<p><strong>ಬೆಂಗಳೂರು: </strong>ಚುನಾವಣಾ ಸಂಬಂಧಿತ ಎಲ್ಲ ಮಾಹಿತಿ ಪಡೆಯಲು ಹಾಗೂ ದೂರುಗಳನ್ನು ಸಲ್ಲಿಸಲು ಬೆಂಗಳೂರು ನಗರ ಜಿಲ್ಲಾಡಳಿತವು ಕಂದಾಯ<br /> ಭವನದಲ್ಲಿ ಸಹಾಯವಾಣಿ ಕೇಂದ್ರ ತೆರೆದಿದೆ.</p>.<p>ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ನೇತೃತ್ವದಲ್ಲಿ ಗುರುವಾರ ಇದಕ್ಕೆ ಚಾಲನೆ ನೀಡಲಾಯಿತು. ಆನೇಕಲ್, ಬೆಂಗಳೂರು ದಕ್ಷಿಣ, ಮಹದೇವಪುರ, ಬ್ಯಾಟರಾಯನಪುರ, ಯಲಹಂಕ, ದಾಸರಹಳ್ಳಿ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಪಟ್ಟ ದೂರುಗಳನ್ನು ಸಾರ್ವಜನಿಕರು ಇಲ್ಲಿ ಸಲ್ಲಿಸಬಹುದು.</p>.<p>ದಿನದ 24 ಗಂಟೆಗಳೂ ಈ ಕೇಂದ್ರ ಕಾರ್ಯನಿರ್ವಹಿಸಲಿದೆ. ಪ್ರತಿ ಪಾಳಿಯಲ್ಲಿ ಮೂವರು ಸಿಬ್ಬಂದಿ ಇರಲಿದ್ದು, ಅವರಿಗೆ ಕಂಪ್ಯೂಟರ್ ಹಾಗೂ ಸ್ಥಿರ ದೂರವಾಣಿಗಳನ್ನು ಒದಗಿಸಲಾಗಿದೆ. ಮೂರು ದೊಡ್ಡ ಟಿ.ವಿಗಳನ್ನು ಕೇಂದ್ರದಲ್ಲಿ ಅಳವಡಿಸಲಾಗಿದೆ.</p>.<p>‘ಸಾರ್ವಜನಿಕರು ದೂರು ಸಲ್ಲಿಸಿದ ಕೂಡಲೇ ಸ್ಥಳೀಯ ಮಟ್ಟದ ಅಧಿಕಾರಿಗಳಿಗೆ ಮಾಹಿತಿ ನೀಡುತ್ತೇವೆ. ಅವರು ತಕ್ಷಣ ಕಾರ್ಯಪ್ರವೃತ್ತರಾಗಿ ದೂರುಗ<br /> ಳಿಗೆ ಸ್ಪಂದಿಸುತ್ತಾರೆ’ ಎಂದು ಸಹಾಯವಾಣಿ ಕೇಂದ್ರದ ಅಧಿಕಾರಿಗಳು ತಿಳಿಸಿದರು.</p>.<p>ಸಹಾಯವಾಣಿ ಸಂಖ್ಯೆ: 080–22211157 ಹಾಗೂ 18004250138.</p>.<p>ವಲಯ ಅಧಿಕಾರಿ ನೇಮಕ: ಪ್ರತಿ 20 ಮತಗಟ್ಟೆಗಳಿಗೆ ಒಬ್ಬ ಸೆಕ್ಟರ್ ಅಧಿಕಾರಿಯನ್ನು ನೇಮಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಹಾಗೂ ಇವಿಎಂಗಳ ಬಗ್ಗೆ ಸಿಬ್ಬಂದಿಗೆ ತರಬೇತಿ ನೀಡುವುದು ಅವರ ಜವಾಬ್ದಾರಿ.</p>.<p><strong>ಸಂಚಾರ ದಳ: </strong>ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕನಿಷ್ಠ ಆರು ಸಂಚಾರ ದಳಗಳನ್ನು ರಚಿಸಿ ವಾಹನಗಳನ್ನು ನೀಡಲಾಗಿದೆ. ಚುನಾವಣಾ ನಿರ್ವಹಣಾ ಕೊಠಡಿಯಿಂದ ಅವುಗಳನ್ನು ನಿರ್ವಹಿಸಲಾಗುತ್ತದೆ.ಅವುಗಳ ನಿರ್ವಹಣೆಗೆ ಚುನಾವಣಾ ಆಯೋಗ ಪ್ರತ್ಯೇಕ ಅಪ್ಲಿಕೇಶನ್ ಅಭಿವೃದ್ಧಿ ಪಡಿಸುತ್ತಿದೆ. ಪೊಲೀಸರು ಹಾಗೂ ಅಬಕಾರಿ ಅಧಿ</p>.<p>ಕಾರಿಗಳು ಅನುಮಾನಾಸ್ಪದ ವಾಹನಗಳನ್ನು ತಪಾಸಣೆ ಮಾಡಲಿದ್ದಾರೆ. ಅದಕ್ಕಾಗಿ ಹಲವೆಡೆ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ.</p>.