<p><strong>ಬೆಂಗಳೂರು:</strong> ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ನಡೆಯುವ ನೇಮಕಾತಿಗಳಲ್ಲಿ ಅಕ್ರಮ ತಡೆಯಲು ಸಂದರ್ಶನವನ್ನೇ ರದ್ದು ಮಾಡಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಪ್ರೊ.ಬಿ.ಕೆ.ಚಂದ್ರಶೇಖರ್ ಆಗ್ರಹಿಸಿದರು.<br /> <br /> ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ನಡೆಸಿರುವ ಸಂದರ್ಶನ ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೆ. ಪ್ರಕರಣ ಕುರಿತು ತನಿಖೆ ನಡೆಸಲು ಮುಖ್ಯಮಂತ್ರಿಯವರು ನಿರ್ಧರಿಸಿರುವುದು ಸ್ವಾಗತಾರ್ಹ' ಎಂದರು.<br /> <br /> ಸಂದರ್ಶನ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳಿಗೆ ಅಂಕ ನೀಡುವ ಅಧಿಕಾರವನ್ನು ಆಯೋಗದ ಸದಸ್ಯರು ಹೊಂದಿದ್ದಾರೆ. ಈ ಅಧಿಕಾರವೇ ಭ್ರಷ್ಟಾಚಾರಕ್ಕೆ ಮೂಲವಾಗಿದೆ. ಸಂದರ್ಶನದಲ್ಲಿ ಅಂಕ ನೀಡುವ ಅಧಿಕಾರವನ್ನು ತೆಗೆದುಹಾಕಿದರೆ ಭ್ರಷ್ಟಾಚಾರಕ್ಕೆ ಅವಕಾಶವೇ ಇರುವುದಿಲ್ಲ. ರಾಜ್ಯ ಸರ್ಕಾರ ಈ ಕುರಿತು ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.<br /> <br /> <strong>ಪರಿಶೀಲನೆಗೆ ಮನವಿ:</strong> ಹಿಂದಿನ ಬಿಜೆಪಿ ಸರ್ಕಾರ ಯಾವುದೇ ಪರಿಶೀಲನೆ ನಡೆಸದೇ 21 ಖಾಸಗಿ ವಿಶ್ವವಿದ್ಯಾಲಯಗಳ ಆರಂಭಕ್ಕೆ ಅನುಮತಿ ನೀಡಿದೆ. ಈ ಪ್ರಕ್ರಿಯೆಯಲ್ಲೂ ಅಕ್ರಮ ನಡೆದಿದೆ ಎಂಬ ದೂರುಗಳಿವೆ. ಈಗಿನ ಸರ್ಕಾರ ಉನ್ನತಮಟ್ಟದ ಸಮಿತಿಯನ್ನು ನೇಮಿಸಿ ಖಾಸಗಿ ವಿಶ್ವವಿದ್ಯಾಲಯಗಳ ಅಗತ್ಯ ಕುರಿತು ಪರಿಶೀಲನೆ ನಡೆಸಬೇಕು. ಅರ್ಹ ಸಂಸ್ಥೆಗಳಿಗೆ ಮಾತ್ರ ಅನುಮತಿ ನೀಡಿ, ಉಳಿದ ಸಂಸ್ಥೆಗಳಿಗೆ ನೀಡಿರುವ ಅನುಮತಿಯನ್ನು ರದ್ದು ಮಾಡಬೇಕು ಎಂದು ಮನವಿ ಮಾಡಿದರು.<br /> <br /> ಗುಟ್ಕಾ ನಿಷೇಧ ಕುರಿತು ಪ್ರತಿಕ್ರಿಯಿಸಿದ ಅವರು, `ಈ ವಿಷಯದಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನ ಆದೇಶ ಪಾಲನೆ ಮಾಡಿದೆ. ಬಿಜೆಪಿ ಮುಖಂಡರು ಅಡಿಕೆ ಬೆಳೆಗಾರರನ್ನು ಓಲೈಸುವ ಉದ್ದೇಶದಿಂದ ಗುಟ್ಕಾ ನಿಷೇಧವನ್ನೂ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ' ಎಂದು ಆರೋಪಿಸಿದರು.<br /> <br /> ಅಗ್ಗದ ದರದ ಮದ್ಯ ಉತ್ಪಾದನೆ ಮತ್ತು ಮಾರಾಟ ಕುರಿತ ಚಿಂತನೆ ಬಗ್ಗೆ ಪ್ರಶ್ನಿಸಿದಾಗ, `ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಆಗಲಿ. ಮುಖ್ಯಮಂತ್ರಿಯವರೂ ಇದೇ ಇಂಗಿತ ವ್ಯಕ್ತಪಡಿಸಿದ್ದಾರಲ್ಲಾ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ನಡೆಯುವ ನೇಮಕಾತಿಗಳಲ್ಲಿ ಅಕ್ರಮ ತಡೆಯಲು ಸಂದರ್ಶನವನ್ನೇ ರದ್ದು ಮಾಡಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಪ್ರೊ.