<p><strong>ಬೆಂಗಳೂರು:</strong> ಕಸ್ತೂರ ಬಾ ರಸ್ತೆಯ ಕಾಮಗಾರಿಯನ್ನು ಉಪಲೋಕಾಯುಕ್ತ ಎಸ್.ಬಿ.ಮಜಗೆ ಅವರು ಸೋಮವಾರ ಪರಿಶೀಲಿಸಿ, ಆಗಸ್ಟ್ ತಿಂಗಳ ಕೊನೆಯವರೆಗೆ ಕಾಮಗಾರಿ ಪೂರ್ಣಗೊಳಿಸುವಂತೆ ಆದೇಶಿಸಿದ್ದಾರೆ.<br /> <br /> ಕಸ್ತೂರ ಬಾ ರಸ್ತೆ ಮತ್ತು ಪಾದಚಾರಿ ಮಾರ್ಗದ ಅವ್ಯವಸ್ಥೆ ಕುರಿತು `ಪ್ರಜಾವಾಣಿ'ಯಲ್ಲಿ ಸೋಮವಾರ ವಿಶೇಷ ವರದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಜತೆ ಚರ್ಚಿಸಿದ ಅವರು, ಪ್ರತಿ ವಾರದ ಕಾಮಗಾರಿಯ ಪ್ರಗತಿ ಕುರಿತು ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.<br /> <br /> ಲೋಕಾಯುಕ್ತ ಮುಖ್ಯ ಎಂಜಿನಿಯರ್ ಪಿ.ಆರ್.ಅನಿಲ್ಕುಮಾರ್ ಮಾತನಾಡಿ, `ಪ್ರಜಾವಾಣಿ' ವರದಿನೋಡಿ ಜನರ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಲು ಉಪಲೋಕಾಯುಕ್ತ ಎಸ್.ಬಿ.ಮಜಗೆ ಸ್ಥಳಕ್ಕೆ ಭೇಟಿ ನೀಡಿದ್ದರು. ಸಮನ್ವಯದ ಕೊರತೆಯಿಂದ ಕಾಮಗಾರಿ ತಡವಾಗಿರುವುದು ಕಂಡುಬಂದಿದೆ. ಮುಂದಿನ ಆಗಸ್ಟ್ ತಿಂಗಳ ಕೊನೆಯವರೆಗೆ ಕಾಮಗಾರಿ ಪೂರ್ಣಗೊಳಿಸುವಂತೆ ಆದೇಶಿದ್ದಾರೆ' ಎಂದರು.<br /> <br /> `ಪಾದಚಾರಿ ಮಾರ್ಗ ಮತ್ತು ರಸ್ತೆ ಅವ್ಯವಸ್ಥೆಯಿಂದ ಜನರು ಪರದಾಡುವಂತಾಗಿದೆ. ಮಳೆ ನೀರು ನಿಂತರೂ ಹರಿದು ಹೋಗಲು ಅಲ್ಲಿ ಯಾವುದೇ ವ್ಯವಸ್ಥೆಯನ್ನೂ ಮಾಡಿಲ್ಲ. ಇದರಿಂದ ಇದನ್ನು ಸರಿಪಡಿಸುವಂತೆ ಹೇಳಲಾಗಿದೆ' ಎಂದರು.<br /> <br /> ಬಿಬಿಎಂಪಿ ಕಾರ್ಯಪಾಲಕ ಎಂಜಿನಿಯರ್ ಬಸವರಾಜ ಕಬಾಡೆ, `ಕಸ್ತೂರ ಬಾ ರಸ್ತೆಯ ಒಳಚರಂಡಿ ಮಾರ್ಗಗಳು ಸುಮಾರು 40-50 ವರ್ಷಗಳಷ್ಟು ಹಳೆಯವು. ಇದರಿಂದ, ಅವುಗಳಿಗೆ ಸೂಕ್ತ ವ್ಯವಸ್ಥೆ ಮಾಡಿ ನಂತರ ಕಾಮಗಾರಿ ಕೈಗೊಳ್ಳಬೇಕು. ಅಲ್ಲದೆ, ಇಲ್ಲಿಯೇ ದೂರವಾಣಿ ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸುವ ಲೇನ್ಗಳು ಇವೆ. ಇವುಗಳಿಗೆ ಹಾನಿಯಾಗದಂತೆ ಕಾಮಗಾರಿ ಕೈಗೊಳ್ಳಬೇಕಾಗಿರುವುದರಿಂದ ಕಾಮಗಾರಿ ವಿಳಂಬವಾಗಿದೆ' ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಸ್ತೂರ ಬಾ ರಸ್ತೆಯ ಕಾಮಗಾರಿಯನ್ನು ಉಪಲೋಕಾಯುಕ್ತ ಎಸ್.