕಗವಾಕ್ಷಿ ಮಾದರಿಯಲ್ಲಿ ರಾಜ್ಯದಲ್ಲಿರುವ ಆದಿವಾಸಿಗಳಿಗೆ ಸವಲತ್ತುಗಳು ದೊರೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಪ್ರತ್ಯೇಕವಾದ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಸಚಿವಾಲಯವನ್ನು ರಚನೆ ಮಾಡಬೇಕು~ ಎಂದು ಒತ್ತಾಯಿಸಿದರು. <br /> <br /> `ಅರಣ್ಯ ಹಕ್ಕು ಕಾಯಿದೆಯಡಿ ಬಹುಸಂಖ್ಯಾತ ಬುಡಕಟ್ಟುಗಳು ವಾಸವಾಗಿರುವ ಪಶ್ಚಿಮಘಟ್ಟ ಪ್ರದೇಶವನ್ನು ಅನಸೂಚಿತ ಪ್ರದೇಶವೆಂದು ಘೋಷಿಸಬೇಕು. ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿ ಆದಿವಾಸಿಗಳ ವಿಶ್ವವಿದ್ಯಾಲಯವೊಂದನ್ನು ಸ್ಥಾಪಿಸಬೇಕು~ ಎಂದು ಆಗ್ರಹಿಸಿದರು. <br /> <br /> <strong>ಇತರೆ ಬೇಡಿಕೆಗಳು: </strong>ಇತರೆ ಅಲೆಮಾರಿ ಬುಡಕಟ್ಟುಗಳಾದ ಅಡ್ವಿ, ಚಿಂಚೇರ್, ಕಾತಕರಿ ಮತ್ತುಅಭಿವೃದ್ಧಿಗಾಗಿ ವಿಶೇಷ ಯೋಜನೆ ಅನುಷ್ಠಾನಗೊಳಿಸದ ಆದಿವಾಸಿ ದಿನಾಚರಣೆಯನ್ನು ಅಧಿಕೃತವಾಗಿ ಆಚರಿಸಿ, ಸಾಧಕರನ್ನು ` ಆದಿವಾಸಿ ಸಿರಿ~ ಎಂಬ ಪ್ರಶಸ್ತಿ ನೀಡಿ ಗೌರವಿಸಬೇಕು. ಆದಿವಾಸಿ ಭವನ ನಿರ್ಮಾಣಕ್ಕೆ ಮುಂದಾಗಬೇಕು. ಉನ್ನತ ಶಿಕ್ಷಣಕ್ಕೆ ಆದ್ಯತೆ, ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುವುದು ಸೇರಿದಂತೆ ಹಲವು ಬೇಡಿಕೆಗಳ ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>