ಬಿ.ಕೆ.ಚಂದ್ರಶೇಖರ್ ಆಗ್ರಹಿಸಿದರು.<br /> <br /> ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ನಡೆಸಿರುವ ಸಂದರ್ಶನ ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೆ. ಪ್ರಕರಣ ಕುರಿತು ತನಿಖೆ ನಡೆಸಲು ಮುಖ್ಯಮಂತ್ರಿಯವರು ನಿರ್ಧರಿಸಿರುವುದು ಸ್ವಾಗತಾರ್ಹ' ಎಂದರು.<br /> <br /> ಸಂದರ್ಶನ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳಿಗೆ ಅಂಕ ನೀಡುವ ಅಧಿಕಾರವನ್ನು ಆಯೋಗದ ಸದಸ್ಯರು ಹೊಂದಿದ್ದಾರೆ. ಈ ಅಧಿಕಾರವೇ ಭ್ರಷ್ಟಾಚಾರಕ್ಕೆ ಮೂಲವಾಗಿದೆ. ಸಂದರ್ಶನದಲ್ಲಿ ಅಂಕ ನೀಡುವ ಅಧಿಕಾರವನ್ನು ತೆಗೆದುಹಾಕಿದರೆ ಭ್ರಷ್ಟಾಚಾರಕ್ಕೆ ಅವಕಾಶವೇ ಇರುವುದಿಲ್ಲ. ರಾಜ್ಯ ಸರ್ಕಾರ ಈ ಕುರಿತು ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.<br /> <br /> <strong>ಪರಿಶೀಲನೆಗೆ ಮನವಿ:</strong> ಹಿಂದಿನ ಬಿಜೆಪಿ ಸರ್ಕಾರ ಯಾವುದೇ ಪರಿಶೀಲನೆ ನಡೆಸದೇ 21 ಖಾಸಗಿ ವಿಶ್ವವಿದ್ಯಾಲಯಗಳ ಆರಂಭಕ್ಕೆ ಅನುಮತಿ ನೀಡಿದೆ. ಈ ಪ್ರಕ್ರಿಯೆಯಲ್ಲೂ ಅಕ್ರಮ ನಡೆದಿದೆ ಎಂಬ ದೂರುಗಳಿವೆ. ಈಗಿನ ಸರ್ಕಾರ ಉನ್ನತಮಟ್ಟದ ಸಮಿತಿಯನ್ನು ನೇಮಿಸಿ ಖಾಸಗಿ ವಿಶ್ವವಿದ್ಯಾಲಯಗಳ ಅಗತ್ಯ ಕುರಿತು ಪರಿಶೀಲನೆ ನಡೆಸಬೇಕು. ಅರ್ಹ ಸಂಸ್ಥೆಗಳಿಗೆ ಮಾತ್ರ ಅನುಮತಿ ನೀಡಿ, ಉಳಿದ ಸಂಸ್ಥೆಗಳಿಗೆ ನೀಡಿರುವ ಅನುಮತಿಯನ್ನು ರದ್ದು ಮಾಡಬೇಕು ಎಂದು ಮನವಿ ಮಾಡಿದರು.<br /> <br /> ಗುಟ್ಕಾ ನಿಷೇಧ ಕುರಿತು ಪ್ರತಿಕ್ರಿಯಿಸಿದ ಅವರು, `ಈ ವಿಷಯದಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನ ಆದೇಶ ಪಾಲನೆ ಮಾಡಿದೆ. ಬಿಜೆಪಿ ಮುಖಂಡರು ಅಡಿಕೆ ಬೆಳೆಗಾರರನ್ನು ಓಲೈಸುವ ಉದ್ದೇಶದಿಂದ ಗುಟ್ಕಾ ನಿಷೇಧವನ್ನೂ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ' ಎಂದು ಆರೋಪಿಸಿದರು.<br /> <br /> ಅಗ್ಗದ ದರದ ಮದ್ಯ ಉತ್ಪಾದನೆ ಮತ್ತು ಮಾರಾಟ ಕುರಿತ ಚಿಂತನೆ ಬಗ್ಗೆ ಪ್ರಶ್ನಿಸಿದಾಗ, `ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಆಗಲಿ. ಮುಖ್ಯಮಂತ್ರಿಯವರೂ ಇದೇ ಇಂಗಿತ ವ್ಯಕ್ತಪಡಿಸಿದ್ದಾರಲ್ಲಾ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>