<p><strong>ಬೆಂಗಳೂರು: </strong>ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿ (ಐಸಿಡಿಎಸ್) ಅವ್ಯವಹಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಶಿಫಾರಸು ಆಧರಿಸಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಉಷಾ ಪಟ್ವಾರಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.<br /> <br /> ಐಸಿಡಿಎಸ್ ಯೋಜನೆಯಲ್ಲಿ ಅವ್ಯವಹಾರ ನಡೆಸಿರುವುದು ಮತ್ತು ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಪಟ್ವಾರಿ, ಐಎಎಸ್ ಅಧಿಕಾರಿ ಶಮ್ಲಾ ಇಕ್ಬಾಲ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮುನಿರಾಜು ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. <br /> ದಾಳಿ ನಡೆದ ಸಂದರ್ಭದಲ್ಲಿ ಉಷಾ ಅವರು ಐಸಿಡಿಎಸ್ ಜಂಟಿ ನಿರ್ದೇಶಕರಾಗಿದ್ದರು. ನಂತರ ಅವರನ್ನು ಮಹಿಳಾ ಅಭಿವೃದ್ಧಿ ನಿಗಮಕ್ಕೆ ವರ್ಗಾವಣೆ ಮಾಡಲಾಗಿತ್ತು.<br /> <br /> ಪ್ರಕರಣ ದಾಖಲಾದ ಕೆಲ ದಿನಗಳಲ್ಲೇ ಮುನಿರಾಜು ಅವರನ್ನು ಅಮಾನತು ಮಾಡಲಾಗಿತ್ತು. ಶಮ್ಲಾ ಅವರನ್ನು ಇತ್ತೀಚೆಗೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಸೋಮವಾರ ಉಷಾ ಪಟ್ವಾರಿ ಅವರನ್ನೂ ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿ (ಐಸಿಡಿಎಸ್) ಅವ್ಯವಹಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಶಿಫಾರಸು ಆಧರಿಸಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಉಷಾ ಪಟ್ವಾರಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.<br /> <br /> ಐಸಿಡಿಎಸ್ ಯೋಜನೆಯಲ್ಲಿ ಅವ್ಯವಹಾರ ನಡೆಸಿರುವುದು ಮತ್ತು ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಪಟ್ವಾರಿ, ಐಎಎಸ್ ಅಧಿಕಾರಿ ಶಮ್ಲಾ ಇಕ್ಬಾಲ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮುನಿರಾಜು ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. <br /> ದಾಳಿ ನಡೆದ ಸಂದರ್ಭದಲ್ಲಿ ಉಷಾ ಅವರು ಐಸಿಡಿಎಸ್ ಜಂಟಿ ನಿರ್ದೇಶಕರಾಗಿದ್ದರು. ನಂತರ ಅವರನ್ನು ಮಹಿಳಾ ಅಭಿವೃದ್ಧಿ ನಿಗಮಕ್ಕೆ ವರ್ಗಾವಣೆ ಮಾಡಲಾಗಿತ್ತು.<br /> <br /> ಪ್ರಕರಣ ದಾಖಲಾದ ಕೆಲ ದಿನಗಳಲ್ಲೇ ಮುನಿರಾಜು ಅವರನ್ನು ಅಮಾನತು ಮಾಡಲಾಗಿತ್ತು. ಶಮ್ಲಾ ಅವರನ್ನು ಇತ್ತೀಚೆಗೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಸೋಮವಾರ ಉಷಾ ಪಟ್ವಾರಿ ಅವರನ್ನೂ ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>