ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕ ಇಲಾಖೆ ವ್ಯವಹಾರ ಪ್ರಕ್ರಿಯೆ ಸರಳೀಕರಣಕ್ಕೆ ಚಿಂತನೆ

Last Updated 6 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಕಾರ್ಮಿಕ ಇಲಾಖೆಯೊಂದಿಗೆ ವ್ಯವಹರಿಸಲು ಇದೀಗ ಹಲವು ಹಲವು ಅರ್ಜಿ, ಪ್ರಮಾಣಪತ್ರಗಳನ್ನು ಸಲ್ಲಿಸಬೇಕಾಗಿದ್ದು, ಬರುವ ದಿನಗಳಲ್ಲಿ ಈ ಪ್ರಕ್ರಿಯೆಯನ್ನು ಇನ್ನಷ್ಟು ಸರಳೀಕರಿಸಲಾಗುವುದು~ ಎಂದು ರಾಜ್ಯ ಕಾರ್ಮಿಕ ಇಲಾಖೆಯ ಆಯುಕ್ತ  ಎಸ್.ಆರ್. ಉಮಾಶಂಕರ್ ಪ್ರಕಟಿಸಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (ಎಫ್‌ಕೆಸಿಸಿಐ) ನಗರದಲ್ಲಿ ಮಂಗಳವಾರ ವಿವಿಧ ಕಂಪೆನಿಗಳ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳಿಗೆ ಏರ್ಪಡಿಸಿದ್ದ `ಕಾರ್ಮಿಕ ಕಾನೂನುಗಳ ಮಹತ್ವ ಮತ್ತು ಲಾಭಗಳು~ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

`ಹಲವಾರು ಕಾರ್ಮಿಕ ಕಾಯ್ದೆಗಳ ಸರಳೀಕರಣಕ್ಕೆ  ಅಖಿಲ ಭಾರತ ಮಟ್ಟದಲ್ಲಿ ಸಮಿತಿಯೊಂದನ್ನು ರಚಿಸಿದ ಮಾದರಿಯಲ್ಲೇ ರಾಜ್ಯದಲ್ಲೂ ಸಮಿತಿ ರಚಿಸಲಾಗಿತ್ತು. ಸಮಿತಿ ಶಿಫಾರಸುಗಳ ಬಳಿಕ ಪ್ರಮುಖ 6 ಕಾಯ್ದೆಗಳ ಅಡಿಯಲ್ಲಿ ಎಲ್ಲ ಕಾಯ್ದೆಗಳನ್ನು ತರಲು ಯೋಜಿಸಲಾಗಿದೆ. ಈ ಕುರಿತ ಕಡತಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಅನುಮೋದನೆ ನೀಡಿದ್ದಾರೆ~ ಎಂದರು.

`ಇಲಾಖೆಯ  ಮಾಹಿತಿಗಳನ್ನು ಆನ್‌ಲೈನ್‌ನಲ್ಲಿ ದೊರಕುವಂತೆ ಮಾಡುವುದೂ ನಮ್ಮ ಉದ್ದೇಶವಾಗಿದೆ~ ಎಂದು ಹೇಳಿದರು.`ಕಾರ್ಮಿಕ ಕಾನೂನುಗಳು ನಿರ್ಲಕ್ಷ್ಯದಿಂದ ಉಲ್ಲಂಘನೆ ಆಗುವ ಪ್ರಕರಣಗಳು ಕಂಡು ಬರುತ್ತಿವೆ. ಕಾಯ್ದೆಗಳು ಇರುವುದು ಕಾರ್ಮಿಕರ ಸಂರಕ್ಷಣೆಗೇ ಹೊರತು ಇನ್ನಾವುದೇ ಉದ್ದೇಶಕ್ಕಲ್ಲ.

ಆದ್ದರಿಂದ ಕಾಯ್ದೆಯನ್ವಯವೇ ಕೆಲಸ ನಿರ್ವಹಿಸಬೇಕು~ ಎಂದರು. ಎಫ್‌ಕೆಸಿಸಿಐ ಉಪಾಧ್ಯಕ್ಷ ಕೆ.ಶಿವಷಣ್ಮುಗಂ, ಸಂಸ್ಥೆಯ ಕೈಗಾರಿಕಾ ಸಂಬಂಧಗಳ ಸಮಿತಿಯ ಅಧ್ಯಕ್ಷೆ ರಾಜ್ ಭಾಸಿನ್, ಎಚ್‌ಆರ್ ರೆಸೊನನ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮ್ ಕೆ.ನವರತ್ನ ಅವರು ಉಪಸ್ಥಿತರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT