<p>ಬೆಂಗಳೂರು: `ಕೋರ್ ಸಮಿತಿ~ಯ ವ್ಯಾಪ್ತಿಯಲ್ಲಿರುವ ವಿಷಯಗಳನ್ನು ಹೊರತುಪಡಿಸಿ, ಸದಸ್ಯರು ವೈಯಕ್ತಿಕವಾಗಿ ನೀಡುವ ಹೇಳಿಕೆಗಳಿಗೆ ಅಣ್ಣಾ ತಂಡ ಜವಾಬ್ದಾರಿ ಹೊರುವುದಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, `ಜನ ಲೋಕಪಾಲ ಮಸೂದೆಯಂತಹ ವಿಷಯಗಳು ಮಾತ್ರ ಅಣ್ಣಾ ತಂಡದ `ಕೋರ್ ಸಮಿತಿ~ ವ್ಯಾಪ್ತಿಗೆ ಬರುತ್ತವೆ. ಅವುಗಳ ಹೊರತಾಗಿ ತಂಡದ ಸದಸ್ಯರು ಯಾವುದೇ ವೈಯಕ್ತಿಕ ಹೇಳಿಕೆ ನೀಡಿದರೂ ತಂಡದಿಂದ ಪ್ರತಿಕ್ರಿಯೆ ನೀಡಬಾರದು ಎಂಬ ನಿರ್ಧಾರಕ್ಕೆ ಬರಲಾಗಿದೆ~ ಎಂದರು.<br /> <br /> ವಕೀಲ ಪ್ರಶಾಂತ್ ಭೂಷಣ್ ಅವರು ಅಣ್ಣಾ ತಂಡದ `ಕೋರ್ ಸಮಿತಿ~ಯಲ್ಲಿ ಮುಂದುವರಿಯುವುದಿಲ್ಲ ಎಂಬ ವದಂತಿ ಕುರಿತು ಪ್ರಶ್ನಿಸಿದಾಗ, `ಅಂತಹ ನಿರ್ಧಾರವೇನೂ ಆಗಿಲ್ಲ. ಈ ಬಗ್ಗೆ ಅಣ್ಣಾ ಅವರೊಂದಿಗೆ ನಾನು ಮಾತನಾಡಿದ್ದೇನೆ~ ಎಂದು ಉತ್ತರಿಸಿದರು.<br /> <br /> `ಕಾಂಗ್ರೆಸ್ಗೆ ಮತ ಹಾಕಬೇಡಿ ಎಂಬ ನಿರ್ಧಾರದಿಂದ ಮತ್ತೊಂದು ರಾಜಕೀಯ ಪಕ್ಷಕ್ಕೆ ಲಾಭವಾಗುವುದಿಲ್ಲವೇ~ ಎಂಬ ಪ್ರಶ್ನೆಗೆ, `ಒಂದು ಪಕ್ಷವನ್ನು ವಿರೋಧಿಸಿದರೆ ಮತ್ತೊಂದು ಪಕ್ಷಕ್ಕೆ ಲಾಭವಾಗುತ್ತದೆ. ಆದ್ದರಿಂದಲೇ ಅರವಿಂದ್ ಕೇಜ್ರಿವಾಲ್ ಆರಂಭಿಸಿರುವ ಅಭಿಯಾನವನ್ನು ನಾನು ವಿರೋಧಿಸಿದ್ದೇನೆ~ ಎಂದರು.<br /> <br /> ಹಣ ವಸೂಲಿ ಬಗ್ಗೆ ಎಚ್ಚರಿಕೆ: `ಭ್ರಷ್ಟಾಚಾರದ ವಿರುದ್ಧ ಭಾರತ (ಐಎಸಿ) ಸಂಘಟನೆಯ ಸದಸ್ಯರೆಂದು ಹೇಳಿಕೊಂಡ ಕೆಲವರು ನನ್ನ ಮತ್ತು ಪ್ರಶಾಂತ್ ಭೂಷಣ್ ಪರಿಚಯ ಹೇಳಿಕೊಂಡುವ ಹಣ ವಸೂಲಿ ಮಾಡುತ್ತಿರುವ ಮಾಹಿತಿ ಬಂದಿದೆ. ನಾವು ಯಾವುದೇ ವ್ಯಕ್ತಿಗಳಿಗೂ ಹಣ ಸಂಗ್ರಹಕ್ಕೆ ಸೂಚಿಸಿಲ್ಲ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಹಣ ನೀಡಬಾರದು~ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಕೋರ್ ಸಮಿತಿ~ಯ ವ್ಯಾಪ್ತಿಯಲ್ಲಿರುವ ವಿಷಯಗಳನ್ನು ಹೊರತುಪಡಿಸಿ, ಸದಸ್ಯರು ವೈಯಕ್ತಿಕವಾಗಿ ನೀಡುವ ಹೇಳಿಕೆಗಳಿಗೆ ಅಣ್ಣಾ ತಂಡ ಜವಾಬ್ದಾರಿ ಹೊರುವುದಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, `ಜನ ಲೋಕಪಾಲ ಮಸೂದೆಯಂತಹ ವಿಷಯಗಳು ಮಾತ್ರ ಅಣ್ಣಾ ತಂಡದ `ಕೋರ್ ಸಮಿತಿ~ ವ್ಯಾಪ್ತಿಗೆ ಬರುತ್ತವೆ. ಅವುಗಳ ಹೊರತಾಗಿ ತಂಡದ ಸದಸ್ಯರು ಯಾವುದೇ ವೈಯಕ್ತಿಕ ಹೇಳಿಕೆ ನೀಡಿದರೂ ತಂಡದಿಂದ ಪ್ರತಿಕ್ರಿಯೆ ನೀಡಬಾರದು ಎಂಬ ನಿರ್ಧಾರಕ್ಕೆ ಬರಲಾಗಿದೆ~ ಎಂದರು.<br /> <br /> ವಕೀಲ ಪ್ರಶಾಂತ್ ಭೂಷಣ್ ಅವರು ಅಣ್ಣಾ ತಂಡದ `ಕೋರ್ ಸಮಿತಿ~ಯಲ್ಲಿ ಮುಂದುವರಿಯುವುದಿಲ್ಲ ಎಂಬ ವದಂತಿ ಕುರಿತು ಪ್ರಶ್ನಿಸಿದಾಗ, `ಅಂತಹ ನಿರ್ಧಾರವೇನೂ ಆಗಿಲ್ಲ. ಈ ಬಗ್ಗೆ ಅಣ್ಣಾ ಅವರೊಂದಿಗೆ ನಾನು ಮಾತನಾಡಿದ್ದೇನೆ~ ಎಂದು ಉತ್ತರಿಸಿದರು.<br /> <br /> `ಕಾಂಗ್ರೆಸ್ಗೆ ಮತ ಹಾಕಬೇಡಿ ಎಂಬ ನಿರ್ಧಾರದಿಂದ ಮತ್ತೊಂದು ರಾಜಕೀಯ ಪಕ್ಷಕ್ಕೆ ಲಾಭವಾಗುವುದಿಲ್ಲವೇ~ ಎಂಬ ಪ್ರಶ್ನೆಗೆ, `ಒಂದು ಪಕ್ಷವನ್ನು ವಿರೋಧಿಸಿದರೆ ಮತ್ತೊಂದು ಪಕ್ಷಕ್ಕೆ ಲಾಭವಾಗುತ್ತದೆ. ಆದ್ದರಿಂದಲೇ ಅರವಿಂದ್ ಕೇಜ್ರಿವಾಲ್ ಆರಂಭಿಸಿರುವ ಅಭಿಯಾನವನ್ನು ನಾನು ವಿರೋಧಿಸಿದ್ದೇನೆ~ ಎಂದರು.<br /> <br /> ಹಣ ವಸೂಲಿ ಬಗ್ಗೆ ಎಚ್ಚರಿಕೆ: `ಭ್ರಷ್ಟಾಚಾರದ ವಿರುದ್ಧ ಭಾರತ (ಐಎಸಿ) ಸಂಘಟನೆಯ ಸದಸ್ಯರೆಂದು ಹೇಳಿಕೊಂಡ ಕೆಲವರು ನನ್ನ ಮತ್ತು ಪ್ರಶಾಂತ್ ಭೂಷಣ್ ಪರಿಚಯ ಹೇಳಿಕೊಂಡುವ ಹಣ ವಸೂಲಿ ಮಾಡುತ್ತಿರುವ ಮಾಹಿತಿ ಬಂದಿದೆ. ನಾವು ಯಾವುದೇ ವ್ಯಕ್ತಿಗಳಿಗೂ ಹಣ ಸಂಗ್ರಹಕ್ಕೆ ಸೂಚಿಸಿಲ್ಲ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಹಣ ನೀಡಬಾರದು~ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>