‘ಸಂಸ್ಕೃತಿ ಇಲಾಖೆ ಎರಡು ವರ್ಷಗಳಿಂದ ಕಾಮಗಾರಿಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಿಲ್ಲ. ಅದೇ ರೀತಿ, ಕನ್ನಡ ಭವನ ನಿರ್ವಹಣೆಗೆ ಹೊಸ ಪ್ರಸ್ತಾವನೆಯನ್ನೂ ಸರ್ಕಾರಕ್ಕೆ ಸಲ್ಲಿಸಿಲ್ಲ. ಈ ವಿಚಾರವನ್ನು ಇಲಾಖೆಯ ನಿರ್ದೇಶಕರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.ಅನುದಾನ ಬಿಡುಗಡೆಯಾಗುವವರೆಗೂ ಯಾವುದೇ ಕೆಲಸ ಮಾಡಬೇಡಿ ಎಂದು ನಿರ್ದೇಶಕರೇ ಸೂಚಿಸಿದ್ದಾರೆ. ಹೀಗಾಗಿ ಕಸ ವಿಲೇವಾರಿ ಮಾಡುತ್ತಿಲ್ಲ’ ಎಂದು ಲೋಕೋಪಯೋಗಿ ಇಲಾಖೆಯ ಸಿಬ್ಬಂದಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.