<p><strong>ಬೆಂಗಳೂರು</strong>: ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ (ಐಸಿಟಿ) ಬಳಕೆ ಖಾಸಗಿ ಕ್ಷೇತ್ರದಲ್ಲಿ ಸಾಕಷ್ಟು ಪ್ರಮಾಣದಲ್ಲಿದ್ದರೂ ದೇಶದ ಶಿಕ್ಷಣ ಕ್ಷೇತ್ರದಲ್ಲಿ ಇದು ನಿರೀಕ್ಷಿತ ಪ್ರಮಾಣದಲ್ಲಿ ಬಳಕೆಯಾಗುತ್ತಿಲ್ಲ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್. ಆಚಾರ್ಯ ಹೇಳಿದರು.<br /> <br /> ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಬೆಂಗಳೂರಿನಲ್ಲಿ ಮಂಗಳವಾರ ಆಯೋಜಿಸಿದ್ದ ಮಾಹಿತಿ ತಂತ್ರಜ್ಞಾನ ಕುರಿತ ಒಂದು ದಿನದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> `ಶಿಕ್ಷಣ ಕ್ಷೇತ್ರದಲ್ಲಿ ಐಸಿಟಿ ಬಳಕೆ ಹೆಚ್ಚಾದಂತೆಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ~ ಎಂದು ಹೇಳಿದರು. ದೇಶದ ಎಲ್ಲ ಉನ್ನತ ಶಿಕ್ಷಣ ಕೇಂದ್ರಗಳಲ್ಲೂ ಲಭ್ಯವಿರುವ ಕೇಂದ್ರೀಕೃತ ಮಾಹಿತಿ ಕೋಶವೊಂದರ ಸ್ಥಾಪನೆಗೂ ಐಸಿಟಿ ನೆರವಾಗಲಿದೆ. ಕಲಿಕೆಯ ಪ್ರಕ್ರಿಯೆ ಇಂಟರ್ನೆಟ್ ಆಧರಿಸಿ ನಡೆಯಲಿದೆ. ಶಿಕ್ಷಣದ ಪ್ರಕ್ರಿಯೆ ಸಂಪೂರ್ಣವಾಗಿ ವಿದ್ಯಾರ್ಥಿ ಕೇಂದ್ರಿತವಾಗುವುದರ ಜೊತೆಗೆ ಮಾಹಿತಿ ಪಡೆದುಕೊಳ್ಳುವ ಕಾರ್ಯ ಸುಲಭವಾಗಲಿದೆ ಎಂದರು. <br /> <br /> ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಉಪನ್ಯಾಸಕರು ತಮ್ಮ ಪಠ್ಯಕ್ರಮಗಳನ್ನು ಕಾಲದ ಅಗತ್ಯಗಳಿಗೆ ತಕ್ಕಂತೆ ಮಾರ್ಪಾಡು ಮಾಡಿಕೊಳ್ಳುವತ್ತ ಗಮನಹರಿಸಬೇಕು ಎಂದು ಕರೆ ನೀಡಿದರು.<br /> ಪರಿಷತ್ತಿನ ಉಪಾಧ್ಯಕ್ಷ ಡಾ.ಎಸ್. ಸಿ. ಶರ್ಮಾ ಮಾತನಾಡಿ, `ಮಾನವಿಕ ಮತ್ತು ಜೀವ ವಿಜ್ಞಾನ ಕೋರ್ಸ್ಗಳಿಗೂ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ ಅರಿವು ಅತ್ಯಗತ್ಯ~ ಎಂದರು. ಪರಿಷತ್ತಿನ ಸದಸ್ಯ ಕಾರ್ಯದರ್ಶಿ ಪ್ರೊ.ಎಂ. ಕಾವೇರಿಯಪ್ಪ ಹಾಗೂ ಇತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ (ಐಸಿಟಿ) ಬಳಕೆ ಖಾಸಗಿ ಕ್ಷೇತ್ರದಲ್ಲಿ ಸಾಕಷ್ಟು ಪ್ರಮಾಣದಲ್ಲಿದ್ದರೂ ದೇಶದ ಶಿಕ್ಷಣ ಕ್ಷೇತ್ರದಲ್ಲಿ ಇದು ನಿರೀಕ್ಷಿತ ಪ್ರಮಾಣದಲ್ಲಿ ಬಳಕೆಯಾಗುತ್ತಿಲ್ಲ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್. ಆಚಾರ್ಯ ಹೇಳಿದರು.<br /> <br /> ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಬೆಂಗಳೂರಿನಲ್ಲಿ ಮಂಗಳವಾರ ಆಯೋಜಿಸಿದ್ದ ಮಾಹಿತಿ ತಂತ್ರಜ್ಞಾನ ಕುರಿತ ಒಂದು ದಿನದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> `ಶಿಕ್ಷಣ ಕ್ಷೇತ್ರದಲ್ಲಿ ಐಸಿಟಿ ಬಳಕೆ ಹೆಚ್ಚಾದಂತೆಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ~ ಎಂದು ಹೇಳಿದರು. ದೇಶದ ಎಲ್ಲ ಉನ್ನತ ಶಿಕ್ಷಣ ಕೇಂದ್ರಗಳಲ್ಲೂ ಲಭ್ಯವಿರುವ ಕೇಂದ್ರೀಕೃತ ಮಾಹಿತಿ ಕೋಶವೊಂದರ ಸ್ಥಾಪನೆಗೂ ಐಸಿಟಿ ನೆರವಾಗಲಿದೆ. ಕಲಿಕೆಯ ಪ್ರಕ್ರಿಯೆ ಇಂಟರ್ನೆಟ್ ಆಧರಿಸಿ ನಡೆಯಲಿದೆ. ಶಿಕ್ಷಣದ ಪ್ರಕ್ರಿಯೆ ಸಂಪೂರ್ಣವಾಗಿ ವಿದ್ಯಾರ್ಥಿ ಕೇಂದ್ರಿತವಾಗುವುದರ ಜೊತೆಗೆ ಮಾಹಿತಿ ಪಡೆದುಕೊಳ್ಳುವ ಕಾರ್ಯ ಸುಲಭವಾಗಲಿದೆ ಎಂದರು. <br /> <br /> ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಉಪನ್ಯಾಸಕರು ತಮ್ಮ ಪಠ್ಯಕ್ರಮಗಳನ್ನು ಕಾಲದ ಅಗತ್ಯಗಳಿಗೆ ತಕ್ಕಂತೆ ಮಾರ್ಪಾಡು ಮಾಡಿಕೊಳ್ಳುವತ್ತ ಗಮನಹರಿಸಬೇಕು ಎಂದು ಕರೆ ನೀಡಿದರು.<br /> ಪರಿಷತ್ತಿನ ಉಪಾಧ್ಯಕ್ಷ ಡಾ.ಎಸ್. ಸಿ. ಶರ್ಮಾ ಮಾತನಾಡಿ, `ಮಾನವಿಕ ಮತ್ತು ಜೀವ ವಿಜ್ಞಾನ ಕೋರ್ಸ್ಗಳಿಗೂ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ ಅರಿವು ಅತ್ಯಗತ್ಯ~ ಎಂದರು. ಪರಿಷತ್ತಿನ ಸದಸ್ಯ ಕಾರ್ಯದರ್ಶಿ ಪ್ರೊ.ಎಂ. ಕಾವೇರಿಯಪ್ಪ ಹಾಗೂ ಇತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>