<p>ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಒಬ್ಬ ಸಹಾಯಕ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಅವರು ಎಲ್ಲ ಟಿವಿಗಳು ಹಾಗೂ ಪತ್ರಿಕೆಗಳ ಮೇಲೆ ನಿಗಾ ಇಡುತ್ತಾರೆ. ನಿಯಮ ಉಲ್ಲಂಘಿಸಿ ಜಾಹೀರಾತು ನೀಡಿದ್ದು ಕಂಡುಬಂದರೆ ನೋಡಲ್ ಅಧಿಕಾರಿಗಳ ಗಮನಕ್ಕೆ ತರಲಿದ್ದಾರೆ ಎಂದು ದಯಾನಂದ್ ತಿಳಿಸಿದರು.</p>.<p><strong>ಶೇ 99.9 ರಷ್ಟು ಫ್ಲೆಕ್ಸ್, ಬ್ಯಾನರ್ ತೆರವು</strong></p>.<p>‘ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ತಕ್ಷಣದಿಂದಲೇ ನಗರದ ಶೇ 99 ರಷ್ಟು ಫ್ಲೆಕ್ಸ್ಗಳು, ಬ್ಯಾನರ್ಗಳು, ಗೋಡೆಗಳಿಗೆ ಅಂಟಿಸಿರುವ ರಾಜಕೀಯ ಮುಖಂಡರ ನಾಮಫಲಕಗಳು ಹಾಗೂ ಸರ್ಕಾರಿ ಜಾಹೀರಾತುಗಳನ್ನು ತೆರವುಗೊಳಿಸಿದ್ದೇವೆ’ ಎಂದು ದಯಾನಂದ್ ಹೇಳಿದರು.</p>.<p>ನೀತಿ ಸಂಹಿತೆಗೆ ವಿರುದ್ಧವಾಗಿ ನಗರದಲ್ಲಿ ಯಾವುದಾದರೂ ಜಾಹೀರಾತು, ಫ್ಲೆಕ್ಸ್ಗಳು, ಬ್ಯಾನರ್ಗಳು ಹಾಗೂ ನಾಮಫಲಕಗಳು ಹಾಕಿರುವ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ತಕ್ಷಣ ಕ್ರಮಕೈಗೊಳ್ಳಲಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಚುನಾವಣಾ ಸಂಬಂಧಿತ ಎಲ್ಲ ಮಾಹಿತಿ ಪಡೆಯಲು ಹಾಗೂ ದೂರುಗಳನ್ನು ಸಲ್ಲಿಸಲು ಬೆಂಗಳೂರು ನಗರ ಜಿಲ್ಲಾಡಳಿತವು ಕಂದಾಯ<br /> ಭವನದಲ್ಲಿ ಸಹಾಯವಾಣಿ ಕೇಂದ್ರ ತೆರೆದಿದೆ.</p>.<p>ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ನೇತೃತ್ವದಲ್ಲಿ ಗುರುವಾರ ಇದಕ್ಕೆ ಚಾಲನೆ ನೀಡಲಾಯಿತು. ಆನೇಕಲ್, ಬೆಂಗಳೂರು ದಕ್ಷಿಣ, ಮಹದೇವಪುರ, ಬ್ಯಾಟರಾಯನಪುರ, ಯಲಹಂಕ, ದಾಸರಹಳ್ಳಿ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಪಟ್ಟ ದೂರುಗಳನ್ನು ಸಾರ್ವಜನಿಕರು ಇಲ್ಲಿ ಸಲ್ಲಿಸಬಹುದು.</p>.<p>ದಿನದ 24 ಗಂಟೆಗಳೂ ಈ ಕೇಂದ್ರ ಕಾರ್ಯನಿರ್ವಹಿಸಲಿದೆ. ಪ್ರತಿ ಪಾಳಿಯಲ್ಲಿ ಮೂವರು ಸಿಬ್ಬಂದಿ ಇರಲಿದ್ದು, ಅವರಿಗೆ ಕಂಪ್ಯೂಟರ್ ಹಾಗೂ ಸ್ಥಿರ ದೂರವಾಣಿಗಳನ್ನು ಒದಗಿಸಲಾಗಿದೆ. ಮೂರು ದೊಡ್ಡ ಟಿ.ವಿಗಳನ್ನು ಕೇಂದ್ರದಲ್ಲಿ ಅಳವಡಿಸಲಾಗಿದೆ.</p>.<p>‘ಸಾರ್ವಜನಿಕರು ದೂರು ಸಲ್ಲಿಸಿದ ಕೂಡಲೇ ಸ್ಥಳೀಯ ಮಟ್ಟದ ಅಧಿಕಾರಿಗಳಿಗೆ ಮಾಹಿತಿ ನೀಡುತ್ತೇವೆ. ಅವರು ತಕ್ಷಣ ಕಾರ್ಯಪ್ರವೃತ್ತರಾಗಿ ದೂರುಗ<br /> ಳಿಗೆ ಸ್ಪಂದಿಸುತ್ತಾರೆ’ ಎಂದು ಸಹಾಯವಾಣಿ ಕೇಂದ್ರದ ಅಧಿಕಾರಿಗಳು ತಿಳಿಸಿದರು.