<p><strong>ಕನಕಪುರ: </strong>ಸಾತನೂರು ಅರಣ್ಯ ವ್ಯಾಪ್ತಿಯ ಕರಿಯಣ್ಣನ ದೊಡ್ಡಿ ಗ್ರಾಮದಲ್ಲಿ ಚಿರತೆ ಚರ್ಮ ಮಾರಾಟ ಮಾಡುತ್ತಿದ್ದ ತಂಡದ ಮೇಲೆ ಮಂಗಳವಾರ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸ್ದ್ದಿದು ಚಿರತೆಯ ಚರ್ಮ ವಶಪಡಿಸಿಕೊಂಡಿದ್ದಾರೆ.<br /> <br /> ಚಿರತೆಗಳನ್ನು ಬೇಟೆಯಾಡಿ ಕೊಂದು ಚರ್ಮ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಚರ್ಮವನ್ನು ಕೊಳ್ಳುವವರಂತೆ ನಟಿಸಿ ಜಗದೀಶನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಯೋಗೇಶ ಪರಾರಿಯಾಗಿದ್ದಾನೆ. ಈತ ದೊಡ್ಡ ಆಲಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದಾನೆ.<br /> <br /> ಸಂಗಮ-ಮುತ್ತತ್ತಿ ಅರಣ್ಯ ಪ್ರದೇಶವಾಗಿರುವುದರಿಂದ ವ್ಯವಸ್ಥಿತ ಜಾಲವೊಂದು ಕಾಡು ಪ್ರಾಣಿಗಳನ್ನು ಬೇಟೆಯಾಡಿ ಕೊಂದು ಚರ್ಮ ಮಾರಾಟ ಮಾಡುವ ದಂದೆಯಲ್ಲಿ ತೊಡಗಿದೆ. ಇದರ ಹಿಂದೆ ದೊಡ್ಡ ಜಾಲವಿದೆ ಎಂದು ಶಂಕಿಸಲಾಗಿದೆ. <br /> <br /> ಕಾರ್ಯಾಚರಣೆಯಲ್ಲಿ ಬೆಂಗಳೂರು ಅರಣ್ಯ ಸಂಚಾರಿದಳ ಮತ್ತು ಸಾತನೂರು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ: </strong>ಸಾತನೂರು ಅರಣ್ಯ ವ್ಯಾಪ್ತಿಯ ಕರಿಯಣ್ಣನ ದೊಡ್ಡಿ ಗ್ರಾಮದಲ್ಲಿ ಚಿರತೆ ಚರ್ಮ ಮಾರಾಟ ಮಾಡುತ್ತಿದ್ದ ತಂಡದ ಮೇಲೆ ಮಂಗಳವಾರ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸ್ದ್ದಿದು ಚಿರತೆಯ ಚರ್ಮ ವಶಪಡಿಸಿಕೊಂಡಿದ್ದಾರೆ.<br /> <br /> ಚಿರತೆಗಳನ್ನು ಬೇಟೆಯಾಡಿ ಕೊಂದು ಚರ್ಮ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಚರ್ಮವನ್ನು ಕೊಳ್ಳುವವರಂತೆ ನಟಿಸಿ ಜಗದೀಶನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಯೋಗೇಶ ಪರಾರಿಯಾಗಿದ್ದಾನೆ. ಈತ ದೊಡ್ಡ ಆಲಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದಾನೆ.<br /> <br /> ಸಂಗಮ-ಮುತ್ತತ್ತಿ ಅರಣ್ಯ ಪ್ರದೇಶವಾಗಿರುವುದರಿಂದ ವ್ಯವಸ್ಥಿತ ಜಾಲವೊಂದು ಕಾಡು ಪ್ರಾಣಿಗಳನ್ನು ಬೇಟೆಯಾಡಿ ಕೊಂದು ಚರ್ಮ ಮಾರಾಟ ಮಾಡುವ ದಂದೆಯಲ್ಲಿ ತೊಡಗಿದೆ. ಇದರ ಹಿಂದೆ ದೊಡ್ಡ ಜಾಲವಿದೆ ಎಂದು ಶಂಕಿಸಲಾಗಿದೆ. <br /> <br /> ಕಾರ್ಯಾಚರಣೆಯಲ್ಲಿ ಬೆಂಗಳೂರು ಅರಣ್ಯ ಸಂಚಾರಿದಳ ಮತ್ತು ಸಾತನೂರು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>