<p>ಬೆಂಗಳೂರು: `ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪತ್ರಕರ್ತರು ಹೆಚ್ಚು ಲೇಖನಗಳನ್ನು ಬರೆಯಬೇಕು~ ಎಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಕೃಷ್ಣ ಸಲಹೆ ನೀಡಿದರು. <br /> <br /> ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಡಿ. ಮಹಾದೇವಪ್ಪ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. <br /> <br /> `ಕೃಷಿ ಸಾಲ ಹಾಗೂ ಬೆಳೆ ಹಾನಿ ಮಾತ್ರ ರೈತರ ಆತ್ಮಹತ್ಯೆಗೆ ಕಾರಣ ಅಲ್ಲ. ಮದುವೆ ಸೇರಿದಂತೆ ಆಡಂಬರದ ಕಾರ್ಯಕ್ರಮಗಳಿಗೆ ಸಾಲ ಮಾಡುವ ಪ್ರವೃತ್ತಿ ರೈತರಲ್ಲಿ ಹೆಚ್ಚುತ್ತಿದೆ. ಬಳಿಕ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪತ್ರಕರ್ತರ ಲೇಖನಗಳು ರೈತರಲ್ಲಿ ಜಾಗೃತಿ ಮೂಡಿಸಬೇಕು~ ಎಂದರು. <br /> <br /> ಡೆಕ್ಕನ್ಹೆರಾಲ್ಡ್ ಪತ್ರಿಕೆಯ ಹಿರಿಯ ವರದಿಗಾರ ಬಿ.ಆರ್. ರೋಹಿತ್ ಅಧ್ಯಕ್ಷತೆ ವಹಿಸಿದ್ದರು. ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಎಸ್.ವಿ.ಜಯಶೀಲ ರಾವ್, ಖಾದ್ರಿ ಶಾಮಣ್ಣ ಟ್ರಸ್ಟ್ ಅಧ್ಯಕ್ಷೆ ವಿಜಯಾ ನಾರಾಯಣ್, ಸುಮನಾ ಖಾದ್ರಿ ಶಾಮಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪತ್ರಕರ್ತರು ಹೆಚ್ಚು ಲೇಖನಗಳನ್ನು ಬರೆಯಬೇಕು~ ಎಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಕೃಷ್ಣ ಸಲಹೆ ನೀಡಿದರು. <br /> <br /> ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಡಿ. ಮಹಾದೇವಪ್ಪ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. <br /> <br /> `ಕೃಷಿ ಸಾಲ ಹಾಗೂ ಬೆಳೆ ಹಾನಿ ಮಾತ್ರ ರೈತರ ಆತ್ಮಹತ್ಯೆಗೆ ಕಾರಣ ಅಲ್ಲ. ಮದುವೆ ಸೇರಿದಂತೆ ಆಡಂಬರದ ಕಾರ್ಯಕ್ರಮಗಳಿಗೆ ಸಾಲ ಮಾಡುವ ಪ್ರವೃತ್ತಿ ರೈತರಲ್ಲಿ ಹೆಚ್ಚುತ್ತಿದೆ. ಬಳಿಕ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪತ್ರಕರ್ತರ ಲೇಖನಗಳು ರೈತರಲ್ಲಿ ಜಾಗೃತಿ ಮೂಡಿಸಬೇಕು~ ಎಂದರು. <br /> <br /> ಡೆಕ್ಕನ್ಹೆರಾಲ್ಡ್ ಪತ್ರಿಕೆಯ ಹಿರಿಯ ವರದಿಗಾರ ಬಿ.ಆರ್. ರೋಹಿತ್ ಅಧ್ಯಕ್ಷತೆ ವಹಿಸಿದ್ದರು. ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಎಸ್.ವಿ.ಜಯಶೀಲ ರಾವ್, ಖಾದ್ರಿ ಶಾಮಣ್ಣ ಟ್ರಸ್ಟ್ ಅಧ್ಯಕ್ಷೆ ವಿಜಯಾ ನಾರಾಯಣ್, ಸುಮನಾ ಖಾದ್ರಿ ಶಾಮಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>