‘ಮುಖ್ಯಮಂತ್ರಿ ಭೇಟಿಯ ಹಿನ್ನೆಲೆಯಲ್ಲಿ ಬಂದೋಬಸ್ತಿಗೆ ಹೆಚ್ಚಿನ ಪೊಲೀಸರು ಬೇರೆಡೆಗೆ ತೆರಳಿದ್ದ ಸಂದರ್ಭ ದಲ್ಲಿ ಈ ಘಟನೆ ನಡೆದಿದ್ದು, ಠಾಣೆಯ
ಲ್ಲಿದ್ದ ಮೂರ್ನಾಲ್ಕು ಪೊಲೀಸರಿಗೆ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗಲಿಲ್ಲ. ಇದೇ ಸಂದರ್ಭದಲ್ಲಿ ವಿದ್ಯುತ್ ಕಡಿತಗೊಂಡಿದ್ದರಿಂದ ಎಲ್ಲಿ ಏನಾಗುತ್ತಿದೆ ಎಂಬುದು ತಿಳಿಯಲಿಲ್ಲ. ನಂತರ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಧಾವಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.