<p><strong>ಬೆಂಗಳೂರು:</strong> ನಗರದ ಜೆ.ಪಿ. ಪಾರ್ಕ್ ಬಳಿ ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಕೊಳಚೆ ನೀರಿನ ಶುದ್ಧೀಕರಣ ಘಟಕವನ್ನು ಇನ್ನೊಂದು ವರ್ಷದೊಳಗೆ ಆರಂಭಿಸಲಾಗುವುದು ಎಂದು ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಬಿ.ಆರ್. ನಂಜುಂಡಪ್ಪ ಸೋಮವಾರ ಹೇಳಿದರು.<br /> <br /> ಬಿಬಿಎಂಪಿಯು ಜೆ.ಪಿ. ಉದ್ಯಾನವನ ವಾರ್ಡ್ನ ಚೌಡೇಶ್ವರಿ ನಿಲ್ದಾಣದ ಬಳಿ ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಚಿಕ್ಕಬಂಡಪ್ಪ ರಾಮಯ್ಯ ಕ್ರೀಡಾಂಗಣದ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.<br /> <br /> ಇಂಗ್ಲೆಂಡ್ನಲ್ಲಿ ಏಳು ಬಾರಿ ಕೊಳಚೆ ನೀರನ್ನು ಶುದ್ಧೀಕರಿಸಿದ ನಂತರವೂ ಕುಡಿಯುವುದಕ್ಕೆ ಉಪಯೋಗಿಸುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮಲ್ಲಿಯೂ ಅಂತಹ ಪರಿಸ್ಥಿತಿ ಉದ್ಭವಿಸಬಹುದು. ಜೆ.ಪಿ. ಪಾರ್ಕ್ ಬಳಿ ಶುದ್ಧೀಕರಿಸಿದ ನೀರನ್ನು ಸದ್ಬಳಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.<br /> <br /> `ಬಿಬಿಎಂಪಿಯು ಕಳೆದ ಬಜೆಟ್ನಲ್ಲಿ ಪ್ರಕಟಿಸಿದ ಯೋಜನೆಗಳ ಸವಲತ್ತುಗಳನ್ನು ಹಂತ-ಹಂತವಾಗಿ ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ. ಬಿಜೆಪಿ ಆಡಳಿತ ಬಜೆಟ್ನಲ್ಲಿ ಪ್ರಕಟಿಸಿದ ಯೋಜನೆಗಳನ್ನು ಪ್ರತಿಪಕ್ಷಗಳು ಬಂಡಲ್ ಎಂದು ಟೀಕಿಸಿದ್ದವು. ಆದರೆ, ನಾವು ಎಂದಿಗೂ ಅಂತಹ ಸುಳ್ಳು ಆಶ್ವಾಸನೆಗಳನ್ನು ಜನರಿಗೆ ಕೊಡುವುದಿಲ್ಲ~ ಎಂದರು.<br /> <br /> ಉಪ ಮೇಯರ್ ಎಸ್. ಹರೀಶ್, `ಬೆಂಗಳೂರಿನ ಜನರಿಗೆ ಬಿಬಿಎಂಪಿಯು ಅನೇಕ ಸವಲತ್ತುಗಳನ್ನು ನೀಡುತ್ತಿದೆ. ಅವುಗಳನ್ನು ಜನತೆ ಸದ್ಬಳಕೆ ಮಾಡಿಕೊಳ್ಳುವುದರ ಜತೆಗೆ, ಸಾರ್ವಜನಿಕ ಉದ್ಯಾನ, ಕ್ರೀಡಾಂಗಣ, ರಸ್ತೆ, ಪಾದಚಾರಿ ಮಾರ್ಗಗಳನ್ನು ಕೂಡ ತಮ್ಮದು ಎಂದು ಭಾವಿಸಿ ಸ್ವಚ್ಛತೆ ಕಾಪಾಡಲು ಮುಂದಾಗಬೇಕು~ ಎಂದು ಮನವಿ ಮಾಡಿದರು.<br /> <br /> ಇದೇ ಸಂದರ್ಭದಲ್ಲಿ ಸ್ವಾವಲಂಬನೆ, ಸ್ವ-ಉದ್ಯೋಗ ಯೋಜನೆಯಡಿ ಫಲಾನುಭವಿಗಳಿಗೆ ವಾಹನಗಳು, ಇಸ್ತ್ರಿ ಪೆಟ್ಟಿಗೆ, ತಳ್ಳುವ ಗಾಡಿ, ಬೈಸಿಕಲ್, ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಚೆಕ್ ಹಾಗೂ ವಾಜಪೇಯಿ ಆರೋಗ್ಯಶ್ರೀ ಕಾರ್ಡ್ ವಿತರಿಸಲಾಯಿತು.<br /> <br /> ಪಾಲಿಕೆಯ ಆರ್.ಆರ್.ನಗರ ವಲಯ ಜಂಟಿ ಆಯುಕ್ತ ರಾಮಚಂದ್ರ, ಉಪ ಆಯುಕ್ತ ಭೀಮಪ್ಪ, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಬೆಹನ್ಜೀ, ಬಿಜೆಪಿ ವಾರ್ಡ್ ಘಟಕದ ಅಧ್ಯಕ್ಷ ಶ್ರೀಧರ್, ಜೆ.ಪಿ. ಪಾರ್ಕ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ರಾಮಕೃಷ್ಣರಾಜು ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಜೆ.