ಶಾಸಕರ ಅರ್ಜಿಯ ಕುರಿತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯ ಮಂಗಳವಾರ ಆದೇಶ ಪ್ರಕಟಿಸಬೇಕಿತ್ತು. ಆದರೆ, ಲೊಕಾಯುಕ್ತ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಪಿಪಿ) ಉಮಾಕಾಂತನ್ ಅವರು ಸಲ್ಲಿಸಿರುವ ಆಕ್ಷೇಪಣಾ ಹೇಳಿಕೆಯಲ್ಲಿ ಸ್ಪಷ್ಟತೆ ಇಲ್ಲದಿರುವುದರಿಂದ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು, ಸೋಮವಾರಕ್ಕೆ ಆದೇಶ ಪ್ರಕಟಣೆ ಮುಂದೂಡಿದರು.