ಶ್ರೀನಿವಾಸಪುರದವನೇ ಆದ ಆರೋಪಿ ಶ್ರೀನಿವಾಸ್, ಕೆಎಸ್ಆರ್ಟಿಸಿ ಬಸ್ ಚಾಲಕ. ಕೆ.ಜಿ.ಎಫ್ ಡಿಪೊದಲ್ಲಿ ಕೆಲಸ ಮಾಡುತ್ತಿದ್ದ. ಈ ಆರೋಪಿ ಹಾಗೂ ಮೃತರು, ಒಂದೇ ತಾಲ್ಲೂಕಿನವರಾಗಿದ್ದರಿಂದ ಪರಸ್ಪರ ಪರಿಚಯವಿತ್ತು. ಆಗಾಗ ಮನೆಗೂ ಬಂದು ಹೋಗುತ್ತಿದ್ದ ಆರೋಪಿ, ಪತ್ನಿಯ ಪರಿಚಯ ಮಾಡಿಕೊಂಡಿದ್ದ. ನಂತರ, ಅವರಿಬ್ಬರ ನಡುವೆ ಸ್ನೇಹ ಏರ್ಪಟ್ಟು ಸಲುಗೆ ಬೆಳೆದಿತ್ತು.