<p><strong>ನೆಲಮಂಗಲ: </strong> ದೇಶಕ್ಕೆ ಅನ್ನ ನೀಡುವ ರೈತ, ಅಕ್ಷರ ಕಲಿಸುವ ಶಿಕ್ಷಕ ರಾಷ್ಟ್ರದ ಕಡೆಗಣನೆಗೆ ಗುರಿಯಾಗಿದ್ದಾರೆ. ಶಿಕ್ಷಕರ ದಿನಾಚರಣೆ ಮಾದರಿಯಲ್ಲಿ ರೈತ ದಿನಾಚರಣೆಯನ್ನು ಆಚರಿಸುವ ಮೂಲಕ ಕೃಷಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚಿಂತನ ಮಂಥನ ನಡೆಯುವಂತಾಗಬೇಕು ಎಂದು ಡಿಡಿಪಿಐ ಎಚ್.ವಿ. ವೆಂಕಟೇಶಪ್ಪ ಅಭಿಪ್ರಾಯಪಟ್ಟರು.<br /> <br /> ಸ್ಥಳೀಯ ಗೋಪಿವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, `ಶಿಕ್ಷಕರು ತಮ್ಮ ವೃತ್ತಿಯನ್ನು ಸೇವೆಯಾಗಿ ಸ್ವೀಕರಿಸಿ ವಿದ್ಯಾರ್ಥಿಗಳನ್ನು ಮಾದರಿ ವ್ಯಕ್ತಿಗಳನ್ನಾಗಿ ರೂಪಿಸಬೇಕು~ ಎಂದು ಸಲಹೆ ಮಾಡಿದರು.<br /> <br /> ಶಾಸಕ ಎಂ.ವಿ.ನಾಗರಾಜು ಅಧ್ಯಕ್ಷತೆಯಲ್ಲಿ ಶಿಕ್ಷಕರ ಗೃಹ ನಿರ್ಮಾಣ ಸಂಘವನ್ನು ಪ್ರಾರಂಭಿಸಲಾಗಿದ್ದು, ಶಿಕ್ಷಕರು ಸದಸ್ಯತ್ವ ಪಡೆದುಕೊಳ್ಳಲು ಮುಂದಾಗಬೇಕು ಎಂದು ಪ್ರಾಂಶುಪಾಲರ ಸಂಘದ ಸಂಚಾಲಕ ಎಚ್.ಬಿ.ಪ್ರಕಾಶ್ ಕೋರಿದರು.<br /> <br /> ಶಾಸಕ ಎಂ.ವಿ.ನಾಗರಾಜು ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯ ಎಂ. ಎನ್.ರಾಮ್, ತಾ.ಪಂ. ಅಧ್ಯಕ್ಷ ಲಕ್ಷ್ಮೀನಾರಾಯಣ್ ಮಾತನಾಡಿದರು. ಲಯನ್ಸ್ ಸಂಸ್ಥೆಯ ವತಿಯಿಂದ ಡಾ.ಎಂ.ಜಯಪ್ರಸಾದ್ ಪ್ರಾಯೋಜಕತ್ವದಲ್ಲಿ ನಿವೃತ್ತ ಶಿಕ್ಷಕ ಮಲ್ಲಪ್ಪ ಸ್ಮರಣಾರ್ಥ ಪ್ರಶಸ್ತಿಯನ್ನು ಶಿಕ್ಷಕರಿಗೆ ನೀಡಿ ಗೌರವಿಸಲಾಯಿತು. <br /> <br /> ರಾಜ್ಯ ಪ್ರಶಸ್ತಿ ಪುರಸ್ಕೃತ ಪುಟ್ಟರುದ್ರಾರಾಧ್ಯ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸದಾನಂದಾರಾಧ್ಯ ಮತ್ತಿತರರನ್ನು ಸನ್ಮಾನಿಸಲಾಯಿತು.<br /> <br /> ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಪಿ.ಆನಂದ್, ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ಟಿ.ಕೆ.ನರಸೇಗೌಡ, ಪುರಸಭೆ ಅಧ್ಯಕ್ಷ ಪಿಳ್ಳಪ್ಪ, ಜಿ.