ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಮಾಳದಲ್ಲಿ ಬಡಾವಣೆ ನಿರ್ಮಾಣ; ಆರೋಪ

Last Updated 12 ಜೂನ್ 2019, 19:45 IST
ಅಕ್ಷರ ಗಾತ್ರ

ಮಹದೇವಪುರ: ಬಿದರಹಳ್ಳಿ ಹೋಬಳಿಯ ಚೀಮಸಂದ್ರ ಗ್ರಾಮದ ಸರ್ವೆ ನಂ.77ರ ಗೋಮಾಳದಲ್ಲಿ ರಾಜಕೀಯ ಮುಖಂಡರೊಬ್ಬರು ಅನಧಿಕೃತವಾಗಿ ಬಡಾವಣೆ ನಿರ್ಮಿಸುತ್ತಿದ್ದಾರೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

‘ಸರ್ವೆ ನಂ.77ರಲ್ಲಿ ಒಟ್ಟು 154 ಎಕರೆ 11 ಗುಂಟೆ ಜಾಗವಿದೆ. ಈ ಜಾಗ ಗೋಮಾಳ. ಈ ಜಾಗದಲ್ಲಿ ಸ್ಥಳೀಯ ರಾಜಕೀಯ ಮುಖಂಡರು ರಾಜಾರೋಷವಾಗಿ ಬಡಾವಣೆ ನಿರ್ಮಿಸುತ್ತಿದ್ದಾರೆ. ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಸ್ಥಳೀಯ ಬಿಜೆಪಿ ಮುಖಂಡ ರಾಜಣ್ಣ ಆಗ್ರಹಿಸಿದರು.

‘ಗೋಮಾಳದಲ್ಲಿ 40 ಅಡಿ ಅಗಲದ ರಸ್ತೆ ನಿರ್ಮಿಸಲು ಜಾಗ ಕಾಯ್ದಿರಿಸುವಂತೆ 2007ರಲ್ಲಿ ಜಿಲ್ಲಾಧಿಕಾರಿ ಆದೇಶಿಸಿದ್ದರು. ಆದರೆ, ಈ ಜಾಗದಲ್ಲೇ ಬಡಾವಣೆ ನಿರ್ಮಾಣವಾಗುತ್ತಿದೆ’ ಎಂದು ಅವರು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT