ಅದೇ ವೇಳೆಗೆ ಆಟೊದಲ್ಲಿ ಬಂದ ಸಾದಿಕ್, ಗುಣಗಾರ್ ಅವರ ಬೈಕ್ಗೆ ವಾಹನ ಗುದ್ದಿಸಿದರು. ಇದರಿಂದ ಪರಸ್ಪರರ ನಡುವೆ ಮಾತಿನ ಚಕಮಕಿ ನಡೆದು ಗುಣಗಾರ್, ಸಾದಿಕ್ ತಲೆಗೆ ವಾಕಿ ಟಾಕಿಯಿಂದ ಹೊಡೆದರು. ಪರಿಣಾಮ ಅವರ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾಯಿತು.
ಕಾನ್ಸ್ಟೇಬಲ್ ವರ್ತನೆಯಿಂದ ಕೋಪಗೊಂಡ ಆಟೊ ಚಾಲಕರು ಪ್ರತಿಭಟನೆ ಮಾಡಿದರು. ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಬಂದು ಪ್ರತಿಭಟನಾಕಾರರ ಮನವೊಲಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
ಗಾಯಾಳು ಸಾದಿಕ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ಅವರು ಯಾವುದೇ ದೂರು ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.