<p><strong>ಬೆಂಗಳೂರು:</strong> `ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಭಿವೃದ್ಧಿಗೆ ಸರ್ಕಾರ ಬಿಡುಗಡೆ ಮಾಡಿರುವ ವಿಶೇಷ ಯೋಜನೆಬಳಸಿಕೊಂಡು ನಿಗಮದ ಸರ್ವತೋಮುಖ ಅಭಿವೃದ್ಧಿ ಹಾಗೂ ಕುಶಲಕರ್ಮಿಗಳ ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸಲಾಗುವುದು' ಎಂದು ಸಣ್ಣ ಕೈಗಾರಿಕೆ ಸಚಿವ ಪ್ರಕಾಶ್ ಬಿ.ಹುಕ್ಕೇರಿ ಹೇಳಿದರು.<br /> <br /> ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮವು ಸೋಮವಾರ ನಗರದಲ್ಲಿ ಆಯೋಜಿಸಿದ್ದ `ಕಾವೇರಿ' ಕರಕುಶಲ ವಸ್ತುಗಳು, ಕೈಮಗ್ಗ ಮತ್ತು ಆಭರಣಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ, ನಿಗಮಕ್ಕೆ ಸ್ವಂತ ಕಟ್ಟಡವಿಲ್ಲ. ಕಟ್ಟಡ ನಿರ್ಮಾಣಕ್ಕೆ ಶೀಘ್ರ ಹಣ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.<br /> <br /> ಸೂರಜ್ಕುಂಡ್ನಲ್ಲಿ ನಿಗಮದ ವತಿಯಿಂದ ತೆರೆಯಲಾಗಿರುವ ವ್ಯಾಪಾರ ಮಳಿಗೆಗೆ ಗ್ರಾಹಕರುರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದ್ದರಿಂದ ದೇಶದ ವಿವಿಧ ಭಾಗಗಳಲ್ಲಿ ಕಲಾಮೇಳವನ್ನು ಏರ್ಪಡಿಸಲಾಗುವುದು ಎಂದರು.<br /> <br /> ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಾ.ಜಿ.ಕಲ್ಪನ ಮಾತನಾಡಿ, ರಾಜ್ಯದಲ್ಲಿರುವ ಕುಶಲಕರ್ಮಿಗಳನ್ನು ಪ್ರೋತ್ಸಾಹಿಸುವ ಮತ್ತು ಅವರು ಉತ್ಪಾದಿಸಿದ ವಸ್ತುಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಗಿದೆ. ಮೇಳವು ಜುಲೈ 24ರ ವರೆಗೆ ನಡೆಯಲಿದೆ ಎಂದರು.<br /> <br /> ಮೇಳದಲ್ಲಿ ನೇಕಾರಿಕೆ ಉತ್ಪನ್ನಗಳು, ಮಾರ್ಬಲ್ ಕಲ್ಲಿನಲ್ಲಿ ಮಾಡಲಾಗಿರುವ ಸೂಷ್ಮ ಕಲಾಕೃತಿಗಳು, ಬೀಟೆ ಮತ್ತಿತರರ ಮರದಲ್ಲಿ ತಯಾರಿಸಿರುವ ಕೆತ್ತನೆಗಳು ಸೇರಿದಂತೆ ಹಲವು ಬಗೆಯ ವಸ್ತುಗಳು ಶೇ 10ರಷ್ಟು ರಿಯಾಯಿತಿ ದರದಲ್ಲಿ ಗ್ರಾಹಕರಿಗೆ ಲಭ್ಯವಾಗಲಿವೆ ಎಂದರು.<br /> <br /> <strong>ವಿಳಾಸ:</strong> `ಕಾವೇರಿ', ರಾಜ್ಯ ಆರ್ಟ್ಸ್ ಅಂಡ್ ಕ್ರಾಪ್ಟ್ಸ್ ಎಂಪೋರಿಯಂ, ನಂ. 