‘ಕ್ಷೇತ್ರದಾದ್ಯಂತ ಅಗ್ಯತವಿರುವೆಡೆ ಮೇಲ್ಸೇತುವೆ, ರಸ್ತೆ, ಶಾಲಾ ಕಟ್ಟಡ ನಿರ್ಮಿಸಲಾಗುತ್ತಿದೆ. ಹೇರೋಹಳ್ಳಿಯಲ್ಲಿ ಸರ್ಕಾರಿ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗಿದೆ. ಕೆಂಗೇರಿ ಆಸುಪಾಸಿನಲ್ಲಿ ಸರ್ಕಾರಿ ಕಾಲೇಜು ಶೀಘ್ರ ತೆರೆಯಲಾಗುವುದು. ಯುಪಿಎಸ್ಸಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸ್ಥಳೀಯ ವಿದ್ಯಾರ್ಥಿಗಳು ತಯಾರಾಗಲು ₹10 ಲಕ್ಷ ಅನುದಾನದಲ್ಲಿ ಪುಸ್ತಕಗಳನ್ನು ಗ್ರಂಥಾಲಯಕ್ಕೆ ಒದಗಿಸಲಾಗುವುದು’ ಎಂದು ಭರವಸೆ ನೀಡಿದರು.