<p><strong>ಬೆಂಗಳೂರು: </strong>‘ಪ್ರತಿ ಶಾಲೆಯಲ್ಲಿ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳನ್ನು ಹೇಳಿಕೊಡಬೇಕು. ಅದರಿಂದ ಮಕ್ಕಳು ದೈಹಿಕ ಹಾಗೂ ಮಾನಸಿಕ ಸದೃಢರಾಗುತ್ತಾರೆ’ ಎಂದು ಭಾರತೀಯ ಥ್ರೊಬಾಲ್ ತಂಡದ ನಾಯಕಿ ಜಿ.ಪಿ. ಕೃಪಾ ಸಲಹೆ ನೀಡಿದರು.</p>.<p>ಮಹದೇವಪುರ ಕ್ಷೇತ್ರದ ಗೆದ್ದಲಹಳ್ಳಿಯಲ್ಲಿನ ನ್ಯೂ ಬಾಲ್ಡ್ವಿನ್ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಕ್ಷಕರು ಹಾಗೂ ಪೋಷಕರು ಮಕ್ಕಳಿಗೆ ಓದುವುದಕ್ಕೆ ಒತ್ತಾಯ ಮಾಡುವಂತೆಯೇ ಕ್ರೀಡೆಯಲ್ಲಿ ಭಾಗವಹಿಸು ಎಂದೂ ಹೇಳಬೇಕು. ಹಾಗಾದಾಗ ಮಾತ್ರ ಮಕ್ಕಳು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ’ ಎಂದರು.</p>.<p>‘ಮಕ್ಕಳು ಹೆಚ್ಚು ಹೊತ್ತು ಕಂಪ್ಯೂಟರ್ ಮುಂದೆ ಕುಳಿತುಕೊಳ್ಳುವುದನ್ನೇ ಈಗಿನ ಪೋಷಕರು ಹೆಚ್ಚು ಇಷ್ಟಪಡುತ್ತಾರೆ. ಮಕ್ಕಳು ಕೇವಲ ಪುಸ್ತಕದ ಹುಳುಗಳಾದರೆ ದೈಹಿಕವಾಗಿ ಬಲಹೀನರಾಗುತ್ತಾರೆ. ಅಲ್ಲದೆ, ಸಾಮಾಜಿಕವಾಗಿ ತೆರೆದುಕೊಳ್ಳಲು ಸಾಧ್ಯವಾಗುವುದಿಲ್ಲ’ ಎಂದು ಎಚ್ಚರಿಸಿದರು.</p>.<p>ಶೈಕ್ಷಣಿಕ ನಿರ್ದೇಶಕಿ ರಮಾದೇವಿ ಹಾಗೂ ಕಾರ್ಯದರ್ಶಿ ಕೆ.ಆಂಜನಪ್ಪ ಅವರು ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.<br /> ಕಳೆದ ವರ್ಷ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದವರಿಗೆ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಪ್ರತಿ ಶಾಲೆಯಲ್ಲಿ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳನ್ನು ಹೇಳಿಕೊಡಬೇಕು. ಅದರಿಂದ ಮಕ್ಕಳು ದೈಹಿಕ ಹಾಗೂ ಮಾನಸಿಕ ಸದೃಢರಾಗುತ್ತಾರೆ’ ಎಂದು ಭಾರತೀಯ ಥ್ರೊಬಾಲ್ ತಂಡದ ನಾಯಕಿ ಜಿ.ಪಿ. ಕೃಪಾ ಸಲಹೆ ನೀಡಿದರು.</p>.<p>ಮಹದೇವಪುರ ಕ್ಷೇತ್ರದ ಗೆದ್ದಲಹಳ್ಳಿಯಲ್ಲಿನ ನ್ಯೂ ಬಾಲ್ಡ್ವಿನ್ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಕ್ಷಕರು ಹಾಗೂ ಪೋಷಕರು ಮಕ್ಕಳಿಗೆ ಓದುವುದಕ್ಕೆ ಒತ್ತಾಯ ಮಾಡುವಂತೆಯೇ ಕ್ರೀಡೆಯಲ್ಲಿ ಭಾಗವಹಿಸು ಎಂದೂ ಹೇಳಬೇಕು. ಹಾಗಾದಾಗ ಮಾತ್ರ ಮಕ್ಕಳು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ’ ಎಂದರು.</p>.<p>‘ಮಕ್ಕಳು ಹೆಚ್ಚು ಹೊತ್ತು ಕಂಪ್ಯೂಟರ್ ಮುಂದೆ ಕುಳಿತುಕೊಳ್ಳುವುದನ್ನೇ ಈಗಿನ ಪೋಷಕರು ಹೆಚ್ಚು ಇಷ್ಟಪಡುತ್ತಾರೆ. ಮಕ್ಕಳು ಕೇವಲ ಪುಸ್ತಕದ ಹುಳುಗಳಾದರೆ ದೈಹಿಕವಾಗಿ ಬಲಹೀನರಾಗುತ್ತಾರೆ. ಅಲ್ಲದೆ, ಸಾಮಾಜಿಕವಾಗಿ ತೆರೆದುಕೊಳ್ಳಲು ಸಾಧ್ಯವಾಗುವುದಿಲ್ಲ’ ಎಂದು ಎಚ್ಚರಿಸಿದರು.</p>.<p>ಶೈಕ್ಷಣಿಕ ನಿರ್ದೇಶಕಿ ರಮಾದೇವಿ ಹಾಗೂ ಕಾರ್ಯದರ್ಶಿ ಕೆ.ಆಂಜನಪ್ಪ ಅವರು ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.<br /> ಕಳೆದ ವರ್ಷ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದವರಿಗೆ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>