<p>ಬೆಂಗಳೂರು: ‘ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಬಡ ಮಕ್ಕಳ ಚಿಕಿತ್ಸೆಗೆ ನೆರವಾಗಲು ಡಿ.20ರಂದು ನಗರದ ಯವನಿಕ ಸಭಾಂಗಣದಲ್ಲಿ ‘ಮ್ಯೂಸಿಕ್ ಹೀಲ್ಸ್’ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಸ್ಮೈಲಿ ಚೈಲ್ಡ್ಹುಡ್ ಕ್ಯಾನ್ಸರ್ ಫೌಂಡೇಷನ್ ಸಂಸ್ಥಾಪಕಿ ಶಾಲ್ಮಲಿ ಸುರೇಶ್ ತಿಳಿಸಿದರು.<br /> <br /> ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಸಂಗೀತ ಕಾರ್ಯಕ್ರಮದಿಂದ ಸಂಗ್ರಹವಾಗುವ ಹಣವನ್ನು ಕ್ಯಾನ್ಸರ್ ಪೀಡಿತ ಬಡ ಮಕ್ಕಳ ಚಿಕಿತ್ಸೆಗಾಗಿ ನಗರದ ಸೆಂಟ್ ಜಾನ್ಸ್ ಆಸ್ಪತ್ರೆಯ ಕ್ಯಾನ್ಸರ್ ಚಿಕಿತ್ಸಾ ವಿಭಾಗಕ್ಕೆ ನೀಡಲಾಗುವುದು’ ಎಂದರು.<br /> <br /> ‘ಸಮಾಜದಲ್ಲಿ ಪ್ರತಿಯೊಬ್ಬರು ಬಡ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ತಮಗೆ ಸಾಧ್ಯವಾದ ಸಹಾಯ ಮಾಡಬೇಕು. ನಾವು ನಮ್ಮಲ್ಲಿರುವ ಸಂಗೀತ ಪ್ರತಿಭೆಯನ್ನು ಬಳಸಿಕೊಂಡು ಅವರಿಗೆ ಸಹಾಯ ಮಾಡಲು ಈ ಕಾರ್ಯಕ್ರಮ ಆಯೋಜಿಸಿದ್ದೇವೆ’ ಎಂದು ಹೇಳಿದರು.<br /> <br /> ಸಂಗೀತ ಕಾರ್ಯಕ್ರಮದ ಟಿಕೆಟ್ ದರ ₨ 100 ರೂ ಆಗಿದ್ದು. ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬಡ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ನೇರವಾಗಬೇಕು ಎಂದು ಅವರು ಮನವಿ ಮಾಡಿದರು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 94496 38164.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಬಡ ಮಕ್ಕಳ ಚಿಕಿತ್ಸೆಗೆ ನೆರವಾಗಲು ಡಿ.20ರಂದು ನಗರದ ಯವನಿಕ ಸಭಾಂಗಣದಲ್ಲಿ ‘ಮ್ಯೂಸಿಕ್ ಹೀಲ್ಸ್’ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಸ್ಮೈಲಿ ಚೈಲ್ಡ್ಹುಡ್ ಕ್ಯಾನ್ಸರ್ ಫೌಂಡೇಷನ್ ಸಂಸ್ಥಾಪಕಿ ಶಾಲ್ಮಲಿ ಸುರೇಶ್ ತಿಳಿಸಿದರು.<br /> <br /> ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಸಂಗೀತ ಕಾರ್ಯಕ್ರಮದಿಂದ ಸಂಗ್ರಹವಾಗುವ ಹಣವನ್ನು ಕ್ಯಾನ್ಸರ್ ಪೀಡಿತ ಬಡ ಮಕ್ಕಳ ಚಿಕಿತ್ಸೆಗಾಗಿ ನಗರದ ಸೆಂಟ್ ಜಾನ್ಸ್ ಆಸ್ಪತ್ರೆಯ ಕ್ಯಾನ್ಸರ್ ಚಿಕಿತ್ಸಾ ವಿಭಾಗಕ್ಕೆ ನೀಡಲಾಗುವುದು’ ಎಂದರು.<br /> <br /> ‘ಸಮಾಜದಲ್ಲಿ ಪ್ರತಿಯೊಬ್ಬರು ಬಡ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ತಮಗೆ ಸಾಧ್ಯವಾದ ಸಹಾಯ ಮಾಡಬೇಕು. ನಾವು ನಮ್ಮಲ್ಲಿರುವ ಸಂಗೀತ ಪ್ರತಿಭೆಯನ್ನು ಬಳಸಿಕೊಂಡು ಅವರಿಗೆ ಸಹಾಯ ಮಾಡಲು ಈ ಕಾರ್ಯಕ್ರಮ ಆಯೋಜಿಸಿದ್ದೇವೆ’ ಎಂದು ಹೇಳಿದರು.<br /> <br /> ಸಂಗೀತ ಕಾರ್ಯಕ್ರಮದ ಟಿಕೆಟ್ ದರ ₨ 100 ರೂ ಆಗಿದ್ದು. ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬಡ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ನೇರವಾಗಬೇಕು ಎಂದು ಅವರು ಮನವಿ ಮಾಡಿದರು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 94496 38164.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>