ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಸಮಿತಿಯ ಅಧ್ಯಕ್ಷ ಎಚ್.ಮಾರಪ್ಪ, ‘ಬಿಬಿಎಂಪಿ ಯಲಹಂಕ ವಲಯ ವ್ಯಾಪ್ತಿಯ ಅಂಬೇಡ್ಕರ್ ನಗರ, ಕೊಂಡಪ್ಪ ಬಡಾವಣೆ, ಕೋಗಿಲು ಬಡಾವಣೆ, ಫಕೀರ್ ಲೇಔಟ್, ಜೈಭೀಮ್ ನಗರ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ನಗರಗಳಲ್ಲಿ ಪರಿಶಿಷ್ಟಜಾತಿ-ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಜನಾಂಗಕ್ಕೆ ಸೇರಿದವರೇ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಈ ಪ್ರದೇಶಗಳಲ್ಲಿ ಕೊಳವೆಬಾವಿಗಳಿದ್ದರೂ ನೀರು ಸಾಕಾಗುತ್ತಿಲ್ಲ. ಕೆಲವು ಬಡಾವಣೆಗಳಲ್ಲಿ ಕಾವೇರಿ ನೀರಿನ ವ್ಯವಸ್ಥೆ ಕಲ್ಪಿಸಿಲ್ಲ. ಕೊಳವೆ ಬಾವಿಗಳು ಕೆಟ್ಟು ಹಲವು ತಿಂಗಳುಗಳು ಕಳೆದರೂ ಅಧಿಕಾರಿಗಳು ದುರಸ್ತಿ ಮಾಡಿಸಿಲ್ಲ’ ಎಂದರು.