ಬೆಂಗಳೂರು: ತೋಟಗಾರಿಕೆ ಇಲಾಖೆ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕಬ್ಬನ್ ಉದ್ಯಾನದಲ್ಲಿ ಹಮ್ಮಿಕೊಂಡಿರುವ ‘ಸಮಕಾಲೀನ ಕಾಷ್ಠ ಶಿಲ್ಪಕಲಾ’ ಶಿಬಿರಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೀವ್ ಚಾವ್ಲಾ, ‘ಉದ್ಯಾನದಲ್ಲಿ ಮಳೆ, ಬಿರುಗಾಳಿಗೆ ನೆಲಕ್ಕೆ ಉರುಳಿ ಬೀಳುತ್ತಿದ್ದ ಮರ ಹಾಗೂ ಅದರ ರೆಂಬೆಗಳು ಒಲೆಗೆ ಸೌದೆಯಾಗಿ ಬಳಕೆಯಾಗುತ್ತಿದ್ದವು.