ಬಿ.ಮಜಗೆ ಅವರು ಸೋಮವಾರ ಪರಿಶೀಲಿಸಿ, ಆಗಸ್ಟ್ ತಿಂಗಳ ಕೊನೆಯವರೆಗೆ ಕಾಮಗಾರಿ ಪೂರ್ಣಗೊಳಿಸುವಂತೆ ಆದೇಶಿಸಿದ್ದಾರೆ.<br /> <br /> ಕಸ್ತೂರ ಬಾ ರಸ್ತೆ ಮತ್ತು ಪಾದಚಾರಿ ಮಾರ್ಗದ ಅವ್ಯವಸ್ಥೆ ಕುರಿತು `ಪ್ರಜಾವಾಣಿ'ಯಲ್ಲಿ ಸೋಮವಾರ ವಿಶೇಷ ವರದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಜತೆ ಚರ್ಚಿಸಿದ ಅವರು, ಪ್ರತಿ ವಾರದ ಕಾಮಗಾರಿಯ ಪ್ರಗತಿ ಕುರಿತು ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.<br /> <br /> ಲೋಕಾಯುಕ್ತ ಮುಖ್ಯ ಎಂಜಿನಿಯರ್ ಪಿ.ಆರ್.ಅನಿಲ್ಕುಮಾರ್ ಮಾತನಾಡಿ, `ಪ್ರಜಾವಾಣಿ' ವರದಿನೋಡಿ ಜನರ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಲು ಉಪಲೋಕಾಯುಕ್ತ ಎಸ್.ಬಿ.ಮಜಗೆ ಸ್ಥಳಕ್ಕೆ ಭೇಟಿ ನೀಡಿದ್ದರು. ಸಮನ್ವಯದ ಕೊರತೆಯಿಂದ ಕಾಮಗಾರಿ ತಡವಾಗಿರುವುದು ಕಂಡುಬಂದಿದೆ. ಮುಂದಿನ ಆಗಸ್ಟ್ ತಿಂಗಳ ಕೊನೆಯವರೆಗೆ ಕಾಮಗಾರಿ ಪೂರ್ಣಗೊಳಿಸುವಂತೆ ಆದೇಶಿದ್ದಾರೆ' ಎಂದರು.<br /> <br /> `ಪಾದಚಾರಿ ಮಾರ್ಗ ಮತ್ತು ರಸ್ತೆ ಅವ್ಯವಸ್ಥೆಯಿಂದ ಜನರು ಪರದಾಡುವಂತಾಗಿದೆ. ಮಳೆ ನೀರು ನಿಂತರೂ ಹರಿದು ಹೋಗಲು ಅಲ್ಲಿ ಯಾವುದೇ ವ್ಯವಸ್ಥೆಯನ್ನೂ ಮಾಡಿಲ್ಲ. ಇದರಿಂದ ಇದನ್ನು ಸರಿಪಡಿಸುವಂತೆ ಹೇಳಲಾಗಿದೆ' ಎಂದರು.<br /> <br /> ಬಿಬಿಎಂಪಿ ಕಾರ್ಯಪಾಲಕ ಎಂಜಿನಿಯರ್ ಬಸವರಾಜ ಕಬಾಡೆ, `ಕಸ್ತೂರ ಬಾ ರಸ್ತೆಯ ಒಳಚರಂಡಿ ಮಾರ್ಗಗಳು ಸುಮಾರು 40-50 ವರ್ಷಗಳಷ್ಟು ಹಳೆಯವು. ಇದರಿಂದ, ಅವುಗಳಿಗೆ ಸೂಕ್ತ ವ್ಯವಸ್ಥೆ ಮಾಡಿ ನಂತರ ಕಾಮಗಾರಿ ಕೈಗೊಳ್ಳಬೇಕು. ಅಲ್ಲದೆ, ಇಲ್ಲಿಯೇ ದೂರವಾಣಿ ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸುವ ಲೇನ್ಗಳು ಇವೆ. ಇವುಗಳಿಗೆ ಹಾನಿಯಾಗದಂತೆ ಕಾಮಗಾರಿ ಕೈಗೊಳ್ಳಬೇಕಾಗಿರುವುದರಿಂದ ಕಾಮಗಾರಿ ವಿಳಂಬವಾಗಿದೆ' ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>