1971ರಲ್ಲಿ ಭಾರತ–ಪಾಕ್ ಮಧ್ಯೆ ಯುದ್ಧ ನಡೆದಾಗ ಜಗಜೀವನ ರಾಮ್ ರಕ್ಷಣಾ ಸಚಿವರಾಗಿದ್ದರು. ಯುದ್ಧದಲ್ಲಿ ಭಾರತ ಗೆಲುವು ಸಾಧಿಸಿದ್ದರೂ ಅದರ ಕೀರ್ತಿ ಅವರಿಗೆ ಸಲ್ಲದಂತೆ ಕಾಂಗ್ರೆಸ್ ಪಕ್ಷದ ನಾಯಕರು ನೋಡಿಕೊಂಡಿದ್ದರು. ಅಲ್ಲದೆ, ಅವರು ಕೃಷಿ ಸಚಿವರಾಗಿದ್ದಾಗ ಜಾರಿಗೆ ತಂದ ಕಾರ್ಯಕ್ರಮಗಳನ್ನು ಕೇಂದ್ರವು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರಲಿಲ್ಲ. ಆದರೆ, ಪ್ರಧಾನಿಯಾಗಿದ್ದ ಎಚ್.ಡಿ.ದೇವೇಗೌಡರು ಅವುಗಳನ್ನು ಅನುಷ್ಠಾನಗೊಳಿಸಲು ಪ್ರಯತ್ನಿಸಿದ್ದರು. ಹೀಗಾಗಿ, ಅವರ ಬಗ್ಗೆ ಮಾತನಾಡುವ ನೈತಿಕತೆ ದೇವೇಗೌಡರಿಗೆ ಮಾತ್ರ ಇದೆ ಎಂದು ವಿವರಿಸಿದರು.