<p><strong>ಬೆಂಗಳೂರು: </strong>ಬಾಹ್ಯಾಕಾಶ ವಿಜ್ಞಾನಿ ಡಾ.ಯು.ಆರ್.ರಾವ್, ಪ್ರಸಿದ್ಧ ಕ್ರಿಕೆಟ್ ಆಟಗಾರ ಜಿ.ಆರ್.ವಿಶ್ವನಾಥ್, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಸೇರಿದಂತೆ ಏಳು ಮಂದಿ ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ.<br /> <br /> `ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ, ಹಿನ್ನೆಲೆ ಗಾಯಕಿ ಬಿ.ಕೆ. ಸುಮಿತ್ರಾ, ಲೇಖಕ ಕೆ.ಸತ್ಯನಾರಾಯಣ, ಸಂಸ್ಕೃತ ವಿದ್ವಾಂಸರಾದ ಡಾ.ವನಿತಾ ರಾಮಸ್ವಾಮಿ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಇದೇ 18ರಂದು ನಡೆಯಲಿರುವ 48ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುವುದು' ಎಂದು ಕುಲಪತಿ ಪ್ರೊ.ಬಿ ತಿಮ್ಮೇಗೌಡ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> `ಹಿರಿಯ ಸಾಹಿತಿ ದೇವನೂರ ಮಹಾದೇವ ಅವರಿಗೂ ಗೌರವ ಡಾಕ್ಟರೇಟ್ ನೀಡಲು ಉದ್ದೇಶಿಸಲಾಗಿತ್ತು. ಅವರನ್ನು ಇತ್ತೀಚೆಗೆ ಭೇಟಿಯಾಗಿ ಗೌರವ ಸ್ವೀಕರಿಸುವಂತೆ ವಿನಂತಿ ಮಾಡಲಾಗಿತ್ತು. ಅವರು ಸ್ಪಷ್ಟವಾಗಿ ನಿರಾಕರಿಸಿದರು. ಮೈಸೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಅನ್ನು ನಿರಾಕರಿಸಿದ್ದರು' ಎಂದು ಅವರು ಹೇಳಿದರು.<br /> <br /> `ಯು.ಆರ್. ರಾವ್ ಅವರಿಗೆ ವಿವಿಧ ವಿವಿಗಳಿಂದ 20ಕ್ಕೂ ಅಧಿಕ ಗೌರವ ಡಾಕ್ಟರೇಟ್ಗಳು ದೊರಕಿವೆ. ಆದರೆ, ಬೆಂಗಳೂರು ವಿವಿಯಿಂದ ಸಿಕ್ಕಿರಲಿಲ್ಲ. ಒಂದು ವಾರದ ಹಿಂದೆ ಈ ವಿಷಯ ಗೊತ್ತಾಯಿತು. ಬಳಿಕ ಅವರ ಹೆಸರು ಸೇರಿಸಲಾಯಿತು. ಶಿವಕುಮಾರ ಸ್ವಾಮೀಜಿ ಅವರಿಗೆ ಮಠಕ್ಕೆ ತೆರಳಿ ಪದವಿ ಪ್ರದಾನ ಮಾಡಲಾಗುವುದು' ಎಂದು ಅವರು ತಿಳಿಸಿದರು.<br /> <br /> `ನಾಲ್ಕು ಅಥವಾ ಐದು ಮಂದಿ ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲು ಯೋಚಿಸಲಾಗಿತ್ತು. ಕಳೆದ ವರ್ಷ ಯಾರಿಗೂ ಈ ಗೌರವ ನೀಡಿರಲಿಲ್ಲ. ಹೀಗಾಗಿ ಈ ಸಲ ಏಳು ಮಂದಿಗೆ ನೀಡಲಾಗುತ್ತಿದೆ. ಮುಂದಿನ ವರ್ಷ ನಾಲ್ಕು ಅಥವಾ ಐದು ಮಂದಿಗೆ ಮಾತ್ರ ನೀಡಲಾಗುವುದು' ಎಂದು ಅವರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಾಹ್ಯಾಕಾಶ ವಿಜ್ಞಾನಿ ಡಾ.