<p>ಬೆಂಗಳೂರು: ರಾಜರಾಜೇಶ್ವರಿನಗರದ ಶುಭೋದಯ ಅಪಾರ್ಟ್ಮೆಂಟ್ನಲ್ಲಿ ದುಷ್ಕರ್ಮಿಗಳು ಎಪ್ಪತ್ತು ವರ್ಷದ ವೃದ್ಧೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.<br /> <br /> ಅಪಾರ್ಟ್ಮೆಂಟ್ನಲ್ಲಿ ಒಂದು ವರ್ಷದಿಂದ ವಾಸವಿದ್ದ ರಮಾ ದೊರೈಮಣಿ ಕೊಲೆಯಾದವರು. ಮೂಲತಃ ಚೆನ್ನೈನ ಅವರಿಗೆ ಮೂವರು ಮಕ್ಕಳಿದ್ದಾರೆ. ಇಬ್ಬರು ಗಂಡು ಮಕ್ಕಳು ವಿದೇಶದಲ್ಲಿ ಹಾಗೂ ಮಗಳು ಚೆನ್ನೈನಲ್ಲಿ ವಾಸವಿದ್ದಾರೆ. ಅವರ ಪತಿ 30 ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಅವರ ಸಂಬಂಧಿ ಆದಿತ್ಯ ಎಂಬುವರು ಶನಿವಾರ ಅವರ ಫ್ಲ್ಯಾಟ್ಗೆ ಕರೆ ಮಾಡಿದ್ದಾರೆ. ಎಷ್ಟು ಬಾರಿ ಪ್ರಯತ್ನಿಸಿದರೂ ಕರೆ ಸ್ವೀಕರಿಸಿಲ್ಲ. ಇದರಿಂದ ಅನುಮಾನಗೊಂಡ ಆದಿತ್ಯ ಸಂಜೆ 5 ಗಂಟೆ ಸುಮಾರಿಗೆ ಅಪಾರ್ಟ್ಮೆಂಟ್ಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.<br /> ‘ವ್ಯಕ್ತಿಯೊಬ್ಬ ಮಹಿಳೆಯೊಂದಿಗೆ ಶುಕ್ರವಾರ ಬೆಳಿಗ್ಗೆ ರಮಾ ಅವರ ಭೇಟಿಗೆ ಬಂದಿದ್ದ. ರಮಾ ಅವರ ಫ್ಲ್ಯಾಟ್ಗೆ ಕರೆ ಮಾಡಿ ಈ ವಿಷಯ ತಿಳಿಸಿದೆ.<br /> <br /> ಅವರು ಆ ಇಬ್ಬರನ್ನು ಒಳಗೆ ಕಳಿಸುವಂತೆ ತಿಳಿಸಿದರು. ಸುಮಾರು 4ಗಂಟೆಗಳ ಬಳಿಕ ಅವರಿಬ್ಬರು ಹೊರಗೆ ಹೋದರು. ಆ ನಂತರ ರಮಾ ಅವರು ಫ್ಲ್ಯಾಟ್ನಿಂದ ಹೊರ ಬಂದಿರಲಿಲ್ಲ’ ಎಂದು ಅಪಾರ್ಟ್ಮೆಂಟ್ನ ಕಾವಲುಗಾರ ಹೇಳಿಕೆ ಕೊಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br /> <br /> ರಮಾ ಅವರ ಭೇಟಿಗೆ ಬಂದಿದ್ದ ಇಬ್ಬರು ವ್ಯಕ್ತಿಗಳೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಅವರ ಮೈಮೇಲಿದ್ದ ಚಿನ್ನದ ಸರ, ಕಿವಿಯ ಓಲೆ ಹಾಗೂ ಬಳೆಗಳನ್ನು ದುಷ್ಕರ್ಮಿಗಳು ಕದ್ದೊಯ್ದಿದ್ದಾರೆ. ಪರಿಚಿತರೇ ಹಣಕ್ಕಾಗಿ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ. ರಾಜರಾಜೇಶ್ವರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜರಾಜೇಶ್ವರಿನಗರದ ಶುಭೋದಯ ಅಪಾರ್ಟ್ಮೆಂಟ್ನಲ್ಲಿ ದುಷ್ಕರ್ಮಿಗಳು ಎಪ್ಪತ್ತು ವರ್ಷದ ವೃದ್ಧೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.