<p><strong>ಬೆಂಗಳೂರು: </strong>ಗದಗ ಜಿಲ್ಲೆಯ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮವನ್ನಾಗಿ ಘೋಷಿಸದಂತೆ ಒತ್ತಾಯಿಸಿ ಜಿಲ್ಲೆಯ ದಲಿತ, ಅಲ್ಪಸಂಖ್ಯಾತ ಮತ್ತು ಕುರುಬ ಸಮುದಾಯದ ಜನರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಗರದಲ್ಲಿ ಶುಕ್ರವಾರ ಮನವಿ ಸಲ್ಲಿಸಿತು.<br /> <br /> ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ ಅಖಿಲ ಭಾರತ ಬಂಜಾರ ಸೇವಾ ಸಂಘದ ಗದಗ ತಾಲ್ಲೂಕು ಘಟಕದ ಅಧ್ಯಕ್ಷ ಮೋತಿಲಾಲ ಚನ್ನಪ್ಪ ಮಾಳಗಿಮನಿ, `ಶಿರಹಟ್ಟಿ, ಮುಂಡರಗಿ ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಬರದ ಸ್ಥಿತಿ ಇದೆ. ಈ ಭಾಗದ ಜನರು ತಮ್ಮ ಜಾನುವಾರುಗಳ ಮೇವಿಗೆ ಕಪ್ಪತ್ತಗುಡ್ಡದಲ್ಲಿ ಬೆಳೆಯುವ ಹುಲ್ಲನ್ನು ಅವಲಂಬಿಸಿದ್ದಾರೆ. ಸರ್ಕಾರ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮವನ್ನಾಗಿ ಘೋಷಿಸಿದರೆ ಸ್ಥಳೀಯರಿಗೆ ತೊಂದರೆಯಾಗಲಿದೆ' ಎಂದು ಅಳಲು ತೋಡಿಕೊಂಡರು.<br /> <br /> `ಕಪ್ಪತ್ತಗುಡ್ಡದಲ್ಲಿ ವನ್ಯಜೀವಿಗಳೇ ಇಲ್ಲ. ಆದರೂ ಕೆಲ ಡೋಂಗಿ ಪರಿಸರವಾದಿಗಳು ರಾಜಕೀಯ ಉದ್ದೇಶಕ್ಕಾಗಿ ಈ ಪ್ರದೇಶವನ್ನು ವನ್ಯಜೀವಿ ಧಾಮ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಆ ಮೂಲಕ ಈ ಭಾಗದಲ್ಲಿರುವ ಲಂಬಾಣಿ, ಕುರುಬ, ದಲಿತ ಸಮುದಾಯದ ಜನರನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆ' ಎಂದು ಅವರು ದೂರಿದರು.<br /> <br /> ಸ್ಥಳೀಯರ ಬದುಕಿಗೆ ಆಸರೆಯಾಗಿರುವ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮವನ್ನಾಗಿ ಘೋಷಿಸಿದರೆ ವಿಧಾನಸೌಧದ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತೇವೆ ಎಂದು ಗದಗ ಜಿಲ್ಲಾ ಬಂಜಾರ ರೈತ ವೇದಿಕೆ ಸಂಚಾಲಕ ಸಿ.ಲಕ್ಷ್ಮಣ ಹೇಳಿದರು.<br /> <br /> `ಹಿಂದುಳಿದ ವರ್ಗದವರಿಗೆ ಹಾಗೂ ದಲಿತರಿಗೆ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ. ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮವನ್ನಾಗಿ ಮಾಡುವ ಪ್ರಸ್ತಾವವನ್ನು ಅಂಗೀಕರಿಸುವುದಿಲ್ಲ. ಈ ಸಂಬಂಧ ಅರಣ್ಯ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸುತ್ತೇನೆ' ಎಂದು ಸಿದ್ದರಾಮಯ್ಯ ನಿಯೋಗಕ್ಕೆ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಗದಗ ಜಿಲ್ಲೆಯ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮವನ್ನಾಗಿ ಘೋಷಿಸದಂತೆ ಒತ್ತಾಯಿಸಿ ಜಿಲ್ಲೆಯ ದಲಿತ, ಅಲ್ಪಸಂಖ್ಯಾತ ಮತ್ತು ಕುರುಬ ಸಮುದಾಯದ ಜನರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಗರದಲ್ಲಿ ಶುಕ್ರವಾರ ಮನವಿ ಸಲ್ಲಿಸಿತು.<br /> <br /> ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ ಅಖಿಲ ಭಾರತ ಬಂಜಾರ ಸೇವಾ ಸಂಘದ ಗದಗ ತಾಲ್ಲೂಕು ಘಟಕದ ಅಧ್ಯಕ್ಷ ಮೋತಿಲಾಲ ಚನ್ನಪ್ಪ ಮಾಳಗಿಮನಿ, `ಶಿರಹಟ್ಟಿ, ಮುಂಡರಗಿ ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಬರದ ಸ್ಥಿತಿ ಇದೆ. ಈ ಭಾಗದ ಜನರು ತಮ್ಮ ಜಾನುವಾರುಗಳ ಮೇವಿಗೆ ಕಪ್ಪತ್ತಗುಡ್ಡದಲ್ಲಿ ಬೆಳೆಯುವ ಹುಲ್ಲನ್ನು ಅವಲಂಬಿಸಿದ್ದಾರೆ. ಸರ್ಕಾರ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮವನ್ನಾಗಿ ಘೋಷಿಸಿದರೆ ಸ್ಥಳೀಯರಿಗೆ ತೊಂದರೆಯಾಗಲಿದೆ' ಎಂದು ಅಳಲು ತೋಡಿಕೊಂಡರು.<br /> <br /> `ಕಪ್ಪತ್ತಗುಡ್ಡದಲ್ಲಿ ವನ್ಯಜೀವಿಗಳೇ ಇಲ್ಲ. ಆದರೂ ಕೆಲ ಡೋಂಗಿ ಪರಿಸರವಾದಿಗಳು ರಾಜಕೀಯ ಉದ್ದೇಶಕ್ಕಾಗಿ ಈ ಪ್ರದೇಶವನ್ನು ವನ್ಯಜೀವಿ ಧಾಮ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಆ ಮೂಲಕ ಈ ಭಾಗದಲ್ಲಿರುವ ಲಂಬಾಣಿ, ಕುರುಬ, ದಲಿತ ಸಮುದಾಯದ ಜನರನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆ' ಎಂದು ಅವರು ದೂರಿದರು.<br /> <br /> ಸ್ಥಳೀಯರ ಬದುಕಿಗೆ ಆಸರೆಯಾಗಿರುವ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮವನ್ನಾಗಿ ಘೋಷಿಸಿದರೆ ವಿಧಾನಸೌಧದ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತೇವೆ ಎಂದು ಗದಗ ಜಿಲ್ಲಾ ಬಂಜಾರ ರೈತ ವೇದಿಕೆ ಸಂಚಾಲಕ ಸಿ.ಲಕ್ಷ್ಮಣ ಹೇಳಿದರು.<br /> <br /> `ಹಿಂದುಳಿದ ವರ್ಗದವರಿಗೆ ಹಾಗೂ ದಲಿತರಿಗೆ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ. ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮವನ್ನಾಗಿ ಮಾಡುವ ಪ್ರಸ್ತಾವವನ್ನು ಅಂಗೀಕರಿಸುವುದಿಲ್ಲ. ಈ ಸಂಬಂಧ ಅರಣ್ಯ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸುತ್ತೇನೆ' ಎಂದು ಸಿದ್ದರಾಮಯ್ಯ ನಿಯೋಗಕ್ಕೆ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>