<p><strong>ಯಲಹಂಕ:</strong> `ಗ್ರಾಮೀಣ ಪ್ರದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕೃಷಿ ಪಠ್ಯಕ್ರಮವನ್ನು ಅಳವಡಿಸಬೇಕಾದ ಅಗತ್ಯವಿದೆ' ಎಂದು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಸಲಹೆ ನೀಡಿದರು.<br /> <br /> ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ್ದ ಬೆಂಗಳೂರು ಕೃಷಿ ವಿಶ್ವವಿದ್ಯಾಯಲಯದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ರೈತರು ಕೃಷಿ ಕ್ಷೇತ್ರದಲ್ಲಿ ಉಳಿಯಬೇಕಾದರೆ ಪ್ರಾದೇಶಿಕ ಆಧಾರಿತ ಕೃಷಿ ತಾಂತ್ರಿಕತೆಗೆ ಹೆಚ್ಚಿನ ಒತ್ತು ನೀಡಬೇಕು. ಹವಾಮಾನ ವೈಪರೀತ್ಯದಂತಹ ಸವಾಲುಗಳನ್ನು ಎದುರಿಸಲು ಸುಧಾರಿತ ತಂತ್ರಜ್ಞಾನಗಳನ್ನುಅಭಿವೃದ್ಧಿಪಡಿಸಬೇಕಾದ ಅಗತ್ಯ ಇದೆ. ಈ ಮೂಲಕ ದೇಶದ ಆಹಾರ ಭದ್ರತೆಯನ್ನು ಹೆಚ್ಚಿಸಲು ಎಲ್ಲರೂ ಶ್ರಮಿಸಬೇಕು' ಎಂದರು.<br /> <br /> ಕೃಷಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, `ದೇಶದಲ್ಲಿ ಕೃಷಿಕನ ಬಾಳು ನಿರೀಕ್ಷಿಸಿದ ಮಟ್ಟದಲ್ಲಿ ಸುಧಾರಣೆಯಾಗಿಲ್ಲ. ಉತ್ಪಾದಕತೆಯಲ್ಲಿ ಕೆಳಮಟ್ಟದಲ್ಲಿದ್ದ ನಾವು, ಸುಧಾರಣೆ ಕಂಡಿದ್ದೇವೆ. ಆದರೆ, ಚೀನಾ ಮತ್ತಿತರ ದೇಶಗಳಿಗೆ ಹೋಲಿಸಿದಾಗ ಅನೇಕ ಆಹಾರ ಪದಾರ್ಥಗಳಲ್ಲಿ ನಮ್ಮ ಉತ್ಪಾದನೆ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ನಮ್ಮ ಉತ್ಪಾದನೆಯನ್ನು ಎರಡು ಪಟ್ಟು ಹೆಚ್ಚಿಸುವ ಅಗತ್ಯವಿದೆ' ಎಂದರು.<br /> <br /> `ನಮ್ಮ ದೇಶದ ಹಸಿರು ಕ್ರಾಂತಿಯ ಲಾಭ ನೀರಾವರಿ ಪ್ರದೇಶಕ್ಕೆ ದೊರಕಿದೆ. ಮಳೆಯಾಧಾರಿತ ಪ್ರದೇಶ ಹಾಗೂ ಒಣ ಬೇಸಾಯ ಪ್ರದೇಶಗಳಲ್ಲಿ ಇಂದಿಗೂ ಸುಧಾರಣೆ ಕಾಣಲು ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸುಧಾರಣೆ ತರುವಂತಹ ಎರಡನೇ ಹಸಿರು ಕ್ರಾಂತಿಯ ಅಗತ್ಯ ಇದೆ' ಎಂದು ಪ್ರತಿಪಾದಿಸಿದರು.<br /> <br /> ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ನಾರಾಯಣಗೌಡ, `ವಿವಿಯು ಮುಂಬರುವ ದಿನಗಳಲ್ಲಿ ಶಿಕ್ಷಣ, ಸಂಶೋಧನೆ ಹಾಗೂ ವಿಸ್ತರಣಾ ಚಟುವಟಿಕೆಗಳನ್ನು ವಿದ್ಯಾರ್ಥಿ ಹಾಗೂ ರೈತಸ್ನೇಹಿಯಾಗಿ ರೂಪಿಸಲಿದೆ' ಎಂದರು.<br /> <br /> ಸಂಸದ ಡಿ.ಬಿ.