ಕೆರೆಯ ಪಕ್ಕ ಶುದ್ಧೀಕರಣ ಘಟಕ ಸ್ಥಾಪನೆ ಮಾಡಿ ಕೊಳಚೆ ನೀರು ಬಿಡುವುದನ್ನು ನಿಯಂತ್ರಿಸಿ ಅಪಾರ್ಟ್ಮೆಂಟ್ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
‘ಕೆರೆ ಅಭಿವೃದ್ಧಿ ಪ್ರಾಧಿಕಾರ ತಕ್ಷಣ ಕೆರೆಯ ರಕ್ಷಣೆಗೆ ಮುಂದಾಗಬೇಕು. ಇಲ್ಲದಿದ್ದರೆ ಪುರಾತನ ಕೆರೆ ನಾಶವಾಗಿ ಕೊಳಚೆ ಹೊಂಡವಾಗಿ ಪರಿವರ್ತನೆ ಹೊಂದುತ್ತದೆ’ ಎಂದು ಸ್ಥಳೀಯ ನಿವಾಸಿ ಬಿ.ಎಲ್.ಎನ್.ಸಿಂಹ ಎಚ್ಚರಿಸಿದರು.