ಬೆಂಗಳೂರು: ದೇವನಹಳ್ಳಿಯ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಇದೇ 14ರಂದು ಮರು ನಾಮಕರಣ ಮಾಡಲಾಗುತ್ತದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಪೇಗೌಡ ವಿಮಾನ ನಿಲ್ದಾಣ ಎಂದು ಘೋಷಿಸಲಿದ್ದು, ಕೇಂದ್ರದ ನಾಗರಿಕ ವಿಮಾನಯಾನ ಸಚಿವ ಅಜಿತ್ ಸಿಂಗ್ ಅವರು ನೂತನ ಟರ್ಮಿನಲ್ ಉದ್ಘಾಟಿಸಲಿ ದ್ದಾರೆ ಎಂದು ಪ್ರಕಟಣೆ ತಿಳಿಸಿದೆ.