<p>ಬೆಂಗಳೂರು: ಬಡವರಿಗೆ ಕೈಗೆಟಕುವ ದರದಲ್ಲಿ ಮನೆಗಳನ್ನು ನಿರ್ಮಿಸಿಕೊಡುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಯೋಜನೆ ಮಂಗಳವಾರ ನನಸಾಗಲಿದೆ.<br /> <br /> ನಂದಿನಿ ಬಡಾವಣೆಯಲ್ಲಿ ಬಡವರಿಗಾಗಿ ನಿರ್ಮಿಸಿರುವ ವಸತಿ ಸಮುಚ್ಚಯಗಳನ್ನು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹಂಚಿಕೆದಾರರಿಗೆ ಹಸ್ತಾಂತರಿಸುವರು. ಬಿಡಿಎ ವತಿಯಿಂದ ಬಡವರಿಗೆ 30 ಸಾವಿರ ಮನೆಗಳನ್ನು ನಿರ್ಮಿಸಲಾಗುವುದು ಎಂದು 2011-12ರ ಬಜೆಟ್ನಲ್ಲಿ ಘೋಷಿಸಲಾಗಿತ್ತು. <br /> <br /> ಅದರಂತೆ, ಮೊದಲ ಹಂತದಲ್ಲಿ ನಂದಿನಿ ಬಡಾವಣೆ ಹಾಗೂ ವಲಗೇರಹಳ್ಳಿ ವಸತಿ ಸಮುಚ್ಚಯಗಳನ್ನು ನಿರ್ಮಿಸುವ ಯೋಜನೆ ಕಳೆದ ಜುಲೈನಲ್ಲಿ ಆರಂಭವಾಗಿತ್ತು. <br /> <br /> ಒಂದು ಲಕ್ಷ ರೂಪಾಯಿ ವರಮಾನದ ಮಿತಿಯೊಳಗಿನ ನಗರವಾಸಿಗಳಿಗೆ 5.5 ಲಕ್ಷ ರೂಪಾಯಿ ವೆಚ್ಚದಲ್ಲಿ ಒಂದು ಕೊಠಡಿಯ ವಸತಿ ಘಟಕಗಳನ್ನು ನಿರ್ಮಿಸುವ ಯೋಜನೆ ಇದಾಗಿದೆ.<br /> <br /> ಈ ಸಂದರ್ಭದಲ್ಲಿ ಬಿಡಿಎ ಶಿಲ್ಪಕಲಾ ಪ್ರದರ್ಶನಕ್ಕೆ ಮೀಸಲಾದ ಪ್ರತ್ಯೇಕ ಶಿಲ್ಪಕಲಾ ಉದ್ಯಾನವನ್ನು ಬನಶಂಕರಿ ಆರನೇ ಹಂತದ ಮೊದಲ ಬ್ಲಾಕ್ನಲ್ಲಿರುವ ಎಂಟು ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಉದ್ಯಾನ ನಿರ್ಮಾಣ ಕಾಮಗಾರಿಗೂ ಮುಖ್ಯಮಂತ್ರಿಗಳು ಚಾಲನೆ ನೀಡುವರು.<br /> <br /> ಬಿಡಿಎ ಬಡವರಿಗೆ ಸೂರು ನಿರ್ಮಿಸುವ ಯೋಜನೆಯ ಮುಂದುವರಿದ ಭಾಗವಾಗಿ ಹಲಗೆವಡೇರಹಳ್ಳಿಯಲ್ಲಿ ಮತ್ತೊಂದು ಸಮುಚ್ಚಯವನ್ನು ನಿರ್ಮಿಸುವ ಕಾಮಗಾರಿಗೂ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. <br /> <br /> 200 ವಸತಿ ಘಟಕಗಳ ಈ ಸಮುಚ್ಚಯದ ಪಕ್ಕದಲ್ಲಿಯೇ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸುವ ಉದ್ದೇಶವಿದೆ ಎಂದು ಬಿಡಿಎ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬಡವರಿಗೆ ಕೈಗೆಟಕುವ ದರದಲ್ಲಿ ಮನೆಗಳನ್ನು ನಿರ್ಮಿಸಿಕೊಡುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಯೋಜನೆ ಮಂಗಳವಾರ ನನಸಾಗಲಿದೆ.