<p><strong>ಬೆಂಗಳೂರು: </strong>ಕೆಐಎಡಿಬಿ ಭೂ ಹಗರಣದಲ್ಲಿ ಸಿಲುಕಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರಿಗೆ ಕ್ಯಾನ್ಸರ್ ಸೇರಿದಂತೆ ಗಂಭೀರ ಸ್ವರೂಪದ ಕಾಯಿಲೆಗಳು ಇವೆ ಎಂದು ವಾದಿಸುತ್ತಿದ್ದರೂ, ಇದುವರೆಗೆ ಅವರ ಪರ ವಕೀಲರು ಯಾವುದೇ ದಾಖಲೆಗಳನ್ನು ಹಾಜರುಪಡಿಸಿಲ್ಲ. <br /> <br /> ಈ ಹಿನ್ನೆಲೆಯಲ್ಲಿ ಅವರಿಗೆ ಜಾಮೀನು ನೀಡಬಾರದು ಎಂದು ಲೋಕಾಯುಕ್ತ ಪೊಲೀಸರು ವಿಶೇಷ ಕೋರ್ಟ್ಗೆ ಶನಿವಾರ ತಿಳಿಸಿದ್ದಾರೆ.<br /> <br /> ಜಾಮೀನು ಅರ್ಜಿಗೆ ಲಿಖಿತ ರೂಪದಲ್ಲಿ ಆಕ್ಷೇಪಣಾ ಹೇಳಿಕೆ ಸಲ್ಲಿಸಿರುವ ಅವರು, ಜಾಮೀನು ನೀಡಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಮುನ್ನ ಹಲವು ಬಾರಿ ವಿಕ್ಟೋರಿಯಾ ಆಸ್ಪತ್ರೆಗೂ ಚಿಕಿತ್ಸೆಗೆಂದು ಕಟ್ಟಾ ಬಂದಿದ್ದಾರೆ. ಆ ವೇಳೆ ಅವರ ಆರೋಗ್ಯದಲ್ಲಿ ಗಂಭೀರ ರೂಪದ ಸಮಸ್ಯೆಗಳು ಇರಲಿಲ್ಲ. ಬಂಧನಕ್ಕೆ ಒಳಗಾದ ತಕ್ಷಣ ಸಮಸ್ಯೆ ಎದುರಾಗಿದೆ ಎಂದು ಅವರು ತಿಳಿಸಿದ್ದಾರೆ.<br /> <br /> ಇದಕ್ಕೆ ಕಟ್ಟಾ ಪರ ವಕೀಲ ರವಿ ಬಿ. ನಾಯಕ್ ಆಕ್ಷೇಪ ವ್ಯಕ್ತಪಡಿಸಿದರು. ಕಟ್ಟಾ ಅವರಿಗೆ ಕ್ಯಾನ್ಸರ್ ಉಲ್ಭಣಗೊಂಡಿದ್ದು, ಲಂಡನ್ನಲ್ಲಿ ಚಿಕಿತ್ಸೆ ಅಗತ್ಯ ಇದೆ ಎಂದರು. ಈ ಹಿನ್ನೆಲೆಯಲ್ಲಿ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸ ಬಯಸಿರುವ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದರು. ವೈದ್ಯಕೀಯ ದಾಖಲೆಯನ್ನು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಅಂದು ಹಾಜರುಪಡಿಸುವಂತೆ ಅವರು ಆದೇಶಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೆಐಎಡಿಬಿ ಭೂ ಹಗರಣದಲ್ಲಿ ಸಿಲುಕಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರಿಗೆ ಕ್ಯಾನ್ಸರ್ ಸೇರಿದಂತೆ ಗಂಭೀರ ಸ್ವರೂಪದ ಕಾಯಿಲೆಗಳು ಇವೆ ಎಂದು ವಾದಿಸುತ್ತಿದ್ದರೂ, ಇದುವರೆಗೆ ಅವರ ಪರ ವಕೀಲರು ಯಾವುದೇ ದಾಖಲೆಗಳನ್ನು ಹಾಜರುಪಡಿಸಿಲ್ಲ. <br /> <br /> ಈ ಹಿನ್ನೆಲೆಯಲ್ಲಿ ಅವರಿಗೆ ಜಾಮೀನು ನೀಡಬಾರದು ಎಂದು ಲೋಕಾಯುಕ್ತ ಪೊಲೀಸರು ವಿಶೇಷ ಕೋರ್ಟ್ಗೆ ಶನಿವಾರ ತಿಳಿಸಿದ್ದಾರೆ.<br /> <br /> ಜಾಮೀನು ಅರ್ಜಿಗೆ ಲಿಖಿತ ರೂಪದಲ್ಲಿ ಆಕ್ಷೇಪಣಾ ಹೇಳಿಕೆ ಸಲ್ಲಿಸಿರುವ ಅವರು, ಜಾಮೀನು ನೀಡಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಮುನ್ನ ಹಲವು ಬಾರಿ ವಿಕ್ಟೋರಿಯಾ ಆಸ್ಪತ್ರೆಗೂ ಚಿಕಿತ್ಸೆಗೆಂದು ಕಟ್ಟಾ ಬಂದಿದ್ದಾರೆ. ಆ ವೇಳೆ ಅವರ ಆರೋಗ್ಯದಲ್ಲಿ ಗಂಭೀರ ರೂಪದ ಸಮಸ್ಯೆಗಳು ಇರಲಿಲ್ಲ. ಬಂಧನಕ್ಕೆ ಒಳಗಾದ ತಕ್ಷಣ ಸಮಸ್ಯೆ ಎದುರಾಗಿದೆ ಎಂದು ಅವರು ತಿಳಿಸಿದ್ದಾರೆ.<br /> <br /> ಇದಕ್ಕೆ ಕಟ್ಟಾ ಪರ ವಕೀಲ ರವಿ ಬಿ. ನಾಯಕ್ ಆಕ್ಷೇಪ ವ್ಯಕ್ತಪಡಿಸಿದರು. ಕಟ್ಟಾ ಅವರಿಗೆ ಕ್ಯಾನ್ಸರ್ ಉಲ್ಭಣಗೊಂಡಿದ್ದು, ಲಂಡನ್ನಲ್ಲಿ ಚಿಕಿತ್ಸೆ ಅಗತ್ಯ ಇದೆ ಎಂದರು. ಈ ಹಿನ್ನೆಲೆಯಲ್ಲಿ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸ ಬಯಸಿರುವ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದರು. ವೈದ್ಯಕೀಯ ದಾಖಲೆಯನ್ನು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಅಂದು ಹಾಜರುಪಡಿಸುವಂತೆ ಅವರು ಆದೇಶಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>