<p><strong>ನೆಲಮಂಗಲ:</strong> ಬೆಂಗಳೂರಿನಿಂದ ನೆಲಮಂಗಲಕ್ಕೆ ರೈಲು ಸೇವೆ ಆರಂಭಿಸಿದ್ದರೂ ಕಾಟಾಚಾರದಿಂದ ಕೂಡಿದೆ ಎಂದು ಆರೋಪಿಸಿ ಮಾಜಿ ಸಚಿವ ಅಂಜನಾಮೂರ್ತಿ ಅವರು ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಅವರಿಗೆ ಈಚೆಗೆ ಮನವಿ ಸಲ್ಲಿಸಿದರು.<br /> <br /> `ರೈಲಿನ ಸಂಚಾರ ವೇಳೆಯನ್ನು ಬದಲಿಸಲು, ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಮೂರು- ನಾಲ್ಕು ಬಾರಿ ಸಂಚರಿಸಲು ವ್ಯವಸ್ಥೆ ಮಾಡಬೇಕು. ಮಧ್ಯಾಹ್ನ 2.30ಕ್ಕೆ ಒಂದು ಟ್ರಿಪ್ ಸಂಚರಿಸುವುದರಿಂದ ನೌಕರ ವರ್ಗಕ್ಕೆ ಸಾರ್ವಜನಿಕರಿಗೆ ಪ್ರಯೋಜನವಿಲ್ಲ' ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.<br /> <br /> ಬೆಳಿಗ್ಗೆ 8.30ಕ್ಕೆ ನೆಲಮಂಗಲದಿಂದ ಹೊರಡುವಂತೆ, ಸಂಜೆ 6.30ಕ್ಕೆ ಬೆಂಗಳೂರಿನಿಂದ ರೈಲು ಹೊರಡುವ ವ್ಯವಸ್ಥೆ ಮಾಡಬೇಕು ಎಂದು ಅವರು ವಿನಂತಿಸಿದ್ದಾರೆ.<br /> <br /> ಸ್ವಯಂ ಉದ್ಯೋಗಕ್ಕೆ ಸಹಾಯಧನ: ಪ್ರಧಾನಮಂತ್ರಿ ಉದ್ಯೋಗ ಸ್ವಜನ ಯೋಜನೆ ಅಡಿ ನಿರುದ್ಯೋಗಿ ಯುವಕರಿಗೆ ಕೈಗಾರಿಕೆ ಆರಂಭಿಸಲು ಬ್ಯಾಂಕ್ಗಳಿಂದ 25 ಲಕ್ಷದ ವರೆಗೆ ಸಾಲ ನೀಡಲಾಗುವುದು.<br /> <br /> 18 ವರ್ಷಕ್ಕಿಂತ ಹೆಚ್ಚಿನ ಪ್ರಾಯದ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದು ಎಂದು ಸ್ಥಳೀಯ ಕುಶಲಕರ್ಮಿ ತರಬೇತಿ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.<br /> <br /> ತಾಲ್ಲೂಕಿನ ನಿರುದ್ಯೋಗಿ ಯುವಕರು ಜೂನ್ 30ರೊಳಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರಿಗೆ ಅರ್ಜಿ ಸಲ್ಲಿಸಬಹುದು. ಸಂಪರ್ಕಕ್ಕಾಗಿ 080-23142152.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> ಬೆಂಗಳೂರಿನಿಂದ ನೆಲಮಂಗಲಕ್ಕೆ ರೈಲು ಸೇವೆ ಆರಂಭಿಸಿದ್ದರೂ ಕಾಟಾಚಾರದಿಂದ ಕೂಡಿದೆ ಎಂದು ಆರೋಪಿಸಿ ಮಾಜಿ ಸಚಿವ ಅಂಜನಾಮೂರ್ತಿ ಅವರು ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಅವರಿಗೆ ಈಚೆಗೆ ಮನವಿ ಸಲ್ಲಿಸಿದರು.<br /> <br /> `ರೈಲಿನ ಸಂಚಾರ ವೇಳೆಯನ್ನು ಬದಲಿಸಲು, ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಮೂರು- ನಾಲ್ಕು ಬಾರಿ ಸಂಚರಿಸಲು ವ್ಯವಸ್ಥೆ ಮಾಡಬೇಕು. ಮಧ್ಯಾಹ್ನ 2.30ಕ್ಕೆ ಒಂದು ಟ್ರಿಪ್ ಸಂಚರಿಸುವುದರಿಂದ ನೌಕರ ವರ್ಗಕ್ಕೆ ಸಾರ್ವಜನಿಕರಿಗೆ ಪ್ರಯೋಜನವಿಲ್ಲ' ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.<br /> <br /> ಬೆಳಿಗ್ಗೆ 8.30ಕ್ಕೆ ನೆಲಮಂಗಲದಿಂದ ಹೊರಡುವಂತೆ, ಸಂಜೆ 6.30ಕ್ಕೆ ಬೆಂಗಳೂರಿನಿಂದ ರೈಲು ಹೊರಡುವ ವ್ಯವಸ್ಥೆ ಮಾಡಬೇಕು ಎಂದು ಅವರು ವಿನಂತಿಸಿದ್ದಾರೆ.<br /> <br /> ಸ್ವಯಂ ಉದ್ಯೋಗಕ್ಕೆ ಸಹಾಯಧನ: ಪ್ರಧಾನಮಂತ್ರಿ ಉದ್ಯೋಗ ಸ್ವಜನ ಯೋಜನೆ ಅಡಿ ನಿರುದ್ಯೋಗಿ ಯುವಕರಿಗೆ ಕೈಗಾರಿಕೆ ಆರಂಭಿಸಲು ಬ್ಯಾಂಕ್ಗಳಿಂದ 25 ಲಕ್ಷದ ವರೆಗೆ ಸಾಲ ನೀಡಲಾಗುವುದು.<br /> <br /> 18 ವರ್ಷಕ್ಕಿಂತ ಹೆಚ್ಚಿನ ಪ್ರಾಯದ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದು ಎಂದು ಸ್ಥಳೀಯ ಕುಶಲಕರ್ಮಿ ತರಬೇತಿ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.<br /> <br /> ತಾಲ್ಲೂಕಿನ ನಿರುದ್ಯೋಗಿ ಯುವಕರು ಜೂನ್ 30ರೊಳಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರಿಗೆ ಅರ್ಜಿ ಸಲ್ಲಿಸಬಹುದು. ಸಂಪರ್ಕಕ್ಕಾಗಿ 080-23142152.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>