<br /> <br /> ನಂದಿನಿ ಬಡಾವಣೆಯಲ್ಲಿ ಬಡವರಿಗಾಗಿ ನಿರ್ಮಿಸಿರುವ ವಸತಿ ಸಮುಚ್ಚಯಗಳನ್ನು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹಂಚಿಕೆದಾರರಿಗೆ ಹಸ್ತಾಂತರಿಸುವರು. ಬಿಡಿಎ ವತಿಯಿಂದ ಬಡವರಿಗೆ 30 ಸಾವಿರ ಮನೆಗಳನ್ನು ನಿರ್ಮಿಸಲಾಗುವುದು ಎಂದು 2011-12ರ ಬಜೆಟ್ನಲ್ಲಿ ಘೋಷಿಸಲಾಗಿತ್ತು. <br /> <br /> ಅದರಂತೆ, ಮೊದಲ ಹಂತದಲ್ಲಿ ನಂದಿನಿ ಬಡಾವಣೆ ಹಾಗೂ ವಲಗೇರಹಳ್ಳಿ ವಸತಿ ಸಮುಚ್ಚಯಗಳನ್ನು ನಿರ್ಮಿಸುವ ಯೋಜನೆ ಕಳೆದ ಜುಲೈನಲ್ಲಿ ಆರಂಭವಾಗಿತ್ತು. <br /> <br /> ಒಂದು ಲಕ್ಷ ರೂಪಾಯಿ ವರಮಾನದ ಮಿತಿಯೊಳಗಿನ ನಗರವಾಸಿಗಳಿಗೆ 5.5 ಲಕ್ಷ ರೂಪಾಯಿ ವೆಚ್ಚದಲ್ಲಿ ಒಂದು ಕೊಠಡಿಯ ವಸತಿ ಘಟಕಗಳನ್ನು ನಿರ್ಮಿಸುವ ಯೋಜನೆ ಇದಾಗಿದೆ.<br /> <br /> ಈ ಸಂದರ್ಭದಲ್ಲಿ ಬಿಡಿಎ ಶಿಲ್ಪಕಲಾ ಪ್ರದರ್ಶನಕ್ಕೆ ಮೀಸಲಾದ ಪ್ರತ್ಯೇಕ ಶಿಲ್ಪಕಲಾ ಉದ್ಯಾನವನ್ನು ಬನಶಂಕರಿ ಆರನೇ ಹಂತದ ಮೊದಲ ಬ್ಲಾಕ್ನಲ್ಲಿರುವ ಎಂಟು ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಉದ್ಯಾನ ನಿರ್ಮಾಣ ಕಾಮಗಾರಿಗೂ ಮುಖ್ಯಮಂತ್ರಿಗಳು ಚಾಲನೆ ನೀಡುವರು.<br /> <br /> ಬಿಡಿಎ ಬಡವರಿಗೆ ಸೂರು ನಿರ್ಮಿಸುವ ಯೋಜನೆಯ ಮುಂದುವರಿದ ಭಾಗವಾಗಿ ಹಲಗೆವಡೇರಹಳ್ಳಿಯಲ್ಲಿ ಮತ್ತೊಂದು ಸಮುಚ್ಚಯವನ್ನು ನಿರ್ಮಿಸುವ ಕಾಮಗಾರಿಗೂ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. <br /> <br /> 200 ವಸತಿ ಘಟಕಗಳ ಈ ಸಮುಚ್ಚಯದ ಪಕ್ಕದಲ್ಲಿಯೇ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸುವ ಉದ್ದೇಶವಿದೆ ಎಂದು ಬಿಡಿಎ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>