<p><strong style="font-size: 26px;">ಬೆಂಗಳೂರು:</strong><span style="font-size: 26px;"> `ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯನ್ನು ಜನಸ್ನೇಹಿಯಾಗಿ ಮಾಡಲಾಗುವುದು. ರಾಜ್ಯದಾದ್ಯಂತ ಸಸಿ ನೆಡುವ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗುವುದು' ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ.ರಮಾನಾಥ್ ರೈ ಹೇಳಿದರು.</span><br /> <br /> ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಮಂಗಳವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.<br /> <br /> `ವಿಶ್ವ ಸಂಸ್ಥೆಯ ಈ ವರ್ಷದ ಘೋಷವಾಕ್ಯವಾದ `ಯೋಚಿಸಿ, ಸೇವಿಸಿ, ಉಳಿಸಿ' ಅನ್ವರ್ಥವಾಗಿದೆ. ಈಗ ಆಹಾರದ ಮೂರನೇ ಒಂದು ಭಾಗ ವ್ಯರ್ಥವಾಗುತ್ತದೆ. ಶ್ರೀಮಂತರು ಅದ್ದೂರಿ ಕಾರ್ಯಕ್ರಮವನ್ನು ಮಾಡಿ ಆಹಾರವನ್ನು ವ್ಯರ್ಥಗೊಳಿಸುತ್ತಾರೆ. ಒಂದೆಡೆ ಆಹಾರ ಹೆಚ್ಚಾಗಿ ಬೊಜ್ಜು ಕರಗಿಸುವವರಿದ್ದಾರೆ. ಇನ್ನೊಂದೆಡೆ ಆಹಾರಕ್ಕಾಗಿ ಪರಿತಪಿಸುವ ಜನರಿದ್ದಾರೆ' ಎಂದು ವಿಷಾದಿಸಿದರು.<br /> <br /> `ನಾವು ಇಂದು ಪರಿಸರದ ಸಮತೋಲನವನ್ನು ಕಾಯ್ದುಕೊಳ್ಳಬೇಕಾದ ಅಗತ್ಯವಿದೆ. ಈಗಲಾದರೂ ಎಚ್ಚೆತ್ತುಕೊಂಡು ಪರಿಸರವನ್ನು ಸಂರಕ್ಷಿಸಬೇಕಾಗಿದೆ' ಎಂದು ಹೇಳಿದರು.<br /> <br /> ಮಂಡಳಿ ಅಧ್ಯಕ್ಷ ಡಾ.ವಾಮನ ಆಚಾರ್ಯ ಮಾತನಾಡಿ, `ಹಳ್ಳಿಗಾಡಿನಲ್ಲಿಯೂ ಪರಿಸರದ ಕುರಿತು ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಈಗ ಪಟ್ಟಣಗಳಾಗಿ ಪರಿವರ್ತನೆಯಾಗುತ್ತಿರುವ ಹಳ್ಳಿಗಳಲ್ಲಿಯೂ ಸ್ವಚ್ಛತೆಯನ್ನು ಕಾಪಾಡಲು ಯೋಜನೆಗಳನ್ನು ರೂಪಿಸಬೇಕು' ಎಂದರು.<br /> <br /> `ಉತ್ತರ ಕರ್ನಾಟಕದ ಚಿಕ್ಕ ಪಟ್ಟಣಗಳಲ್ಲಿ ಗಿಡಗಳನ್ನು ಬೆಳೆಸಿ ಚಿಕ್ಕ ಅರಣ್ಯ ನಿರ್ಮಾಣ ಮಾಡುವ ಕುರಿತು ಚಿಂತನೆ ನಡೆಸಬೇಕು. ರಾಜ್ಯದಲ್ಲಿರುವ ಚಿಕ್ಕ ಚಿಕ್ಕ ಕೆರೆಗಳನ್ನು ಪುನಶ್ಚೇತನಗೊಳಿಸಿ, ಸಂರಕ್ಷಿಸಲು ಸರ್ಕಾರ ಯೋಜನೆಗಳನ್ನು ರೂಪಿಸಬೇಕು' ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪರಿಸರ ಮಿತ್ರ ಶಾಲೆ ಪ್ರಶಸ್ತಿಯನ್ನು ಶಾಲೆಗಳಿಗೆ ಪ್ರದಾನ ಮಾಡಲಾಯಿತು. ಪ್ಲಾಸ್ಟಿಕ್ ಚೀಲದ ಬದಲು ಬಟ್ಟೆ ಚೀಲ ಉಪಯೋಗಿಸಲು ಉತ್ತೇಜನ ನೀಡುವುದಕ್ಕಾಗಿ ಬಟ್ಟೆ ಚೀಲಗಳ ಬಿಡುಗಡೆ, `ಭಗೀರಥ ಡಿವಿಡಿ' ಬಿಡುಗಡೆ, ಶಬ್ದಮಾಲಿನ್ಯ, ವಿಶ್ವ ಪರಿಸರ ದಿನಾಚರಣೆ, ಪರಿಸರ ಮಿತ್ರ ಶಾಲೆ ಕುರಿತು ಕಿರು ಹೊತ್ತಿಗೆ ಬಿಡುಗಡೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong style="font-size: 26px;">ಬೆಂಗಳೂರು:</strong><span style="font-size: 26px;"> `ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯನ್ನು ಜನಸ್ನೇಹಿಯಾಗಿ ಮಾಡಲಾಗುವುದು. ರಾಜ್ಯದಾದ್ಯಂತ ಸಸಿ ನೆಡುವ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗುವುದು' ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ.ರಮಾನಾಥ್ ರೈ ಹೇಳಿದರು.</span><br /> <br /> ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಮಂಗಳವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.<br /> <br /> `ವಿಶ್ವ ಸಂಸ್ಥೆಯ ಈ ವರ್ಷದ ಘೋಷವಾಕ್ಯವಾದ `ಯೋಚಿಸಿ, ಸೇವಿಸಿ, ಉಳಿಸಿ' ಅನ್ವರ್ಥವಾಗಿದೆ. ಈಗ ಆಹಾರದ ಮೂರನೇ ಒಂದು ಭಾಗ ವ್ಯರ್ಥವಾಗುತ್ತದೆ. ಶ್ರೀಮಂತರು ಅದ್ದೂರಿ ಕಾರ್ಯಕ್ರಮವನ್ನು ಮಾಡಿ ಆಹಾರವನ್ನು ವ್ಯರ್ಥಗೊಳಿಸುತ್ತಾರೆ. ಒಂದೆಡೆ ಆಹಾರ ಹೆಚ್ಚಾಗಿ ಬೊಜ್ಜು ಕರಗಿಸುವವರಿದ್ದಾರೆ. ಇನ್ನೊಂದೆಡೆ ಆಹಾರಕ್ಕಾಗಿ ಪರಿತಪಿಸುವ ಜನರಿದ್ದಾರೆ' ಎಂದು ವಿಷಾದಿಸಿದರು.<br /> <br /> `ನಾವು ಇಂದು ಪರಿಸರದ ಸಮತೋಲನವನ್ನು ಕಾಯ್ದುಕೊಳ್ಳಬೇಕಾದ ಅಗತ್ಯವಿದೆ. ಈಗಲಾದರೂ ಎಚ್ಚೆತ್ತುಕೊಂಡು ಪರಿಸರವನ್ನು ಸಂರಕ್ಷಿಸಬೇಕಾಗಿದೆ' ಎಂದು ಹೇಳಿದರು.<br /> <br /> ಮಂಡಳಿ ಅಧ್ಯಕ್ಷ ಡಾ.ವಾಮನ ಆಚಾರ್ಯ ಮಾತನಾಡಿ, `ಹಳ್ಳಿಗಾಡಿನಲ್ಲಿಯೂ ಪರಿಸರದ ಕುರಿತು ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಈಗ ಪಟ್ಟಣಗಳಾಗಿ ಪರಿವರ್ತನೆಯಾಗುತ್ತಿರುವ ಹಳ್ಳಿಗಳಲ್ಲಿಯೂ ಸ್ವಚ್ಛತೆಯನ್ನು ಕಾಪಾಡಲು ಯೋಜನೆಗಳನ್ನು ರೂಪಿಸಬೇಕು' ಎಂದರು.<br /> <br /> `ಉತ್ತರ ಕರ್ನಾಟಕದ ಚಿಕ್ಕ ಪಟ್ಟಣಗಳಲ್ಲಿ ಗಿಡಗಳನ್ನು ಬೆಳೆಸಿ ಚಿಕ್ಕ ಅರಣ್ಯ ನಿರ್ಮಾಣ ಮಾಡುವ ಕುರಿತು ಚಿಂತನೆ ನಡೆಸಬೇಕು. ರಾಜ್ಯದಲ್ಲಿರುವ ಚಿಕ್ಕ ಚಿಕ್ಕ ಕೆರೆಗಳನ್ನು ಪುನಶ್ಚೇತನಗೊಳಿಸಿ, ಸಂರಕ್ಷಿಸಲು ಸರ್ಕಾರ ಯೋಜನೆಗಳನ್ನು ರೂಪಿಸಬೇಕು' ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪರಿಸರ ಮಿತ್ರ ಶಾಲೆ ಪ್ರಶಸ್ತಿಯನ್ನು ಶಾಲೆಗಳಿಗೆ ಪ್ರದಾನ ಮಾಡಲಾಯಿತು. ಪ್ಲಾಸ್ಟಿಕ್ ಚೀಲದ ಬದಲು ಬಟ್ಟೆ ಚೀಲ ಉಪಯೋಗಿಸಲು ಉತ್ತೇಜನ ನೀಡುವುದಕ್ಕಾಗಿ ಬಟ್ಟೆ ಚೀಲಗಳ ಬಿಡುಗಡೆ, `ಭಗೀರಥ ಡಿವಿಡಿ' ಬಿಡುಗಡೆ, ಶಬ್ದಮಾಲಿನ್ಯ, ವಿಶ್ವ ಪರಿಸರ ದಿನಾಚರಣೆ, ಪರಿಸರ ಮಿತ್ರ ಶಾಲೆ ಕುರಿತು ಕಿರು ಹೊತ್ತಿಗೆ ಬಿಡುಗಡೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>