<p><strong>ಬೆಂಗಳೂರು:</strong> ರಾಜ್ಯ ಉನ್ನತ ಶಿಕ್ಷಣ ಪರಿಷತ್ ಪುನರ್ರಚನೆ ವಿಳಂಬ ಆಗುತ್ತಿರುವುದಕ್ಕೆ ಕೇಂದ್ರ ಪೆಟ್ರೋ ಲಿಯಂ ಸಚಿವ ಎಂ.ವೀರಪ್ಪಮೊಯಿಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<br /> <br /> ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಸಂಜೆ ಸಿದ್ದ ರಾಮಯ್ಯ ಅವರನ್ನು ಭೇಟಿ ಮಾಡಿದ ಮೊಯಿಲಿ ಈ ಬಗ್ಗೆ ಮಾತು ಕತೆ ನಡೆಸಿ ದರು ಎಂದು ಮೂಲಗಳು ತಿಳಿಸಿವೆ.<br /> <br /> ಸುಮಾರು 15 ನಿಮಿಷಕ್ಕೂ ಹೆಚ್ಚು ಕಾಲ ಇಬ್ಬರೂ ಚರ್ಚಿಸಿದ್ದು, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷರ ನೇಮಕ ವಿಚಾರವೂ ಸಹ ಪ್ರಸ್ತಾಪವಾಗಿದೆ. ವಿಶ್ರಾಂತ ಕುಲಪತಿಯೊಬ್ಬರ ಹೆಸರನ್ನು ಈ ಹುದ್ದೆಗೆ ತಾವು ಶಿಫಾರಸು ಮಾಡಿ ಆರು ತಿಂಗಳಾದರೂ, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಜ ನೀಶ್ ಗೋಯಲ್ ಅವರು ಆದೇಶ ಹೊರಡಿಸಿಲ್ಲ ಎಂಬುದಾಗಿ ಮೊಯಿಲಿ ಅತೃಪ್ತಿ ಸೂಚಿಸಿದರು.<br /> <br /> ‘ಗೋಯಲ್ ಕೇಂದ್ರ ಸಚಿವರಾದ ನಮ್ಮ ಪತ್ರಗಳಿಗೂ ಬೆಲೆ ನೀಡುತ್ತಿಲ್ಲ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ’ ಎಂಬ ಬೇಡಿಕೆ ಮಾತುಕತೆ ವೇಳೆ ಮುಂದಿಟ್ಟಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಉನ್ನತ ಶಿಕ್ಷಣ ಪರಿಷತ್ ಪುನರ್ರಚನೆ ವಿಳಂಬ ಆಗುತ್ತಿರುವುದಕ್ಕೆ ಕೇಂದ್ರ ಪೆಟ್ರೋ ಲಿಯಂ ಸಚಿವ ಎಂ.ವೀರಪ್ಪಮೊಯಿಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<br /> <br /> ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಸಂಜೆ ಸಿದ್ದ ರಾಮಯ್ಯ ಅವರನ್ನು ಭೇಟಿ ಮಾಡಿದ ಮೊಯಿಲಿ ಈ ಬಗ್ಗೆ ಮಾತು ಕತೆ ನಡೆಸಿ ದರು ಎಂದು ಮೂಲಗಳು ತಿಳಿಸಿವೆ.<br /> <br /> ಸುಮಾರು 15 ನಿಮಿಷಕ್ಕೂ ಹೆಚ್ಚು ಕಾಲ ಇಬ್ಬರೂ ಚರ್ಚಿಸಿದ್ದು, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷರ ನೇಮಕ ವಿಚಾರವೂ ಸಹ ಪ್ರಸ್ತಾಪವಾಗಿದೆ. ವಿಶ್ರಾಂತ ಕುಲಪತಿಯೊಬ್ಬರ ಹೆಸರನ್ನು ಈ ಹುದ್ದೆಗೆ ತಾವು ಶಿಫಾರಸು ಮಾಡಿ ಆರು ತಿಂಗಳಾದರೂ, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಜ ನೀಶ್ ಗೋಯಲ್ ಅವರು ಆದೇಶ ಹೊರಡಿಸಿಲ್ಲ ಎಂಬುದಾಗಿ ಮೊಯಿಲಿ ಅತೃಪ್ತಿ ಸೂಚಿಸಿದರು.<br /> <br /> ‘ಗೋಯಲ್ ಕೇಂದ್ರ ಸಚಿವರಾದ ನಮ್ಮ ಪತ್ರಗಳಿಗೂ ಬೆಲೆ ನೀಡುತ್ತಿಲ್ಲ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ’ ಎಂಬ ಬೇಡಿಕೆ ಮಾತುಕತೆ ವೇಳೆ ಮುಂದಿಟ್ಟಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>