8/30, 6ನೇ `ಸಿ' ಮುಖ್ಯರಸ್ತೆ, 30ನೇ ಅಡ್ಡರಸ್ತೆ, ಜಯನಗರ 4ನೇ ಹಂತ, ಪೊಲೀಸ್ ಠಾಣೆ ಎದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಭಿವೃದ್ಧಿಗೆ ಸರ್ಕಾರ ಬಿಡುಗಡೆ ಮಾಡಿರುವ ವಿಶೇಷ ಯೋಜನೆಬಳಸಿಕೊಂಡು ನಿಗಮದ ಸರ್ವತೋಮುಖ ಅಭಿವೃದ್ಧಿ ಹಾಗೂ ಕುಶಲಕರ್ಮಿಗಳ ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸಲಾಗುವುದು' ಎಂದು ಸಣ್ಣ ಕೈಗಾರಿಕೆ ಸಚಿವ ಪ್ರಕಾಶ್ ಬಿ.ಹುಕ್ಕೇರಿ ಹೇಳಿದರು.<br /> <br /> ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮವು ಸೋಮವಾರ ನಗರದಲ್ಲಿ ಆಯೋಜಿಸಿದ್ದ `ಕಾವೇರಿ' ಕರಕುಶಲ ವಸ್ತುಗಳು, ಕೈಮಗ್ಗ ಮತ್ತು ಆಭರಣಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ, ನಿಗಮಕ್ಕೆ ಸ್ವಂತ ಕಟ್ಟಡವಿಲ್ಲ. ಕಟ್ಟಡ ನಿರ್ಮಾಣಕ್ಕೆ ಶೀಘ್ರ ಹಣ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.<br /> <br /> ಸೂರಜ್ಕುಂಡ್ನಲ್ಲಿ ನಿಗಮದ ವತಿಯಿಂದ ತೆರೆಯಲಾಗಿರುವ ವ್ಯಾಪಾರ ಮಳಿಗೆಗೆ ಗ್ರಾಹಕರುರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದ್ದರಿಂದ ದೇಶದ ವಿವಿಧ ಭಾಗಗಳಲ್ಲಿ ಕಲಾಮೇಳವನ್ನು ಏರ್ಪಡಿಸಲಾಗುವುದು ಎಂದರು.<br /> <br /> ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಾ.ಜಿ.ಕಲ್ಪನ ಮಾತನಾಡಿ, ರಾಜ್ಯದಲ್ಲಿರುವ ಕುಶಲಕರ್ಮಿಗಳನ್ನು ಪ್ರೋತ್ಸಾಹಿಸುವ ಮತ್ತು ಅವರು ಉತ್ಪಾದಿಸಿದ ವಸ್ತುಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಗಿದೆ. ಮೇಳವು ಜುಲೈ 24ರ ವರೆಗೆ ನಡೆಯಲಿದೆ ಎಂದರು.<br /> <br /> ಮೇಳದಲ್ಲಿ ನೇಕಾರಿಕೆ ಉತ್ಪನ್ನಗಳು, ಮಾರ್ಬಲ್ ಕಲ್ಲಿನಲ್ಲಿ ಮಾಡಲಾಗಿರುವ ಸೂಷ್ಮ ಕಲಾಕೃತಿಗಳು, ಬೀಟೆ ಮತ್ತಿತರರ ಮರದಲ್ಲಿ ತಯಾರಿಸಿರುವ ಕೆತ್ತನೆಗಳು ಸೇರಿದಂತೆ ಹಲವು ಬಗೆಯ ವಸ್ತುಗಳು ಶೇ 10ರಷ್ಟು ರಿಯಾಯಿತಿ ದರದಲ್ಲಿ ಗ್ರಾಹಕರಿಗೆ ಲಭ್ಯವಾಗಲಿವೆ ಎಂದರು.<br /> <br /> <strong>ವಿಳಾಸ:</strong> `ಕಾವೇರಿ', ರಾಜ್ಯ ಆರ್ಟ್ಸ್ ಅಂಡ್ ಕ್ರಾಪ್ಟ್ಸ್ ಎಂಪೋರಿಯಂ, ನಂ. 8/30, 6ನೇ `ಸಿ' ಮುಖ್ಯರಸ್ತೆ, 30ನೇ ಅಡ್ಡರಸ್ತೆ, ಜಯನಗರ 4ನೇ ಹಂತ, ಪೊಲೀಸ್ ಠಾಣೆ ಎದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>