ಪಂ. ಸದಸ್ಯೆ ಸುನಂದ ಶಿವಕುಮಾರ್, ವಿವಿಧ ಸಂಘ-ಸಂಸ್ಥೆಗ ಅಧ್ಯಕ್ಷರು ವೇದಿಕೆ ಯಲ್ಲಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಮಂಜುನಾಥ್ ಸ್ವಾಗತಿಸಿ, ಕ್ಷೇತ್ರ ಸಮನ್ವಯಾಧಿಕಾರಿ ಹನುಮಾನಾಯಕ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ: </strong> ದೇಶಕ್ಕೆ ಅನ್ನ ನೀಡುವ ರೈತ, ಅಕ್ಷರ ಕಲಿಸುವ ಶಿಕ್ಷಕ ರಾಷ್ಟ್ರದ ಕಡೆಗಣನೆಗೆ ಗುರಿಯಾಗಿದ್ದಾರೆ. ಶಿಕ್ಷಕರ ದಿನಾಚರಣೆ ಮಾದರಿಯಲ್ಲಿ ರೈತ ದಿನಾಚರಣೆಯನ್ನು ಆಚರಿಸುವ ಮೂಲಕ ಕೃಷಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚಿಂತನ ಮಂಥನ ನಡೆಯುವಂತಾಗಬೇಕು ಎಂದು ಡಿಡಿಪಿಐ ಎಚ್.ವಿ. ವೆಂಕಟೇಶಪ್ಪ ಅಭಿಪ್ರಾಯಪಟ್ಟರು.<br /> <br /> ಸ್ಥಳೀಯ ಗೋಪಿವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, `ಶಿಕ್ಷಕರು ತಮ್ಮ ವೃತ್ತಿಯನ್ನು ಸೇವೆಯಾಗಿ ಸ್ವೀಕರಿಸಿ ವಿದ್ಯಾರ್ಥಿಗಳನ್ನು ಮಾದರಿ ವ್ಯಕ್ತಿಗಳನ್ನಾಗಿ ರೂಪಿಸಬೇಕು~ ಎಂದು ಸಲಹೆ ಮಾಡಿದರು.<br /> <br /> ಶಾಸಕ ಎಂ.ವಿ.ನಾಗರಾಜು ಅಧ್ಯಕ್ಷತೆಯಲ್ಲಿ ಶಿಕ್ಷಕರ ಗೃಹ ನಿರ್ಮಾಣ ಸಂಘವನ್ನು ಪ್ರಾರಂಭಿಸಲಾಗಿದ್ದು, ಶಿಕ್ಷಕರು ಸದಸ್ಯತ್ವ ಪಡೆದುಕೊಳ್ಳಲು ಮುಂದಾಗಬೇಕು ಎಂದು ಪ್ರಾಂಶುಪಾಲರ ಸಂಘದ ಸಂಚಾಲಕ ಎಚ್.ಬಿ.ಪ್ರಕಾಶ್ ಕೋರಿದರು.<br /> <br /> ಶಾಸಕ ಎಂ.ವಿ.ನಾಗರಾಜು ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯ ಎಂ. ಎನ್.ರಾಮ್, ತಾ.ಪಂ. ಅಧ್ಯಕ್ಷ ಲಕ್ಷ್ಮೀನಾರಾಯಣ್ ಮಾತನಾಡಿದರು. ಲಯನ್ಸ್ ಸಂಸ್ಥೆಯ ವತಿಯಿಂದ ಡಾ.ಎಂ.ಜಯಪ್ರಸಾದ್ ಪ್ರಾಯೋಜಕತ್ವದಲ್ಲಿ ನಿವೃತ್ತ ಶಿಕ್ಷಕ ಮಲ್ಲಪ್ಪ ಸ್ಮರಣಾರ್ಥ ಪ್ರಶಸ್ತಿಯನ್ನು ಶಿಕ್ಷಕರಿಗೆ ನೀಡಿ ಗೌರವಿಸಲಾಯಿತು. <br /> <br /> ರಾಜ್ಯ ಪ್ರಶಸ್ತಿ ಪುರಸ್ಕೃತ ಪುಟ್ಟರುದ್ರಾರಾಧ್ಯ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸದಾನಂದಾರಾಧ್ಯ ಮತ್ತಿತರರನ್ನು ಸನ್ಮಾನಿಸಲಾಯಿತು.<br /> <br /> ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಪಿ.ಆನಂದ್, ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ಟಿ.ಕೆ.ನರಸೇಗೌಡ, ಪುರಸಭೆ ಅಧ್ಯಕ್ಷ ಪಿಳ್ಳಪ್ಪ, ಜಿ.ಪಂ. ಸದಸ್ಯೆ ಸುನಂದ ಶಿವಕುಮಾರ್, ವಿವಿಧ ಸಂಘ-ಸಂಸ್ಥೆಗ ಅಧ್ಯಕ್ಷರು ವೇದಿಕೆ ಯಲ್ಲಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಮಂಜುನಾಥ್ ಸ್ವಾಗತಿಸಿ, ಕ್ಷೇತ್ರ ಸಮನ್ವಯಾಧಿಕಾರಿ ಹನುಮಾನಾಯಕ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>