ಚಂದ್ರೇಗೌಡ, ವಿಧಾನಪರಿಷತ್ ಸದಸ್ಯರಾದ ರಾಮಚಂದ್ರೇಗೌಡ, ದಯಾನಂದ್, ಮಮ್ತಾಜ್ ಆಲಿ ಖಾನ್, ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಭರತ್ಲಾಲ್ ಮೀನಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> `ಗ್ರಾಮೀಣ ಪ್ರದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕೃಷಿ ಪಠ್ಯಕ್ರಮವನ್ನು ಅಳವಡಿಸಬೇಕಾದ ಅಗತ್ಯವಿದೆ' ಎಂದು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಸಲಹೆ ನೀಡಿದರು.<br /> <br /> ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ್ದ ಬೆಂಗಳೂರು ಕೃಷಿ ವಿಶ್ವವಿದ್ಯಾಯಲಯದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ರೈತರು ಕೃಷಿ ಕ್ಷೇತ್ರದಲ್ಲಿ ಉಳಿಯಬೇಕಾದರೆ ಪ್ರಾದೇಶಿಕ ಆಧಾರಿತ ಕೃಷಿ ತಾಂತ್ರಿಕತೆಗೆ ಹೆಚ್ಚಿನ ಒತ್ತು ನೀಡಬೇಕು. ಹವಾಮಾನ ವೈಪರೀತ್ಯದಂತಹ ಸವಾಲುಗಳನ್ನು ಎದುರಿಸಲು ಸುಧಾರಿತ ತಂತ್ರಜ್ಞಾನಗಳನ್ನುಅಭಿವೃದ್ಧಿಪಡಿಸಬೇಕಾದ ಅಗತ್ಯ ಇದೆ. ಈ ಮೂಲಕ ದೇಶದ ಆಹಾರ ಭದ್ರತೆಯನ್ನು ಹೆಚ್ಚಿಸಲು ಎಲ್ಲರೂ ಶ್ರಮಿಸಬೇಕು' ಎಂದರು.<br /> <br /> ಕೃಷಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, `ದೇಶದಲ್ಲಿ ಕೃಷಿಕನ ಬಾಳು ನಿರೀಕ್ಷಿಸಿದ ಮಟ್ಟದಲ್ಲಿ ಸುಧಾರಣೆಯಾಗಿಲ್ಲ. ಉತ್ಪಾದಕತೆಯಲ್ಲಿ ಕೆಳಮಟ್ಟದಲ್ಲಿದ್ದ ನಾವು, ಸುಧಾರಣೆ ಕಂಡಿದ್ದೇವೆ. ಆದರೆ, ಚೀನಾ ಮತ್ತಿತರ ದೇಶಗಳಿಗೆ ಹೋಲಿಸಿದಾಗ ಅನೇಕ ಆಹಾರ ಪದಾರ್ಥಗಳಲ್ಲಿ ನಮ್ಮ ಉತ್ಪಾದನೆ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ನಮ್ಮ ಉತ್ಪಾದನೆಯನ್ನು ಎರಡು ಪಟ್ಟು ಹೆಚ್ಚಿಸುವ ಅಗತ್ಯವಿದೆ' ಎಂದರು.<br /> <br /> `ನಮ್ಮ ದೇಶದ ಹಸಿರು ಕ್ರಾಂತಿಯ ಲಾಭ ನೀರಾವರಿ ಪ್ರದೇಶಕ್ಕೆ ದೊರಕಿದೆ. ಮಳೆಯಾಧಾರಿತ ಪ್ರದೇಶ ಹಾಗೂ ಒಣ ಬೇಸಾಯ ಪ್ರದೇಶಗಳಲ್ಲಿ ಇಂದಿಗೂ ಸುಧಾರಣೆ ಕಾಣಲು ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸುಧಾರಣೆ ತರುವಂತಹ ಎರಡನೇ ಹಸಿರು ಕ್ರಾಂತಿಯ ಅಗತ್ಯ ಇದೆ' ಎಂದು ಪ್ರತಿಪಾದಿಸಿದರು.<br /> <br /> ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ನಾರಾಯಣಗೌಡ, `ವಿವಿಯು ಮುಂಬರುವ ದಿನಗಳಲ್ಲಿ ಶಿಕ್ಷಣ, ಸಂಶೋಧನೆ ಹಾಗೂ ವಿಸ್ತರಣಾ ಚಟುವಟಿಕೆಗಳನ್ನು ವಿದ್ಯಾರ್ಥಿ ಹಾಗೂ ರೈತಸ್ನೇಹಿಯಾಗಿ ರೂಪಿಸಲಿದೆ' ಎಂದರು.<br /> <br /> ಸಂಸದ ಡಿ.ಬಿ.ಚಂದ್ರೇಗೌಡ, ವಿಧಾನಪರಿಷತ್ ಸದಸ್ಯರಾದ ರಾಮಚಂದ್ರೇಗೌಡ, ದಯಾನಂದ್, ಮಮ್ತಾಜ್ ಆಲಿ ಖಾನ್, ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಭರತ್ಲಾಲ್ ಮೀನಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>