<p><strong>ಬೆಂಗಳೂರು: </strong>ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಆರೋಗ್ಯ ಇಲಾಖೆಯ 43 ಕಚೇರಿಗಳನ್ನು ಒಂದೇ ಸೂರಿನಡಿ ಕಾಣುವ ಅವಕಾಶ. ಇದಕ್ಕಾಗಿ ಮಂಗಳವಾರ `ಆರೋಗ್ಯ ಸೌಧ'ದ ಕಟ್ಟಡ ಶಂಕುಸ್ಥಾಪನೆ.<br /> <br /> ಶಂಕುಸ್ಥಾಪನೆ ನೆರವೇರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ.ಖಾದರ್, `ಎಪಿಎಲ್ ಕಾರ್ಡ್ ಹೊಂದಿರುವ ಬಡವರಿಗೂ ಸೇರಿದಂತೆ ದುಡಿಯುವ ವರ್ಗಕ್ಕೆ ಆರೋಗ್ಯ ವಿಮೆ ಕಲ್ಪಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು.<br /> <br /> ಈವರೆಗೆ ಬಿಪಿಎಲ್ ಕಾರ್ಡ್ ಇರುವವರಿಗೆ ಮಾತ್ರ ಆರೋಗ್ಯ ವಿಮೆಯ ಸವಲತ್ತು ಒದಗಿಸಿದೆ. ಸ್ಥಳೀಯ ಸಂಸ್ಥೆಗಳು ಕೂಡ ಬಜೆಟ್ನಲ್ಲಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.<br /> <br /> ಒಂದು ವರ್ಷದೊಳಗಿನ ಮಕ್ಕಳಿಗೆ ಯಾವುದೇ ರೋಗ ರುಜಿನ ಬರೆದಂತೆ ತಡೆಯಲು ಅಗತ್ಯವಾಗಿ ಚುಚ್ಚುಮದ್ದನ್ನು ಹಾಕಿಸಬೇಕು. ಇದಲ್ಲದೇ ಸರ್ಕಾರ 65ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ದಂತಪಂಕ್ತಿಯನ್ನು ಉಚಿತವಾಗಿ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.<br /> <br /> ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮದನ್ಗೋಪಾಲ್, ಸಚಿವ ರಾಮಲಿಂಗಾರೆಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಆರೋಗ್ಯ ಇಲಾಖೆಯ 43 ಕಚೇರಿಗಳನ್ನು ಒಂದೇ ಸೂರಿನಡಿ ಕಾಣುವ ಅವಕಾಶ. ಇದಕ್ಕಾಗಿ ಮಂಗಳವಾರ `ಆರೋಗ್ಯ ಸೌಧ'ದ ಕಟ್ಟಡ ಶಂಕುಸ್ಥಾಪನೆ.<br /> <br /> ಶಂಕುಸ್ಥಾಪನೆ ನೆರವೇರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ.ಖಾದರ್, `ಎಪಿಎಲ್ ಕಾರ್ಡ್ ಹೊಂದಿರುವ ಬಡವರಿಗೂ ಸೇರಿದಂತೆ ದುಡಿಯುವ ವರ್ಗಕ್ಕೆ ಆರೋಗ್ಯ ವಿಮೆ ಕಲ್ಪಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು.<br /> <br /> ಈವರೆಗೆ ಬಿಪಿಎಲ್ ಕಾರ್ಡ್ ಇರುವವರಿಗೆ ಮಾತ್ರ ಆರೋಗ್ಯ ವಿಮೆಯ ಸವಲತ್ತು ಒದಗಿಸಿದೆ. ಸ್ಥಳೀಯ ಸಂಸ್ಥೆಗಳು ಕೂಡ ಬಜೆಟ್ನಲ್ಲಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.<br /> <br /> ಒಂದು ವರ್ಷದೊಳಗಿನ ಮಕ್ಕಳಿಗೆ ಯಾವುದೇ ರೋಗ ರುಜಿನ ಬರೆದಂತೆ ತಡೆಯಲು ಅಗತ್ಯವಾಗಿ ಚುಚ್ಚುಮದ್ದನ್ನು ಹಾಕಿಸಬೇಕು. ಇದಲ್ಲದೇ ಸರ್ಕಾರ 65ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ದಂತಪಂಕ್ತಿಯನ್ನು ಉಚಿತವಾಗಿ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.<br /> <br /> ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮದನ್ಗೋಪಾಲ್, ಸಚಿವ ರಾಮಲಿಂಗಾರೆಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>