<p><strong>ತಲಘಟ್ಟಪುರ: `</strong>ರಾಜ್ಯದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ತೀರಾ ಕಡಿಮೆ ಇದೆ. 2020ರ ವೇಳೆಗೆ ಈ ಪ್ರಮಾಣ ಶೇ 30 ಆಗಬೇಕಿದೆ. ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಹೆಚ್ಚಿನ ಉತ್ತೇಜನ ನೀಡಲಿದೆ' ಎಂದು ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಭರವಸೆ ನೀಡಿದರು.<br /> <br /> ಕನಕಪುರ ರಸ್ತೆಯ ಎ.ಪಿ.ಎಸ್ ಎಂಜಿನಿಯರಿಂಗ್ ಕಾಲೇಜಿನ ಮೆಕಾನಿಕಲ್ ಮತ್ತು ಸಿವಿಲ್ ಎಂಜಿನಿಯರಿಂಗ್ ವಿಭಾಗಗಳ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಖಾಸಗಿ ಶಿಕ್ಷಣ ಸಂಸ್ಥೆಗಳು ನಿಸ್ವಾರ್ಥದಿಂದ ಸಮಾಜಸೇವೆ ಮಾಡುವ ಮೂಲಕ ಬಡ ವಿದ್ಯಾರ್ಥಿಗಳಿಗೂ ತಾಂತ್ರಿಕ ಶಿಕ್ಷಣ ಒದಗಿಸಬೇಕು. ಕೇವಲ ಹಣ ಸಂಪಾದನೆಯ ಗುರಿ ಇರಿಸಿಕೊಳ್ಳ ಬಾರದು' ಎಂದು ಅವರು ಕಿವಿಮಾತು ಹೇಳಿದರು.<br /> <br /> ಶಾಸಕ ಎಸ್.ಟಿ.ಸೋಮಶೇಖರ್, `ಸುತ್ತಮುತ್ತಲ ಗ್ರಾಮಗಳ ಜನರಿಗೆ ಗುಣಮಟ್ಟದ ಶಿಕ್ಷಣ ದೊರಕಿಸಿ ಕೊಡುವ ಕೆಲಸವನ್ನು ಮಾಡಬೇಕಾಗಿದೆ' ಎಂದರು.<br /> <br /> ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಎಂ. ಸದಾನಂದ, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ಎಂ.ಜಿ. ನಾಗರಾಜು, ಸದಸ್ಯೆ ವಿಜಯಲಕ್ಷ್ಮೀ ಶೇಷಾದ್ರಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಪರಮಶಿವ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಲಘಟ್ಟಪುರ: `</strong>ರಾಜ್ಯದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ತೀರಾ ಕಡಿಮೆ ಇದೆ. 2020ರ ವೇಳೆಗೆ ಈ ಪ್ರಮಾಣ ಶೇ 30 ಆಗಬೇಕಿದೆ. ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಹೆಚ್ಚಿನ ಉತ್ತೇಜನ ನೀಡಲಿದೆ' ಎಂದು ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಭರವಸೆ ನೀಡಿದರು.<br /> <br /> ಕನಕಪುರ ರಸ್ತೆಯ ಎ.ಪಿ.ಎಸ್ ಎಂಜಿನಿಯರಿಂಗ್ ಕಾಲೇಜಿನ ಮೆಕಾನಿಕಲ್ ಮತ್ತು ಸಿವಿಲ್ ಎಂಜಿನಿಯರಿಂಗ್ ವಿಭಾಗಗಳ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಖಾಸಗಿ ಶಿಕ್ಷಣ ಸಂಸ್ಥೆಗಳು ನಿಸ್ವಾರ್ಥದಿಂದ ಸಮಾಜಸೇವೆ ಮಾಡುವ ಮೂಲಕ ಬಡ ವಿದ್ಯಾರ್ಥಿಗಳಿಗೂ ತಾಂತ್ರಿಕ ಶಿಕ್ಷಣ ಒದಗಿಸಬೇಕು. ಕೇವಲ ಹಣ ಸಂಪಾದನೆಯ ಗುರಿ ಇರಿಸಿಕೊಳ್ಳ ಬಾರದು' ಎಂದು ಅವರು ಕಿವಿಮಾತು ಹೇಳಿದರು.<br /> <br /> ಶಾಸಕ ಎಸ್.ಟಿ.ಸೋಮಶೇಖರ್, `ಸುತ್ತಮುತ್ತಲ ಗ್ರಾಮಗಳ ಜನರಿಗೆ ಗುಣಮಟ್ಟದ ಶಿಕ್ಷಣ ದೊರಕಿಸಿ ಕೊಡುವ ಕೆಲಸವನ್ನು ಮಾಡಬೇಕಾಗಿದೆ' ಎಂದರು.<br /> <br /> ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಎಂ. ಸದಾನಂದ, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ಎಂ.ಜಿ. ನಾಗರಾಜು, ಸದಸ್ಯೆ ವಿಜಯಲಕ್ಷ್ಮೀ ಶೇಷಾದ್ರಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಪರಮಶಿವ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>