ಯು.ಆರ್.ರಾವ್, ಪ್ರಸಿದ್ಧ ಕ್ರಿಕೆಟ್ ಆಟಗಾರ ಜಿ.ಆರ್.ವಿಶ್ವನಾಥ್, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಸೇರಿದಂತೆ ಏಳು ಮಂದಿ ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ.<br /> <br /> `ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ, ಹಿನ್ನೆಲೆ ಗಾಯಕಿ ಬಿ.ಕೆ. ಸುಮಿತ್ರಾ, ಲೇಖಕ ಕೆ.ಸತ್ಯನಾರಾಯಣ, ಸಂಸ್ಕೃತ ವಿದ್ವಾಂಸರಾದ ಡಾ.ವನಿತಾ ರಾಮಸ್ವಾಮಿ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಇದೇ 18ರಂದು ನಡೆಯಲಿರುವ 48ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುವುದು' ಎಂದು ಕುಲಪತಿ ಪ್ರೊ.ಬಿ ತಿಮ್ಮೇಗೌಡ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> `ಹಿರಿಯ ಸಾಹಿತಿ ದೇವನೂರ ಮಹಾದೇವ ಅವರಿಗೂ ಗೌರವ ಡಾಕ್ಟರೇಟ್ ನೀಡಲು ಉದ್ದೇಶಿಸಲಾಗಿತ್ತು. ಅವರನ್ನು ಇತ್ತೀಚೆಗೆ ಭೇಟಿಯಾಗಿ ಗೌರವ ಸ್ವೀಕರಿಸುವಂತೆ ವಿನಂತಿ ಮಾಡಲಾಗಿತ್ತು. ಅವರು ಸ್ಪಷ್ಟವಾಗಿ ನಿರಾಕರಿಸಿದರು. ಮೈಸೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಅನ್ನು ನಿರಾಕರಿಸಿದ್ದರು' ಎಂದು ಅವರು ಹೇಳಿದರು.<br /> <br /> `ಯು.ಆರ್. ರಾವ್ ಅವರಿಗೆ ವಿವಿಧ ವಿವಿಗಳಿಂದ 20ಕ್ಕೂ ಅಧಿಕ ಗೌರವ ಡಾಕ್ಟರೇಟ್ಗಳು ದೊರಕಿವೆ. ಆದರೆ, ಬೆಂಗಳೂರು ವಿವಿಯಿಂದ ಸಿಕ್ಕಿರಲಿಲ್ಲ. ಒಂದು ವಾರದ ಹಿಂದೆ ಈ ವಿಷಯ ಗೊತ್ತಾಯಿತು. ಬಳಿಕ ಅವರ ಹೆಸರು ಸೇರಿಸಲಾಯಿತು. ಶಿವಕುಮಾರ ಸ್ವಾಮೀಜಿ ಅವರಿಗೆ ಮಠಕ್ಕೆ ತೆರಳಿ ಪದವಿ ಪ್ರದಾನ ಮಾಡಲಾಗುವುದು' ಎಂದು ಅವರು ತಿಳಿಸಿದರು.<br /> <br /> `ನಾಲ್ಕು ಅಥವಾ ಐದು ಮಂದಿ ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲು ಯೋಚಿಸಲಾಗಿತ್ತು. ಕಳೆದ ವರ್ಷ ಯಾರಿಗೂ ಈ ಗೌರವ ನೀಡಿರಲಿಲ್ಲ. ಹೀಗಾಗಿ ಈ ಸಲ ಏಳು ಮಂದಿಗೆ ನೀಡಲಾಗುತ್ತಿದೆ. ಮುಂದಿನ ವರ್ಷ ನಾಲ್ಕು ಅಥವಾ ಐದು ಮಂದಿಗೆ ಮಾತ್ರ ನೀಡಲಾಗುವುದು' ಎಂದು ಅವರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>