‘ಪರಿಸರ ಮಾಲಿನ್ಯ ಉಂಟಾಗುವುದನ್ನು ಕಂಡು, ಗ್ರಾಮದಲ್ಲಿ ಕಸ ವಿಲೇವಾರಿ ಮಾಡುವುದಕ್ಕೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಬಂಧ ಹೇರಿತ್ತು. ಕೆಲ ಕಾಲ ಇಲ್ಲಿ ಕಸ ವಿಲೇವಾರಿ ಸ್ಥಗಿತಗೊಂಡಿತ್ತು. ಆದರೆ, ಆರ್.ಅಶೋಕ ಅವರು ಉಪಮುಖ್ಯಮಂತ್ರಿಯಾಗಿದ್ದಾಗ, ಗ್ರಾಮದಲ್ಲಿ ಕಸ ವಿಲೇವಾರಿಗೆ ಮತ್ತೆ ಅವಕಾಶ ಕಲ್ಪಿಸಲಾಯಿತು’ ಎನ್ನುವುದು ಗ್ರಾಮಸ್ಥರ ಆರೋಪ.