‘ಇಬ್ಬರೂ ರೌಡಿ ಚಟುವಟಿಕೆ ಮೂಲಕ ಸಿದ್ದಾರ್ಥ ಕಾಲೊನಿ ನಿವಾಸಿಗಳಿಗೆ ತೊಂದರೆ ಕೊಡುತ್ತಿದ್ದರು. ಜನರ ಪರ ನಿಂತಿದ್ದ ವೆಂಕಟೇಶಪ್ಪ, ಈ ರೌಡಿಗಳ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿದ್ದರು. ಇದರಿಂದ ಕುಪಿತಗೊಂಡ ಆರೋಪಿಗಳು, ವ್ಯವಸ್ಥಿತವಾಗಿ ಸಂಚು ರೂಪಿಸಿ ಅವರನ್ನು ಹತ್ಯೆಗೈದಿದ್ದರು. ಕೃತ್ಯಕ್ಕೆ ಬಳಸಿದ್ದ ಚಾಕು ಹಾಗೂ ರಕ್ತಸಿಕ್ತ ಬಟ್ಟೆಗಳು ವಾಸುದೇವ್ ಮನೆಯಲ್ಲೇ ಸಿಕ್ಕಿವೆ. ಪ್ರತ್ಯಕ್ಷದರ್ಶಿಗಳು ಸೇರಿದಂತೆ 31 ಸಾಕ್ಷಿಗಳು ಹೇಳಿಕೆ ಕೊಟ್ಟಿದ್ದಾರೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಮನವಿ ಮಾಡಿದರು.