<p>ಬೆಂಗಳೂರು: ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ನಗರದ ಹಲವೆಡೆ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಮಲ್ಲೇಶ್ವರ 18ನೇ ಅಡ್ಡರಸ್ತೆ, ವರ್ತೂರು ಮತ್ತು ಸೌತ್ ಎಂಡ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, `ರಾಜ್ಯದ ಖಾಸಗಿ ಶಾಲಾ ಕಾಲೇಜುಗಳ ಪ್ರವೇಶ ನೀತಿ, ಶುಲ್ಕ ನೀತಿಗಳಿಂದ ವಿದ್ಯಾರ್ಥಿಗಳ ಪೋಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಮತ್ತಷ್ಟು ಖಾಸಗಿ ವಿವಿಗಳ ಸ್ಥಾಪನೆಗೆ ಮುಂದಾಗಿದೆ. ಆದರೆ, ಇದರಿಂದಾಗುವ ಪರಿಣಾಮದ ಬಗ್ಗೆ ಸರ್ಕಾರ ಚಿಂತಿಸುತ್ತಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯಲ್ಲಿ ಮಾತನಾಡಿದ ಬೆಂಗಳೂರು ಉತ್ತರ ಜಿಲ್ಲೆಯ ಎಬಿವಿಪಿ ಸಂಚಾಲಕ ಪ್ರಶಾಂತ್, `ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಅಧಿವೇಶನದಲ್ಲಿ ಖಾಸಗಿ ವಿವಿಗಳ ಸ್ಥಾಪನೆಗೆ ವಿಧೇಯಕ ಮಂಡನೆಯಾಗಲಿದೆ ಎಂದು ತಿಳಿದುಬಂದಿದೆ. ಯಾವುದೇ ಪೂರ್ವತಯಾರಿ ಇಲ್ಲದೇ, ಸರ್ಕಾರ ಈ ರೀತಿಯ ಆತುರದ ನಿರ್ಧಾರ ತೆಗೆದುಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ' ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ನಗರದ ಹಲವೆಡೆ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಮಲ್ಲೇಶ್ವರ 18ನೇ ಅಡ್ಡರಸ್ತೆ, ವರ್ತೂರು ಮತ್ತು ಸೌತ್ ಎಂಡ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, `ರಾಜ್ಯದ ಖಾಸಗಿ ಶಾಲಾ ಕಾಲೇಜುಗಳ ಪ್ರವೇಶ ನೀತಿ, ಶುಲ್ಕ ನೀತಿಗಳಿಂದ ವಿದ್ಯಾರ್ಥಿಗಳ ಪೋಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಮತ್ತಷ್ಟು ಖಾಸಗಿ ವಿವಿಗಳ ಸ್ಥಾಪನೆಗೆ ಮುಂದಾಗಿದೆ. ಆದರೆ, ಇದರಿಂದಾಗುವ ಪರಿಣಾಮದ ಬಗ್ಗೆ ಸರ್ಕಾರ ಚಿಂತಿಸುತ್ತಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯಲ್ಲಿ ಮಾತನಾಡಿದ ಬೆಂಗಳೂರು ಉತ್ತರ ಜಿಲ್ಲೆಯ ಎಬಿವಿಪಿ ಸಂಚಾಲಕ ಪ್ರಶಾಂತ್, `ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಅಧಿವೇಶನದಲ್ಲಿ ಖಾಸಗಿ ವಿವಿಗಳ ಸ್ಥಾಪನೆಗೆ ವಿಧೇಯಕ ಮಂಡನೆಯಾಗಲಿದೆ ಎಂದು ತಿಳಿದುಬಂದಿದೆ. ಯಾವುದೇ ಪೂರ್ವತಯಾರಿ ಇಲ್ಲದೇ, ಸರ್ಕಾರ ಈ ರೀತಿಯ ಆತುರದ ನಿರ್ಧಾರ ತೆಗೆದುಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ' ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>