<br /> <br /> ಅಪಾರ್ಟ್ಮೆಂಟ್ನಲ್ಲಿ ಒಂದು ವರ್ಷದಿಂದ ವಾಸವಿದ್ದ ರಮಾ ದೊರೈಮಣಿ ಕೊಲೆಯಾದವರು. ಮೂಲತಃ ಚೆನ್ನೈನ ಅವರಿಗೆ ಮೂವರು ಮಕ್ಕಳಿದ್ದಾರೆ. ಇಬ್ಬರು ಗಂಡು ಮಕ್ಕಳು ವಿದೇಶದಲ್ಲಿ ಹಾಗೂ ಮಗಳು ಚೆನ್ನೈನಲ್ಲಿ ವಾಸವಿದ್ದಾರೆ. ಅವರ ಪತಿ 30 ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಅವರ ಸಂಬಂಧಿ ಆದಿತ್ಯ ಎಂಬುವರು ಶನಿವಾರ ಅವರ ಫ್ಲ್ಯಾಟ್ಗೆ ಕರೆ ಮಾಡಿದ್ದಾರೆ. ಎಷ್ಟು ಬಾರಿ ಪ್ರಯತ್ನಿಸಿದರೂ ಕರೆ ಸ್ವೀಕರಿಸಿಲ್ಲ. ಇದರಿಂದ ಅನುಮಾನಗೊಂಡ ಆದಿತ್ಯ ಸಂಜೆ 5 ಗಂಟೆ ಸುಮಾರಿಗೆ ಅಪಾರ್ಟ್ಮೆಂಟ್ಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.<br /> ‘ವ್ಯಕ್ತಿಯೊಬ್ಬ ಮಹಿಳೆಯೊಂದಿಗೆ ಶುಕ್ರವಾರ ಬೆಳಿಗ್ಗೆ ರಮಾ ಅವರ ಭೇಟಿಗೆ ಬಂದಿದ್ದ. ರಮಾ ಅವರ ಫ್ಲ್ಯಾಟ್ಗೆ ಕರೆ ಮಾಡಿ ಈ ವಿಷಯ ತಿಳಿಸಿದೆ.<br /> <br /> ಅವರು ಆ ಇಬ್ಬರನ್ನು ಒಳಗೆ ಕಳಿಸುವಂತೆ ತಿಳಿಸಿದರು. ಸುಮಾರು 4ಗಂಟೆಗಳ ಬಳಿಕ ಅವರಿಬ್ಬರು ಹೊರಗೆ ಹೋದರು. ಆ ನಂತರ ರಮಾ ಅವರು ಫ್ಲ್ಯಾಟ್ನಿಂದ ಹೊರ ಬಂದಿರಲಿಲ್ಲ’ ಎಂದು ಅಪಾರ್ಟ್ಮೆಂಟ್ನ ಕಾವಲುಗಾರ ಹೇಳಿಕೆ ಕೊಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br /> <br /> ರಮಾ ಅವರ ಭೇಟಿಗೆ ಬಂದಿದ್ದ ಇಬ್ಬರು ವ್ಯಕ್ತಿಗಳೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಅವರ ಮೈಮೇಲಿದ್ದ ಚಿನ್ನದ ಸರ, ಕಿವಿಯ ಓಲೆ ಹಾಗೂ ಬಳೆಗಳನ್ನು ದುಷ್ಕರ್ಮಿಗಳು ಕದ್ದೊಯ್ದಿದ್ದಾರೆ. ಪರಿಚಿತರೇ ಹಣಕ್ಕಾಗಿ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ. ರಾಜರಾಜೇಶ್ವರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>