</p>.<p>ಸಹಾಯವಾಣಿ ಸಂಖ್ಯೆ: 080–22211157 ಹಾಗೂ 18004250138.</p>.<p>ವಲಯ ಅಧಿಕಾರಿ ನೇಮಕ: ಪ್ರತಿ 20 ಮತಗಟ್ಟೆಗಳಿಗೆ ಒಬ್ಬ ಸೆಕ್ಟರ್ ಅಧಿಕಾರಿಯನ್ನು ನೇಮಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಹಾಗೂ ಇವಿಎಂಗಳ ಬಗ್ಗೆ ಸಿಬ್ಬಂದಿಗೆ ತರಬೇತಿ ನೀಡುವುದು ಅವರ ಜವಾಬ್ದಾರಿ.</p>.<p><strong>ಸಂಚಾರ ದಳ: </strong>ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕನಿಷ್ಠ ಆರು ಸಂಚಾರ ದಳಗಳನ್ನು ರಚಿಸಿ ವಾಹನಗಳನ್ನು ನೀಡಲಾಗಿದೆ. ಚುನಾವಣಾ ನಿರ್ವಹಣಾ ಕೊಠಡಿಯಿಂದ ಅವುಗಳನ್ನು ನಿರ್ವಹಿಸಲಾಗುತ್ತದೆ.ಅವುಗಳ ನಿರ್ವಹಣೆಗೆ ಚುನಾವಣಾ ಆಯೋಗ ಪ್ರತ್ಯೇಕ ಅಪ್ಲಿಕೇಶನ್ ಅಭಿವೃದ್ಧಿ ಪಡಿಸುತ್ತಿದೆ. ಪೊಲೀಸರು ಹಾಗೂ ಅಬಕಾರಿ ಅಧಿ</p>.<p>ಕಾರಿಗಳು ಅನುಮಾನಾಸ್ಪದ ವಾಹನಗಳನ್ನು ತಪಾಸಣೆ ಮಾಡಲಿದ್ದಾರೆ. ಅದಕ್ಕಾಗಿ ಹಲವೆಡೆ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ.</p>.<p>ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಒಬ್ಬ ಸಹಾಯಕ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಅವರು ಎಲ್ಲ ಟಿವಿಗಳು ಹಾಗೂ ಪತ್ರಿಕೆಗಳ ಮೇಲೆ ನಿಗಾ ಇಡುತ್ತಾರೆ. ನಿಯಮ ಉಲ್ಲಂಘಿಸಿ ಜಾಹೀರಾತು ನೀಡಿದ್ದು ಕಂಡುಬಂದರೆ ನೋಡಲ್ ಅಧಿಕಾರಿಗಳ ಗಮನಕ್ಕೆ ತರಲಿದ್ದಾರೆ ಎಂದು ದಯಾನಂದ್ ತಿಳಿಸಿದರು.</p>.<p><strong>ಶೇ 99.9 ರಷ್ಟು ಫ್ಲೆಕ್ಸ್, ಬ್ಯಾನರ್ ತೆರವು</strong></p>.<p>‘ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ತಕ್ಷಣದಿಂದಲೇ ನಗರದ ಶೇ 99 ರಷ್ಟು ಫ್ಲೆಕ್ಸ್ಗಳು, ಬ್ಯಾನರ್ಗಳು, ಗೋಡೆಗಳಿಗೆ ಅಂಟಿಸಿರುವ ರಾಜಕೀಯ ಮುಖಂಡರ ನಾಮಫಲಕಗಳು ಹಾಗೂ ಸರ್ಕಾರಿ ಜಾಹೀರಾತುಗಳನ್ನು ತೆರವುಗೊಳಿಸಿದ್ದೇವೆ’ ಎಂದು ದಯಾನಂದ್ ಹೇಳಿದರು.</p>.<p>ನೀತಿ ಸಂಹಿತೆಗೆ ವಿರುದ್ಧವಾಗಿ ನಗರದಲ್ಲಿ ಯಾವುದಾದರೂ ಜಾಹೀರಾತು, ಫ್ಲೆಕ್ಸ್ಗಳು, ಬ್ಯಾನರ್ಗಳು ಹಾಗೂ ನಾಮಫಲಕಗಳು ಹಾಕಿರುವ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ತಕ್ಷಣ ಕ್ರಮಕೈಗೊಳ್ಳಲಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>