ಪಿ. ಪಾರ್ಕ್ ಬಳಿ ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಕೊಳಚೆ ನೀರಿನ ಶುದ್ಧೀಕರಣ ಘಟಕವನ್ನು ಇನ್ನೊಂದು ವರ್ಷದೊಳಗೆ ಆರಂಭಿಸಲಾಗುವುದು ಎಂದು ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಬಿ.ಆರ್. ನಂಜುಂಡಪ್ಪ ಸೋಮವಾರ ಹೇಳಿದರು.<br /> <br /> ಬಿಬಿಎಂಪಿಯು ಜೆ.ಪಿ. ಉದ್ಯಾನವನ ವಾರ್ಡ್ನ ಚೌಡೇಶ್ವರಿ ನಿಲ್ದಾಣದ ಬಳಿ ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಚಿಕ್ಕಬಂಡಪ್ಪ ರಾಮಯ್ಯ ಕ್ರೀಡಾಂಗಣದ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.<br /> <br /> ಇಂಗ್ಲೆಂಡ್ನಲ್ಲಿ ಏಳು ಬಾರಿ ಕೊಳಚೆ ನೀರನ್ನು ಶುದ್ಧೀಕರಿಸಿದ ನಂತರವೂ ಕುಡಿಯುವುದಕ್ಕೆ ಉಪಯೋಗಿಸುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮಲ್ಲಿಯೂ ಅಂತಹ ಪರಿಸ್ಥಿತಿ ಉದ್ಭವಿಸಬಹುದು. ಜೆ.ಪಿ. ಪಾರ್ಕ್ ಬಳಿ ಶುದ್ಧೀಕರಿಸಿದ ನೀರನ್ನು ಸದ್ಬಳಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.<br /> <br /> `ಬಿಬಿಎಂಪಿಯು ಕಳೆದ ಬಜೆಟ್ನಲ್ಲಿ ಪ್ರಕಟಿಸಿದ ಯೋಜನೆಗಳ ಸವಲತ್ತುಗಳನ್ನು ಹಂತ-ಹಂತವಾಗಿ ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ. ಬಿಜೆಪಿ ಆಡಳಿತ ಬಜೆಟ್ನಲ್ಲಿ ಪ್ರಕಟಿಸಿದ ಯೋಜನೆಗಳನ್ನು ಪ್ರತಿಪಕ್ಷಗಳು ಬಂಡಲ್ ಎಂದು ಟೀಕಿಸಿದ್ದವು. ಆದರೆ, ನಾವು ಎಂದಿಗೂ ಅಂತಹ ಸುಳ್ಳು ಆಶ್ವಾಸನೆಗಳನ್ನು ಜನರಿಗೆ ಕೊಡುವುದಿಲ್ಲ~ ಎಂದರು.<br /> <br /> ಉಪ ಮೇಯರ್ ಎಸ್. ಹರೀಶ್, `ಬೆಂಗಳೂರಿನ ಜನರಿಗೆ ಬಿಬಿಎಂಪಿಯು ಅನೇಕ ಸವಲತ್ತುಗಳನ್ನು ನೀಡುತ್ತಿದೆ. ಅವುಗಳನ್ನು ಜನತೆ ಸದ್ಬಳಕೆ ಮಾಡಿಕೊಳ್ಳುವುದರ ಜತೆಗೆ, ಸಾರ್ವಜನಿಕ ಉದ್ಯಾನ, ಕ್ರೀಡಾಂಗಣ, ರಸ್ತೆ, ಪಾದಚಾರಿ ಮಾರ್ಗಗಳನ್ನು ಕೂಡ ತಮ್ಮದು ಎಂದು ಭಾವಿಸಿ ಸ್ವಚ್ಛತೆ ಕಾಪಾಡಲು ಮುಂದಾಗಬೇಕು~ ಎಂದು ಮನವಿ ಮಾಡಿದರು.<br /> <br /> ಇದೇ ಸಂದರ್ಭದಲ್ಲಿ ಸ್ವಾವಲಂಬನೆ, ಸ್ವ-ಉದ್ಯೋಗ ಯೋಜನೆಯಡಿ ಫಲಾನುಭವಿಗಳಿಗೆ ವಾಹನಗಳು, ಇಸ್ತ್ರಿ ಪೆಟ್ಟಿಗೆ, ತಳ್ಳುವ ಗಾಡಿ, ಬೈಸಿಕಲ್, ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಚೆಕ್ ಹಾಗೂ ವಾಜಪೇಯಿ ಆರೋಗ್ಯಶ್ರೀ ಕಾರ್ಡ್ ವಿತರಿಸಲಾಯಿತು.<br /> <br /> ಪಾಲಿಕೆಯ ಆರ್.ಆರ್.ನಗರ ವಲಯ ಜಂಟಿ ಆಯುಕ್ತ ರಾಮಚಂದ್ರ, ಉಪ ಆಯುಕ್ತ ಭೀಮಪ್ಪ, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಬೆಹನ್ಜೀ, ಬಿಜೆಪಿ ವಾರ್ಡ್ ಘಟಕದ ಅಧ್ಯಕ್ಷ ಶ್ರೀಧರ್, ಜೆ.ಪಿ. ಪಾರ್ಕ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ರಾಮಕೃಷ್ಣರಾಜು ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>